AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಕ್ಷಿತಾನ ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದ ಗೌತಮಿ; ಮುಂದುವರಿದ ದ್ವೇಷದ ಕಾವು

ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ನಡುವೆ ಇರುವ ಮನಸ್ತಾಪ ಹೆಚ್ಚಾಗುತ್ತಲೇ ಇದೆ. ಮೋಕ್ಷಿತಾಗೆ ಮತ್ತೆ ಕ್ಯಾಪ್ಟನ್ ಆಗುವ ಅವಕಾಶ ಮಿಸ್ ಆಗಿದೆ. ಈ ನಿರ್ಧಾರ ತೆಗೆದುಕೊಂಡಿದ್ದೇ ಗೌತಮಿ. ಕಳೆದ ವಾರ ಸಹ ಮೋಕ್ಷಿತಾ ಅವರು ಕ್ಯಾಪ್ಟನ್ ಆಗುವ ಚಾನ್ಸ್ ಮಿಸ್ ಮಾಡಿಕೊಂಡಿದ್ದರು. ಬಿಗ್ ಬಾಸ್ ಮನೆಯಲ್ಲಿ ಈ ವಾರವೂ ಅದು ರಿಪೀಟ್ ಆಗಿದೆ.

ಮೋಕ್ಷಿತಾನ ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದ ಗೌತಮಿ; ಮುಂದುವರಿದ ದ್ವೇಷದ ಕಾವು
ಗೌತಮಿ ಜಾದವ್, ಮೋಕ್ಷಿತಾ ಪೈ
ಮದನ್​ ಕುಮಾರ್​
|

Updated on: Dec 12, 2024 | 10:29 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ 73 ದಿನಗಳ ಕಳೆದಿವೆ. ಇನ್ನು ಉಳಿದಿರುವುದು ಕೆಲವೇ ದಿನಗಳ ಮಾತ್ರ. ಹಾಗಾಗಿ ಎಲ್ಲರೂ ತಮ್ಮ ಆಟದ ಮೇಲೆ ಗಮನ ಹರಿಸುತ್ತಿದ್ದಾರೆ. ಮೊದಲು ಸ್ನೇಹಿತರಾಗಿದ್ದವರೆಲ್ಲ ಈಗ ದುಷ್ಮನ್​ಗಳ ರೀತಿ ಆಗಿದ್ದಾರೆ. ಅದರಲ್ಲೂ ಗೌತಮಿ ಜಾದವ್ ಮತ್ತು ಮೋಕ್ಷಿತಾ ಪೈ ಅವರ ನಡುವಿನ ಜಗಳ ಜಾಸ್ತಿ ಆಗಿದೆ. ಈಗ ಮೋಕ್ಷಿತಾ ಪೈ ಅವರಿಗೆ ಗೌತಮಿ ಇನ್ನಷ್ಟು ಸಂಕಷ್ಟ ತಂದೊಡ್ಡಿದ್ದಾರೆ. ಮುಂದಿನ ವಾರಕ್ಕೆ ಕ್ಯಾಪ್ಟನ್ ಆಗುವ ಅವಕಾಶವನ್ನು ಮೋಕ್ಷಿತಾ ಅವರಿಂದ ಗೌತಮಿ ತಪ್ಪಿಸಿದ್ದಾರೆ.

ಪ್ರತಿ ವಾರ ಕ್ಯಾಪ್ಟೆನ್ಸಿ ಟಾಸ್ಕ್​ ನಡೆಯುತ್ತದೆ. ಅದರಲ್ಲಿ ಗೆಲ್ಲಲು ಎಲ್ಲರೂ ಕಷ್ಟಪಡುತ್ತಾರೆ. ಯಾಕೆಂದರೆ, ಒಮ್ಮೆ ಕ್ಯಾಪ್ಟನ್ ಆದರೆ ಮುಂದಿನ ವಾರಕ್ಕೆ ಇಮ್ಯುನಿಟಿ ಸಿಗುತ್ತದೆ. ಅಂದರೆ, ನಾಮಿನೇಷನ್​ನಿಂದ ಬಜಾಚ್ ಆಗುತ್ತಾರೆ. ಹಾಗಾಗಿ ಎಲ್ಲರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಕಳೆದ ವಾರ ಕ್ಯಾಪ್ಟನ್ ಆಗುವ ಅವಕಾಶ ಕಳೆದುಕೊಂಡಿದ್ದ ಮೋಕ್ಷಿತಾ ಅವರಿಗೆ ಈ ವಾರ ಕೂಡ ಚಾನ್ಸ್ ಮಿಸ್ ಆಗಿದೆ.

ಕ್ಯಾಪ್ಟೆನ್ಸಿ ಟಾಸ್ಕ್​ಗಾಗಿ ಎರಡು ತಂಡಗಳಲ್ಲಿ ಪೈಪೋಟಿ ನಡೆಯುತ್ತಿದೆ. ಒಂದು ತಂಡಕ್ಕೆ ಹನುಮಂತ ಲೀಡರ್ ಆಗಿದ್ದರೆ, ಇನ್ನೊಂದು ತಂಡವನ್ನು ಗೌತಮಿ ಜಾದವ್ ಮುಂದುವರಿಸುತ್ತಿದ್ದಾರೆ. ಮೊದಲ ಸುತ್ತಿನಲ್ಲಿ ಗೌತಮಿಯ ತಂಡ ಸೋತಿತು. ಆಗ ಇಬ್ಬರನ್ನು ಕ್ಯಾಪ್ಟೆನ್ಸಿ ಆಟದಿಂದ ಹೊರಗೆ ಇರಬೇಕಾಯಿತು. ಆಗ ಮೋಕ್ಷಿತಾ ಮತ್ತು ತ್ರಿವಿಕ್ರಮ್ ಹೆಸರನ್ನು ಗೌತಮಿ ಹೇಳಿದರು.

ಇದನ್ನೂ ಓದಿ: ಮುಖಕ್ಕೆ ಹೊಡೆದಂತೆ ಮಾತಾಡಿದ ಗೌತಮಿ; ಸ್ನೇಹ ಮಾಡಿದ್ದಕ್ಕೆ ಮಂಜುಗೆ ಸಿಕ್ಕಿದ್ದು ಇಷ್ಟೇ

ಕಳೆದ ವಾರ ಕ್ಯಾಪ್ಟೆನ್ಸಿ ಟಾಸ್ಕ್​ನಲ್ಲಿ ಮೋಕ್ಷಿತಾ ಇದ್ದರು. ಆದರೆ ಸ್ವಾಭಿಮಾನದ ಕಾರಣಕ್ಕಾಗಿ ಅವರು ಗೌತಮಿಯ ಬಳಿ ಸಹಾಯ ಕೇಳುವ ಬದಲು ಆಟವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು. ಆದ್ದರಿಂದ ಅವರಿಗೆ ಕ್ಯಾಪ್ಟನ್ ಆಗುವ ಅವಕಾಶ ತಪ್ಪಿ ಹೋಗಿತ್ತು. ಮೋಕ್ಷಿತಾ ಅವರ ಅವಕಾಶವನ್ನು ಬಳಸಿಕೊಂಡು ಗೌತಮಿ ಕ್ಯಾಪ್ಟನ್ ಆಗಿದ್ದರು. ಈ ವಾರ ಕೂಡ ಮೋಕ್ಷಿತಾಗೆ ಕ್ಯಾಪ್ಟನ್ ಆಗುವ ಅವಕಾಶ ಕೈತಪ್ಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!