AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಮದುವೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡ ಗೋಲ್ಡ್ ಸುರೇಶ್

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ಮತ್ತು ಗೋಲ್ಡ್ ಸುರೇಶ್ ನಡುವೆ ಬೆಳೆದ ಆತ್ಮೀಯ ಬಾಂಧವ್ಯ ಮನೆಯಿಂದ ಹೊರಗೂ ಮುಂದುವರೆದಿದೆ. ಸುರೇಶ್ ಅವರು ಹನುಮಂತ ಅವರನ್ನು ಅಳಿಯ ಎಂದು ಕರೆದು, ಅವರ ಮದುವೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಹನುಮಂತನ ಮದುವೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡ ಗೋಲ್ಡ್ ಸುರೇಶ್
ಸುರೇಶ್​-ಹನುಮಂತ
ರಾಜೇಶ್ ದುಗ್ಗುಮನೆ
|

Updated on: Dec 21, 2024 | 5:36 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಹಾಗೂ ಗೋಲ್ಡ್ ಸುರೇಶ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಸುರೇಶ್ ಅವರನ್ನು ಹನುಮಂತ ಅವರು ಮಾವ ಎಂದು ಕರೆದರೆ, ಹನುಮಂತ ಅವರನ್ನು ಸುರೇಶ್ ಅಳಿಯ ಎನ್ನುತ್ತಿದ್ದರು. ಈ ಬಾಂಧವ್ಯ ಹೊರಗೂ ಮುಂದುವರಿದಿದೆ. ಈಗ ಸುರೇಶ್ ಅವರು ಹನುಮಂತ ಅವರ ಮದುವೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಬಿಗ್ ಬಾಸ್​ಗೆ ಮೊದಲ ದಿನವೇ ಎಂಟ್ರಿ ಕೊಟ್ಟವರು ಗೋಲ್ಡ್ ಸುರೇಶ್. ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿತ್ತು. ಈ ಗೆಳೆತನವನ್ನು ಮನೆಯಿಂದ ಹೊರಗೂ ಮುಂದುವರಿಸಲು ಅವರು ನಿರ್ಧರಿಸಿದ್ದಾರೆ. ಈಗ ಹನುಮಂತ ಅವರ ಮದುವೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ.

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಬಾರಿ ಮದುವೆ ವಿಚಾರ ಹೇಳಿಕೊಂಡಿದ್ದಾರೆ. ದೊಡ್ಮನೆಯಿಂದ ಹೊರ ಬಂದ ಬಳಿಕ ಅವರು ಮದುವೆ ಆಗುವ ಪ್ಲ್ಯಾನ್​ನಲ್ಲಿ ಇದ್ದಾರೆ. ಈ ವಿವಾಹವನ್ನು ತಾವೇ ಮಾಡೋದಾಗಿ ಗೋಲ್ಡ್ ಸುರೇಶ್ ಹೇಳಿದ್ದಾರೆ. ಈ ವಿಚಾರ ಅನೇಕರಿಗೆ ಅಚ್ಚರಿ ತರಿಸಿದೆ.

‘ಹನುಮಂತ ನನ್ನ ಅಳಿಯ. ನನ್ನ ಪ್ರೀತಿ ಯಾವಾಗಲೂ ಅವನ ಮೇಲೆ ಇರುತ್ತದೆ. ಅವನು ಚೈನ್ ಕೇಳಿದ್ದ. ಅದನ್ನು ಕೊಟ್ಟೆ. ಆ ಬಳಿಕ ಮರಳಿ ಕೊಟ್ಟಿದ್ದಾನೆ. ಅವನ ಮದುವೆಯನ್ನು ನಾನೇ ಮಾಡ್ತೀನಿ. ಅವನ ಜೊತೆ ಅಟ್ಯಾಚ್​ಮೆಂಟ್ ಬೆಳೆದಿದೆ. ಏಕೆಂದು ಗೊತ್ತಿಲ್ಲ. ಅವನು ಸಾಕಷ್ಟು ಇಷ್ಟ ಆಗಿದ್ದಾನೆ’ ಎಂದು ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: ಸಾಲದಬಾಧೆ ವದಂತಿ; ಲೈವ್ ಬಂದು ಅಸಲಿ ವಿಚಾರ ಹೇಳಿದ ಗೋಲ್ಡ್ ಸುರೇಶ್

ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಎಕ್ಸಿಟ್ ಆದರು. ಅವರು ಉದ್ಯಮವನ್ನು ನಡೆಸುತ್ತಿದ್ದಾರೆ. ಇದರ ಜವಾಬ್ದಾರಿಯನ್ನು ಪತ್ನಿಗೆ ನೀಡಿದ್ದರು. ಆದರೆ, ಅವರ ಬಳಿ ಅದನ್ನು ನಡೆಸಿಕೊಂಡು ಹೋಗಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ದೊಡ್ಮನೆಯಿಂದ ಹೊರ ಬಂದರು. ಅವರು ಸಾಲ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿತ್ತು. ಇದು ಸುಳ್ಳು ಎಂದು ಸುರೇಶ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!