AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ವೈಯಕ್ತಿಕ ಆಟವನ್ನೇ ಮರೆತ ಗೌತಮಿ-ಮಂಜು; ಟೀಕಿಸಿದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಗೌತಮಿ ಅವರು ಆರಂಭದಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದರು. ಏನೇ ಇದ್ದರೂ ವೈಯಕ್ತಿಕವಾಗಿ ತಮ್ಮ ವಿಚಾರ ಏನಿದೆ ಅದನ್ನು ಹೇಳುತ್ತಿದ್ದರು. ಈಗ ಮಂಜು ಹಾಗೂ ಗೌತಮಿ ಪರಸ್ಪರ ಬೆಂಬಲ ನೀಡುತ್ತಾ ಬರುತ್ತಿದ್ದಾರೆ.

ಮತ್ತೆ ವೈಯಕ್ತಿಕ ಆಟವನ್ನೇ ಮರೆತ ಗೌತಮಿ-ಮಂಜು; ಟೀಕಿಸಿದ ಹನುಮಂತ
ಗೌತಮಿ-ಮಂಜು
ರಾಜೇಶ್ ದುಗ್ಗುಮನೆ
|

Updated on: Dec 04, 2024 | 7:19 AM

Share

ಬಿಗ್ ಬಾಸ್ ಮನೆಯಲ್ಲಿ ಗೌತಮಿ ಜಾಧವ್ ಅವರು ಆರಂಭದಲ್ಲಿ ವೈಯಕ್ತಿಕವಾಗಿ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಆದರೆ, ದಿನ ಕಳೆದಂತೆ ಈ ಆಟ ಬದಲಾಗುತ್ತಾ ಬಂತು. ಈಗ ಅವರು ಸಂಪೂರ್ಣವಾಗಿ ಮಂಜು ನೆರಳಲ್ಲೇ ಕಳೆದು ಹೋದರಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ. ಈಗ ಇದು ಪದೇ ಪದೇ ಸಾಬೀತಾಗುತ್ತಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಗೌತಮಿ ಅವರು ಆರಂಭದಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದರು. ಏನೇ ಇದ್ದರೂ ವೈಯಕ್ತಿಕವಾಗಿ ತಮ್ಮ ವಿಚಾರ ಏನಿದೆ ಅದನ್ನು ಹೇಳುತ್ತಿದ್ದರು. ಮಂಜು, ಮೋಕ್ಷಿತಾ ಹಾಗೂ ಗೌತಮಿ ಒಂದು ತಂಡವಾಗಿ ಗುರುತಿಸಿಕೊಂಡರು. ಆದರೆ, ದಿನ ಕಳೆದಂತೆ ಮಂಜು ಹಾಗೂ ಗೌತಮಿ ಒಂದು ತಂಡದಲ್ಲಿ ಉಳಿದರೆ, ಮೋಕ್ಷಿತಾ ಇವರಿಂದ ದೂರ ಆದರು. ಈಗ ಮಂಜು ಹಾಗೂ ಗೌತಮಿ ಪರಸ್ಪರ ಬೆಂಬಲ ನೀಡುತ್ತಾ ಬರುತ್ತಿದ್ದಾರೆ.

ಗೌತಮಿ ಜಾಧವ್ ಅವರಿಗೆ ಕಳಪೆ ಎನ್ನುವ ಪಟ್ಟವನ್ನು ಮನೆಯವರು ಕೊಟ್ಟಿದ್ದರು. ಅದೇ ರೀತಿ ಮಂಜುಗೂ ಕಳಪೆ ಕೊಡಲಾಗಿತ್ತು. ಅವರ ಪರವಾಗಿ ತಂಡದ ಒಬ್ಬರು ವಹಿಸಿಕೊಂಡು ಬಂದು ಮಾತನಾಡಬೇಕಿತ್ತು.  ಗೌತಮಿ ಜಾಧವ್​ ಪರವಾಗಿ ಮಂಜು ಮಾತನಾಡಿದರು. ಮಂಜು ಅವರು ಗೌತಮಿ ಬೆಸ್ಟ್ ಎಂದು ಹೇಳುವ ಪ್ರಯತ್ನವನ್ನು ಮಾಡಿದರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಹೇಗಿದೆ ನೋಡಿ ರಜತ್ ಹೊಸ ಲುಕ್; ಫೋಟೋ ವೈರಲ್

ಗೌತಮಿ ಅವರು ಮಂಜು ಪರವಾಗಿ ಮಾತನಾಡಿದರು. ‘ಮಂಜು ಕಿಚ್ಚನ ಚಪ್ಪಾಳೆ ಪಡೆದಿದ್ದಾರೆ’ ಎಂದು ಹೆಮ್ಮೆಯಿಂದ ಹೇಳಿದರು. ‘ನಾ ಮಾಡಿದ್ದೇ ಸರಿ ಎಂದು ಮಂಜು ಹೇಳುತ್ತಾ ಇರುತ್ತಾರೆ’ ಎಂದು ಹನುಮಂತ ಪ್ರಶ್ನೆ ಮಾಡಿದರು. ‘ಮಂಜು ಯಾವಾಗಲೂ ಈಗೋ ತೋರಿಸಿಲ್ಲ’ ಎಂದರು ಗೌತಮಿ. ‘ಗೆಳೆಯನ ಪರವಾಗಿ ಗೆಳತಿ ಮಾತನಾಡಿದ್ರು, ಗೆಳತಿ ಪರವಾಗಿ ಗೆಳೆಯ ಮಾತಾಡಿದ್ರು. ಅಲ್ಲಿಗೆ ಲೆಕ್ಕ ಹರೀತು ಬಿಡು’ ಎಂದು ಹನುಮಂತ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ