AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ವೈಯಕ್ತಿಕ ಆಟವನ್ನೇ ಮರೆತ ಗೌತಮಿ-ಮಂಜು; ಟೀಕಿಸಿದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಗೌತಮಿ ಅವರು ಆರಂಭದಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದರು. ಏನೇ ಇದ್ದರೂ ವೈಯಕ್ತಿಕವಾಗಿ ತಮ್ಮ ವಿಚಾರ ಏನಿದೆ ಅದನ್ನು ಹೇಳುತ್ತಿದ್ದರು. ಈಗ ಮಂಜು ಹಾಗೂ ಗೌತಮಿ ಪರಸ್ಪರ ಬೆಂಬಲ ನೀಡುತ್ತಾ ಬರುತ್ತಿದ್ದಾರೆ.

ಮತ್ತೆ ವೈಯಕ್ತಿಕ ಆಟವನ್ನೇ ಮರೆತ ಗೌತಮಿ-ಮಂಜು; ಟೀಕಿಸಿದ ಹನುಮಂತ
ಗೌತಮಿ-ಮಂಜು
ರಾಜೇಶ್ ದುಗ್ಗುಮನೆ
|

Updated on: Dec 04, 2024 | 7:19 AM

Share

ಬಿಗ್ ಬಾಸ್ ಮನೆಯಲ್ಲಿ ಗೌತಮಿ ಜಾಧವ್ ಅವರು ಆರಂಭದಲ್ಲಿ ವೈಯಕ್ತಿಕವಾಗಿ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಆದರೆ, ದಿನ ಕಳೆದಂತೆ ಈ ಆಟ ಬದಲಾಗುತ್ತಾ ಬಂತು. ಈಗ ಅವರು ಸಂಪೂರ್ಣವಾಗಿ ಮಂಜು ನೆರಳಲ್ಲೇ ಕಳೆದು ಹೋದರಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ. ಈಗ ಇದು ಪದೇ ಪದೇ ಸಾಬೀತಾಗುತ್ತಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಗೌತಮಿ ಅವರು ಆರಂಭದಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದರು. ಏನೇ ಇದ್ದರೂ ವೈಯಕ್ತಿಕವಾಗಿ ತಮ್ಮ ವಿಚಾರ ಏನಿದೆ ಅದನ್ನು ಹೇಳುತ್ತಿದ್ದರು. ಮಂಜು, ಮೋಕ್ಷಿತಾ ಹಾಗೂ ಗೌತಮಿ ಒಂದು ತಂಡವಾಗಿ ಗುರುತಿಸಿಕೊಂಡರು. ಆದರೆ, ದಿನ ಕಳೆದಂತೆ ಮಂಜು ಹಾಗೂ ಗೌತಮಿ ಒಂದು ತಂಡದಲ್ಲಿ ಉಳಿದರೆ, ಮೋಕ್ಷಿತಾ ಇವರಿಂದ ದೂರ ಆದರು. ಈಗ ಮಂಜು ಹಾಗೂ ಗೌತಮಿ ಪರಸ್ಪರ ಬೆಂಬಲ ನೀಡುತ್ತಾ ಬರುತ್ತಿದ್ದಾರೆ.

ಗೌತಮಿ ಜಾಧವ್ ಅವರಿಗೆ ಕಳಪೆ ಎನ್ನುವ ಪಟ್ಟವನ್ನು ಮನೆಯವರು ಕೊಟ್ಟಿದ್ದರು. ಅದೇ ರೀತಿ ಮಂಜುಗೂ ಕಳಪೆ ಕೊಡಲಾಗಿತ್ತು. ಅವರ ಪರವಾಗಿ ತಂಡದ ಒಬ್ಬರು ವಹಿಸಿಕೊಂಡು ಬಂದು ಮಾತನಾಡಬೇಕಿತ್ತು.  ಗೌತಮಿ ಜಾಧವ್​ ಪರವಾಗಿ ಮಂಜು ಮಾತನಾಡಿದರು. ಮಂಜು ಅವರು ಗೌತಮಿ ಬೆಸ್ಟ್ ಎಂದು ಹೇಳುವ ಪ್ರಯತ್ನವನ್ನು ಮಾಡಿದರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಹೇಗಿದೆ ನೋಡಿ ರಜತ್ ಹೊಸ ಲುಕ್; ಫೋಟೋ ವೈರಲ್

ಗೌತಮಿ ಅವರು ಮಂಜು ಪರವಾಗಿ ಮಾತನಾಡಿದರು. ‘ಮಂಜು ಕಿಚ್ಚನ ಚಪ್ಪಾಳೆ ಪಡೆದಿದ್ದಾರೆ’ ಎಂದು ಹೆಮ್ಮೆಯಿಂದ ಹೇಳಿದರು. ‘ನಾ ಮಾಡಿದ್ದೇ ಸರಿ ಎಂದು ಮಂಜು ಹೇಳುತ್ತಾ ಇರುತ್ತಾರೆ’ ಎಂದು ಹನುಮಂತ ಪ್ರಶ್ನೆ ಮಾಡಿದರು. ‘ಮಂಜು ಯಾವಾಗಲೂ ಈಗೋ ತೋರಿಸಿಲ್ಲ’ ಎಂದರು ಗೌತಮಿ. ‘ಗೆಳೆಯನ ಪರವಾಗಿ ಗೆಳತಿ ಮಾತನಾಡಿದ್ರು, ಗೆಳತಿ ಪರವಾಗಿ ಗೆಳೆಯ ಮಾತಾಡಿದ್ರು. ಅಲ್ಲಿಗೆ ಲೆಕ್ಕ ಹರೀತು ಬಿಡು’ ಎಂದು ಹನುಮಂತ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ