AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ismart Jodi: ಗಣೇಶ್​ ಸಾರಥ್ಯದಲ್ಲಿ ಜುಲೈ 16ರಿಂದ ‘ಇಸ್ಮಾರ್ಟ್​ ಜೋಡಿ’; ‘ಸ್ಟಾರ್​ ಸುವರ್ಣ’ದ ಈ ಶೋ ವಿಶೇಷತೆ ಏನು?

Star Suvarna | Ismart Jodi: ‘ಇಸ್ಮಾರ್ಟ್​ ಜೋಡಿ’ ಶೋನಲ್ಲಿ ಗೆದ್ದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಚಿತ್ರರಂಗ, ಕಿರುತೆರೆ ಮತ್ತು ಸೋಷಿಯಲ್​ ಮೀಡಿಯಾದಲ್ಲಿ ಜನಪ್ರಿಯ ಆಗಿರುವ ಜೋಡಿಗಳು ಇದರಲ್ಲಿ ಭಾಗವಹಿಸುತ್ತಿವೆ.

Ismart Jodi: ಗಣೇಶ್​ ಸಾರಥ್ಯದಲ್ಲಿ ಜುಲೈ 16ರಿಂದ ‘ಇಸ್ಮಾರ್ಟ್​ ಜೋಡಿ’; ‘ಸ್ಟಾರ್​ ಸುವರ್ಣ’ದ ಈ ಶೋ ವಿಶೇಷತೆ ಏನು?
ಗೋಲ್ಡನ್ ಸ್ಟಾರ್ ಗಣೇಶ್
TV9 Web
| Edited By: |

Updated on:Jul 14, 2022 | 9:17 AM

Share

Ismart Jodi | ಕಿರುತೆರೆ ವಾಹಿನಿಗಳ ನಡುವೆ ಭರ್ಜರಿ ಪೈಪೋಟಿ ಇದೆ. ಪ್ರತಿ ಚಾನೆಲ್​ನಲ್ಲೂ ಹಲವು ರಿಯಾಲಿಟಿ ಶೋಗಳು ಪ್ರೇಕ್ಷಕರ ಮನಗೆಲ್ಲಲು ಪ್ರಯತ್ನಿಸುತ್ತಿವೆ. ‘ಸ್ಟಾರ್​ ಸುವರ್ಣ’ (Star Suvarna) ವಾಹಿನಿಯಲ್ಲಿ ಹೊಸ ರಿಯಾಲಿಟಿ ಶೋ ‘ಇಸ್ಮಾರ್ಟ್​ ಜೋಡಿ’ (Ismart Jodi) ಪ್ರಸಾರಕ್ಕೆ ಕ್ಷಣಗಣನೆ ಶುರುವಾಗಿದೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಗಿದೆ. ಇದೇ ಶನಿವಾರದಿಂದ (ಜುಲೈ 16) ಈ ಕಾರ್ಯಕ್ರಮ ಪ್ರಸಾರ ಆಗಲಿದ್ದು ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಇದರ ಸಾರಥ್ಯ ವಹಿಸುತ್ತಿದ್ದಾರೆ. ಈಗಾಗಲೇ ಪ್ರೋಮೋಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಾಗಿದೆ. ಹಲವು ಜೋಡಿಗಳು ಈ ಶೋನಲ್ಲಿ ಭಾಗವಹಿಸಲಿವೆ. ಪ್ರತಿ ವೀಕೆಂಡ್​ನಲ್ಲಿ ಗಣೇಶ್ (Golden Star Ganesh)​ ಅವರನ್ನು ಕಿರುತೆರೆಯಲ್ಲಿ ನೋಡಲು ಅವರ ಫ್ಯಾನ್ಸ್​ ಕಾತರಾಗಿದ್ದಾರೆ.

‘ಇದುವರೆಗೂ ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದೇನೆ. ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ. ಎರಡು ವರ್ಷ ಗ್ಯಾಪ್​ ಆಗಿತ್ತು. ಬೇರೇನೋ ಹೊಸದು ಮಾಡಬೇಕು, ಫ್ಯಾಮಿಲಿ ಆಡಿಯನ್ಸ್​ ತಲುಪಬೇಕು ಎಂದು ಯೋಚಿಸುತ್ತಿದ್ದಾಗ ಸ್ಟಾರ್​ ಸುವರ್ಣದವರು ಈ ಕಾರ್ಯಕ್ರಮದ ಕುರಿತು ಹೇಳಿದರು. ಇದೊಂದು ಸೆಲೆಬ್ರಿಟಿ ಜೋಡಿಯ ಕುರಿತಾದ ಕಾರ್ಯಕ್ರಮ. ಇಲ್ಲಿ ಹೊಸದಾಗಿ ಮದುವೆಯಾದವರಿಂದ ಹಿಡಿದು 40 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರವರೆಗೂ ಇದ್ದಾರೆ’ ಎಂದು ಗಣೇಶ್​ ಹೇಳಿದ್ದಾರೆ.

‘ಇವತ್ತಿನ ದಿನಗಳಲ್ಲಿ ದಂಪತಿಗಳು ಸಣ್ಣಸಣ್ಣ ವಿಷಯಕ್ಕೂ ಬಹಳ ಬೇಗ ದೂರ ಆಗುತ್ತಿದ್ದಾರೆ. ಜೀವನ ಎಂದರೆ ಅದಲ್ಲ, ಇಲ್ಲಿ ಏಳು-ಬೀಳು, ಸುಖ-ದುಃಖ ಎಲ್ಲವೂ ಇರುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಇದು. ಈ ಕಾರ್ಯಕ್ರಮವು ನಾಲ್ಕು ಜನರಿಗೆ ಮಾದರಿ ಆಗಬೇಕು. ಒಳ್ಳೆಯ ಕಾನ್ಸೆಪ್ಟ್​ ಆದ್ದರಿಂದ ಒಪ್ಪಿಕೊಂಡೆ. ಒಟ್ಟು 26 ಕಂತುಗಳು. ಪ್ರತಿ ಶನಿವಾರ ಮತ್ತು ಭಾನುವಾರ ರಾತಿ 9 ಗಂಟೆಗೆ ಪ್ರಸಾರವಾಗಲಿದೆ’ ಎಂದು ಗಣೇಶ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​
Image
‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್
Image
‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು
Image
‘ಲಕ್ಷಣ’ ಧಾರಾವಾಹಿಗೆ ಡಬಲ್​ ಸಂಭ್ರಮ; ನಟ ಗಣೇಶ್​ಗೆ ಧನ್ಯವಾದ ತಿಳಿಸಿದ ಜಗನ್​

ಹೇಗಿರಲಿದೆ ಇಸ್ಮಾರ್ಟ್​ ಜೋಡಿ ಶೋ?

‘ಎಲ್ಲರೂ ಪ್ರೀತಿಯಿಂದ ಬದುಕಿ ಅಂತ ಸಂದೇಶ ಸಾರುವಂತಹ ಕಾರ್ಯಕ್ರಮ ಇದು. ಇಲ್ಲಿ ತೀರ್ಪುಗಾರರು ಇರುವುದಿಲ್ಲ. ನಾನು ನಿರೂಪಕನಾಗಿರುತ್ತೇನೆ. ಸ್ಪರ್ಧಿಗಳಿಗೆ ಹಲವು ಟಾಸ್ಕ್​ಗಳನ್ನು ನೀಡಲಾಗುತ್ತದೆ. ಗೆದ್ದವರಿಗೆ ಅಂಕಗಳನ್ನು ನೀಡಲಾಗುತ್ತದೆ. ಮೊದಲ ಐದು ಕಂತುಗಳಲ್ಲಿ ಯಾವುದೇ ಎಲಿಮಿನೇಷನ್​ ಇರುವುದಿಲ್ಲ. ಗೆದ್ದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಇಲ್ಲಿ ಚಿತ್ರರಂಗ, ಕಿರುತೆರೆ ಮತ್ತು ಸೋಷಿಯಲ್​ ಮೀಡಿಯಾದಲ್ಲಿ ಜನಪ್ರಿಯವಾಗಿರುವ ಜೋಡಿಗಳು ಭಾಗವಹಿಸುತ್ತಿವೆ. ಜತೆಗೆ ಸಿನಿಮಾ ಪ್ರಮೋಷನ್​ಗಳು ಸಹ ಇರುತ್ತವೆ. ಸೆಲೆಬ್ರಿಟಿಗಳು ಆಗಾಗ ಅತಿಥಿಯಾಗಿ ಬರುತ್ತಿರುತ್ತಾರೆ’ ಎಂದಿದ್ದಾರೆ ಗಣೇಶ್.

ವಿನಯ್​ ಗೌಡ ಮತ್ತು ಅಕ್ಷತಾ ಗೌಡ, ಸುಮನ್​ ನಗರ್​ಕರ್​ ಮತ್ತು ಗುರುದೇವ್​ ನಾಗರಾಜ, ದಿಶಾ ಮದನ್​ ಮತ್ತು ಶಶಾಂಕ್​ ವಾಸುಕಿ ಗೋಪಾಲ್​, ಪ್ರತೀಕ್​ ಪ್ರೊ ಮತ್ತು ಮೌಲ್ಯಶ್ರೀ ಎಂ, ಶ್ರೀರಾಮ ಸುಳ್ಯ ಮತ್ತು ಪುನೀತ್​ ಆಚಾರ್ಯ, ರಘು ವೈನ್​ ಸ್ಟೋರ್​ ಮತ್ತು ವಿದ್ಯಾಶ್ರೀ, ಇಂಪನಾ ಜಯರಾಜ್​ ಮತ್ತು ಅಜಿತ್​ ಜಯರಾಜ್​, ಸಪ್ನ ದೀಕ್ಷಿತ್​ ಮತ್ತು ಅಶ್ವಿನ್​ ದೀಕ್ಷಿತ್​, ಜೈ ಜಗದೀಶ್​ ಮತ್ತು ವಿಜಯಲಕ್ಷ್ಮಿ ಸಿಂಗ್​, ರಿಚರ್ಡ್​ ಲೂಯಿಸ್​ ಮತ್ತು ಹ್ಯಾರಿಯೆಟ್​ ಲೂಯಿಸ್​ ದಂಪತಿ ಇದರಲ್ಲಿ ಭಾಗವಹಿಸುತ್ತಿದ್ದಾರೆ.

Published On - 8:46 am, Thu, 14 July 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!