AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಾನು ಟಾಯ್ಲೆಟ್ ಕ್ಲೀನ್​ ಮಾಡಬೇಕಾ? ಸ್ಟಾರ್​ ನಟನ ಪತ್ನಿಯ ತಿರುಗೇಟು

ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವಾಗ ಸುನಿತಾ ಅಹುಜಾ ಅವರಿಗೆ ‘ಬಿಗ್​ ಬಾಸ್​’ ಶೋ ಬಗ್ಗೆ ಪಶ್ನೆ ಎದುರಾಗಿದೆ. ಅದಕ್ಕೆ ಅವರು ಈ ರೀತಿ ಉತ್ತರ ನೀಡಿದ್ದಾರೆ. ತಮ್ಮನ್ನು ತಾವು ಗೌರಿ ಖಾನ್​ಗೆ ಹೋಲಿಸಿಕೊಂಡಿದ್ದಾರೆ. ಸ್ಪರ್ಧಿಯಾಗಿ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಹೋಗುವಂತಹ ಪರಿಸ್ಥಿತಿ ತಮಗೆ ಇನ್ನೂ ಬಂದಿಲ್ಲ ಎಂದು ಸುನಿತಾ ಅಹುಜಾ ಅವರು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ನಾನು ಟಾಯ್ಲೆಟ್ ಕ್ಲೀನ್​ ಮಾಡಬೇಕಾ? ಸ್ಟಾರ್​ ನಟನ ಪತ್ನಿಯ ತಿರುಗೇಟು
ಸುನಿತಾ ಅಹುಜಾ
ಮದನ್​ ಕುಮಾರ್​
|

Updated on: Sep 15, 2024 | 3:00 PM

Share

ಬಿಗ್​ ಬಾಸ್​ ಕಾರ್ಯಕ್ರಮ ಹಲವು ಭಾಷೆಯಲ್ಲಿ ಫೇಮಸ್​ ಆಗಿದೆ. ಪ್ರತಿ ವರ್ಷ ಆರಂಭ ಆಗುವ ಹೊಸ ಸೀಸನ್​ನಲ್ಲಿ ಯಾರು ಸ್ಪರ್ಧಿಗಳಾಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಇದ್ದೇ ಇರುತ್ತದೆ. ಶೋ ಆರಂಭಕ್ಕೂ ಮುನ್ನ ಹಲವು ಸೆಲೆಬ್ರಿಟಿಗಳ ಹೆಸರುಗಳು ಕೇಳಿಬರುತ್ತವೆ. ಬಾಲಿವುಡ್​ನ ಸ್ಟಾರ್​ ನಟ ಗೋವಿಂದ ಅವರ ಪತ್ನಿ ಸುನಿತಾ ಅಹುಜಾ ಅವರಿಗೂ ಇತ್ತೀಚೆಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಬಗ್ಗೆ ಮಾತನಾಡುವಾಗ ಅವರು ಖಡಕ್​ ಆಗಿ ಮಾತನಾಡಿದ್ದಾರೆ. ಬಿಗ್​ ಬಾಸ್​ ಆಫರ್​ ಕೊಟ್ಟವರಿಗೂ ಅವರು ಕೆಲವು ಮರುಪ್ರಶ್ನೆ ಹಾಕಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..

‘ಕಳೆದ ನಾಲ್ಕು ವರ್ಷಗಳಿಂದ ಅವರು ನನಗೆ ಆಫರ್​ ನೀಡುತ್ತಿದ್ದಾರೆ. ಅನಿಲ್ ಕಪೂರ್​ ನಡೆಸಿಕೊಟ್ಟಿದ್ದ ಒಟಿಟಿ ವರ್ಷನ್​ಗೂ ಕರೆದಿದ್ದಾರೆ. ಎರಡು ಬಾರಿ ನನಗೆ ಆಫರ್​ ಬಂದಿತ್ತು. ನಿಮಗೇನು ಹುಚ್ಚು ಹಿಡಿದಿದೆಯಾ? ನಾನು ಬಿಗ್ ಬಾಸ್​ಗೆ ಹೋಗಿ ಟಾಯ್ಲೆಟ್​ ಕ್ಲೀನ್​ ಮಾಡ್ತೀನಿ ಅಂತ ನೀವು ಅಂದುಕೊಂಡಿದ್ದೀರಾ ಎಂದು ನಾನು ಅವರಿಗೆ ಕೇಳಿದೆ’ ಎಂದಿದ್ದಾರೆ ಸುನಿತಾ ಅಹುಜಾ.

‘ನಿಮಗೆ ಬಿಗ್​ ಬಾಸ್​ ಶೋನಿಂದ ಆಫರ್​ ಬಂದಿದೆಯಾ’ ಎಂದು ಪ್ರಶ್ನೆ ಮಾಡಿದ ಸಂದರ್ಶಕರಿಗೂ ಸುನಿತಾ ಅಹುಜಾ ಅವರು ಮರುಪ್ರಶ್ನೆ ಹಾಕಿದ್ದಾರೆ. ‘ನೀವು ನನಗೆ ಇಂಥ ಪ್ರಶ್ನೆ ಕೇಳುತ್ತೀರಲ್ಲ.. ಶಾರುಖ್​ ಖಾನ್​ ಪತ್ನಿ ಗೌರಿ ಖಾನ್​ಗೆ ಇದೇ ಪ್ರಶ್ನೆ ಕೇಳುತ್ತೀರಾ? ನಾವು ಆರ್ಥಿಕವಾಗಿ ಕಷ್ಟದಲ್ಲಿದ್ದೇವೆ ಅಂತ ನೀವು ಭಾವಿಸಿದ್ದೀರಾ? ನಾನು ಬಿಗ್​ ಬಾಸ್​ ಕಾರ್ಯಕ್ರಮವನ್ನೇ ನೋಡುವುದಿಲ್ಲ’ ಎಂದು ಸುನಿತಾ ಅಹುಜಾ ಅವರು ಹೇಳಿದ್ದಾರೆ.

ಬಿಗ್​ ಬಾಸ್​ ಕಾರ್ಯಕ್ರಮವನ್ನು ಸುನಿತಾ ಅಹುಜಾ ಅವರು ಪೂರ್ತಿಯಾಗಿ ತಿರಸ್ಕರಿಸುತ್ತಿಲ್ಲ. ಸ್ಪರ್ಧಿ ಆಗುವ ಬದಲಿಗೆ ನಿರೂಪಕಿ ಆಗಲು ಅವರಿಗೆ ಆಸಕ್ತಿ ಇದೆ. ಸ್ಪರ್ಧಿ ಆಗಲು ಆಫರ್​ ನೀಡಿದ ಶೋ ಆಯೋಜಕರಿಗೆ ಅವರು ಇದೇ ವಿಚಾರವನ್ನು ತಿಳಿಸಿದ್ದಾರಂತೆ. ‘ನೀವು ಯಾರ ಜೊತೆ ಮಾತನಾಡುತ್ತಿದ್ದೀರಿ ಅಂತ ನಿಮಗೆ ತಿಳಿದಿದೆಯಾ? ಸಲ್ಮಾನ್​ ಖಾನ್​ ಜೊತೆ ನಿಂತು ಶೋ ನಡೆಸಿಕೊಡಬೇಕು ಎಂಬುದಾದರೆ ಮಾತ್ರ ನನ್ನ ಬಳಿ ಬನ್ನಿ ಅಂತ ಅವರಿಗೆ ಹೇಳಿ ಕಳಿಸಿದ್ದೇನೆ’ ಎಂದಿದ್ದಾರೆ ಸುನಿತಾ.

ಇದನ್ನೂ ಓದಿ: ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’

ಇಷ್ಟೆಲ್ಲ ಜಂಭ ಕೊಚ್ಚಿಕೊಂಡ ಸುನಿತಾ ಅಹುಜಾ ಅವರು ಬಿಗ್​ ಬಾಸ್​ ಕಾರ್ಯಕ್ರಮದ ಬದಲು ‘ಕಾಫಿ ವಿತ್​ ಕರಣ್’ ಶೋನಿಂದ ಆಫರ್​ ಬರಲಿ ಎಂದು ಕಾಯುತ್ತಿದ್ದಾರೆ. ಆದರೆ ಅವರಿಗೆ ಇನ್ನೂ ಆಹ್ವಾನ ಬಂದಿಲ್ಲ. ಈ ಬಗ್ಗೆ ನಟ ಗೋವಿಂದ ಮತ್ತು ಕರಣ್​ ಜೋಹರ್​ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ