AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಕ್ಷಿತಾನ ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದ ಗೌತಮಿ; ಮುಂದುವರಿದ ದ್ವೇಷದ ಕಾವು

ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ನಡುವೆ ಇರುವ ಮನಸ್ತಾಪ ಹೆಚ್ಚಾಗುತ್ತಲೇ ಇದೆ. ಮೋಕ್ಷಿತಾಗೆ ಮತ್ತೆ ಕ್ಯಾಪ್ಟನ್ ಆಗುವ ಅವಕಾಶ ಮಿಸ್ ಆಗಿದೆ. ಈ ನಿರ್ಧಾರ ತೆಗೆದುಕೊಂಡಿದ್ದೇ ಗೌತಮಿ. ಕಳೆದ ವಾರ ಸಹ ಮೋಕ್ಷಿತಾ ಅವರು ಕ್ಯಾಪ್ಟನ್ ಆಗುವ ಚಾನ್ಸ್ ಮಿಸ್ ಮಾಡಿಕೊಂಡಿದ್ದರು. ಬಿಗ್ ಬಾಸ್ ಮನೆಯಲ್ಲಿ ಈ ವಾರವೂ ಅದು ರಿಪೀಟ್ ಆಗಿದೆ.

ಮೋಕ್ಷಿತಾನ ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದ ಗೌತಮಿ; ಮುಂದುವರಿದ ದ್ವೇಷದ ಕಾವು
ಗೌತಮಿ ಜಾದವ್, ಮೋಕ್ಷಿತಾ ಪೈ
ಮದನ್​ ಕುಮಾರ್​
|

Updated on: Dec 12, 2024 | 10:29 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ 73 ದಿನಗಳ ಕಳೆದಿವೆ. ಇನ್ನು ಉಳಿದಿರುವುದು ಕೆಲವೇ ದಿನಗಳ ಮಾತ್ರ. ಹಾಗಾಗಿ ಎಲ್ಲರೂ ತಮ್ಮ ಆಟದ ಮೇಲೆ ಗಮನ ಹರಿಸುತ್ತಿದ್ದಾರೆ. ಮೊದಲು ಸ್ನೇಹಿತರಾಗಿದ್ದವರೆಲ್ಲ ಈಗ ದುಷ್ಮನ್​ಗಳ ರೀತಿ ಆಗಿದ್ದಾರೆ. ಅದರಲ್ಲೂ ಗೌತಮಿ ಜಾದವ್ ಮತ್ತು ಮೋಕ್ಷಿತಾ ಪೈ ಅವರ ನಡುವಿನ ಜಗಳ ಜಾಸ್ತಿ ಆಗಿದೆ. ಈಗ ಮೋಕ್ಷಿತಾ ಪೈ ಅವರಿಗೆ ಗೌತಮಿ ಇನ್ನಷ್ಟು ಸಂಕಷ್ಟ ತಂದೊಡ್ಡಿದ್ದಾರೆ. ಮುಂದಿನ ವಾರಕ್ಕೆ ಕ್ಯಾಪ್ಟನ್ ಆಗುವ ಅವಕಾಶವನ್ನು ಮೋಕ್ಷಿತಾ ಅವರಿಂದ ಗೌತಮಿ ತಪ್ಪಿಸಿದ್ದಾರೆ.

ಪ್ರತಿ ವಾರ ಕ್ಯಾಪ್ಟೆನ್ಸಿ ಟಾಸ್ಕ್​ ನಡೆಯುತ್ತದೆ. ಅದರಲ್ಲಿ ಗೆಲ್ಲಲು ಎಲ್ಲರೂ ಕಷ್ಟಪಡುತ್ತಾರೆ. ಯಾಕೆಂದರೆ, ಒಮ್ಮೆ ಕ್ಯಾಪ್ಟನ್ ಆದರೆ ಮುಂದಿನ ವಾರಕ್ಕೆ ಇಮ್ಯುನಿಟಿ ಸಿಗುತ್ತದೆ. ಅಂದರೆ, ನಾಮಿನೇಷನ್​ನಿಂದ ಬಜಾಚ್ ಆಗುತ್ತಾರೆ. ಹಾಗಾಗಿ ಎಲ್ಲರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಕಳೆದ ವಾರ ಕ್ಯಾಪ್ಟನ್ ಆಗುವ ಅವಕಾಶ ಕಳೆದುಕೊಂಡಿದ್ದ ಮೋಕ್ಷಿತಾ ಅವರಿಗೆ ಈ ವಾರ ಕೂಡ ಚಾನ್ಸ್ ಮಿಸ್ ಆಗಿದೆ.

ಕ್ಯಾಪ್ಟೆನ್ಸಿ ಟಾಸ್ಕ್​ಗಾಗಿ ಎರಡು ತಂಡಗಳಲ್ಲಿ ಪೈಪೋಟಿ ನಡೆಯುತ್ತಿದೆ. ಒಂದು ತಂಡಕ್ಕೆ ಹನುಮಂತ ಲೀಡರ್ ಆಗಿದ್ದರೆ, ಇನ್ನೊಂದು ತಂಡವನ್ನು ಗೌತಮಿ ಜಾದವ್ ಮುಂದುವರಿಸುತ್ತಿದ್ದಾರೆ. ಮೊದಲ ಸುತ್ತಿನಲ್ಲಿ ಗೌತಮಿಯ ತಂಡ ಸೋತಿತು. ಆಗ ಇಬ್ಬರನ್ನು ಕ್ಯಾಪ್ಟೆನ್ಸಿ ಆಟದಿಂದ ಹೊರಗೆ ಇರಬೇಕಾಯಿತು. ಆಗ ಮೋಕ್ಷಿತಾ ಮತ್ತು ತ್ರಿವಿಕ್ರಮ್ ಹೆಸರನ್ನು ಗೌತಮಿ ಹೇಳಿದರು.

ಇದನ್ನೂ ಓದಿ: ಮುಖಕ್ಕೆ ಹೊಡೆದಂತೆ ಮಾತಾಡಿದ ಗೌತಮಿ; ಸ್ನೇಹ ಮಾಡಿದ್ದಕ್ಕೆ ಮಂಜುಗೆ ಸಿಕ್ಕಿದ್ದು ಇಷ್ಟೇ

ಕಳೆದ ವಾರ ಕ್ಯಾಪ್ಟೆನ್ಸಿ ಟಾಸ್ಕ್​ನಲ್ಲಿ ಮೋಕ್ಷಿತಾ ಇದ್ದರು. ಆದರೆ ಸ್ವಾಭಿಮಾನದ ಕಾರಣಕ್ಕಾಗಿ ಅವರು ಗೌತಮಿಯ ಬಳಿ ಸಹಾಯ ಕೇಳುವ ಬದಲು ಆಟವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು. ಆದ್ದರಿಂದ ಅವರಿಗೆ ಕ್ಯಾಪ್ಟನ್ ಆಗುವ ಅವಕಾಶ ತಪ್ಪಿ ಹೋಗಿತ್ತು. ಮೋಕ್ಷಿತಾ ಅವರ ಅವಕಾಶವನ್ನು ಬಳಸಿಕೊಂಡು ಗೌತಮಿ ಕ್ಯಾಪ್ಟನ್ ಆಗಿದ್ದರು. ಈ ವಾರ ಕೂಡ ಮೋಕ್ಷಿತಾಗೆ ಕ್ಯಾಪ್ಟನ್ ಆಗುವ ಅವಕಾಶ ಕೈತಪ್ಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ