AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಳ್ಳಿ ಪವರ್’: ಒಂದೇ ದಿನಕ್ಕೆ ಸುಸ್ತಾದ ಸಿಟಿ ಸುಂದರಿಯರು; ಕೆಲವರು ಅರ್ಧಕ್ಕೆ ವಾಪಸ್?

ಜೀ ಪವರ್ ವಾಹಿನಿಯ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್’ನಲ್ಲಿ 12 ಸ್ಪರ್ಧಿಗಳು ನಗರದಿಂದ ಹಳ್ಳಿ ಜೀವನಕ್ಕೆ ಹೋಗಿದ್ದಾರೆ. ಬೆಳಗಾವಿಯ ಸಂಗೊಳ್ಳಿಯಲ್ಲಿ ನಡೆಯುತ್ತಿರುವ ಈ ಶೋನಲ್ಲಿ, ಅವರು ಹಳ್ಳಿ ಜೀವನದ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಪ್ರತಿ ವಾರ ಎಲಿಮಿನೇಷನ್ ಇದೆ ಮತ್ತು ವೈಲ್ಡ್ ಕಾರ್ಡ್ ಎಂಟ್ರಿ ಕೂಡ ಇದೆ. .

‘ಹಳ್ಳಿ ಪವರ್’: ಒಂದೇ ದಿನಕ್ಕೆ ಸುಸ್ತಾದ ಸಿಟಿ ಸುಂದರಿಯರು; ಕೆಲವರು ಅರ್ಧಕ್ಕೆ ವಾಪಸ್?
ಹಳ್ಳಿ ಪವರ್
ರಾಜೇಶ್ ದುಗ್ಗುಮನೆ
|

Updated on:Sep 02, 2025 | 1:23 PM

Share

ಜೀ ಪವರ್​ (Zee Power)  ಹೆಸರಿನ ಹೊಸ ವಾಹಿನಿ ಇತ್ತೀಚೆಗೆ ಆರಂಭ ಆಗಿದೆ. ಈ ವಾಹಿನಿಯಲ್ಲಿ ‘ಹಳ್ಳಿ ಪವರ್’ ಹೆಸರಿನ ಹೊಸ ರಿಯಾಲಿಟಿ ಶೋ ಕೂಡ ಆರಂಭ ಆಗಿದೆ. ಈ ಶೋಗೆ ಅಕುಲ್ ಬಾಲಾಜಿ ನೇತೃತ್ವ ಇದೆ. ಬೆಳಗಾವಿಯ ಸಂಗೊಳ್ಳಿಗೆ ತಂಡ ತೆರಳಿದೆ. ಅಲ್ಲಿ ಕೇವಲ ಒಂದೇ ದಿನಕ್ಕೆ ಎಲ್ಲಾ ಸ್ಪರ್ಧಿಗಳು ಸುಸ್ತಾಗಿದ್ದು ಸ್ಪಷ್ಟವಾಗಿ ಕಂಡು ಬಂದಿದೆ. ಈ ಪ್ರೋಮೋನ ಜೀ ಪವರ್ ವಾಹಿನಿ ಹಂಚಿಕೊಂಡಿದೆ.

ಹಳ್ಳಿ ಪವರ್​ನಲ್ಲಿ ಒಟ್ಟು 16 ಸ್ಪರ್ಧಿಗಳು ಆಯ್ಕೆ ಆಗಿದ್ದರು. ಈ ಪೈಕಿ ಶೋಗೆ ಬರೋಕೆ ಬೇಕಿದ್ದಿದ್ದು ಕೇವಲ 12 ಮಂದಿ. ಹೀಗಾಗಿ, ಆ ಹಳ್ಳಿಯವರೇ ವೋಟ್ ಮಾಡಿ ಇವರನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯಿತು. 50 ಪರ್ಸೆಂಟ್​ಗಿಂತ ಕಡಿಮೆ ವೋಟ್ ಬಿದ್ದರೆ ಎಲಿಮಿನೇಟ್, 80ಕ್ಕಿಂತ ಮೇಲೆ ವೋಟ್ ಬಿದ್ದರೆ ಅವರು ಸೆಲೆಕ್ಟ್ ಆದಂತೆ. ಇವುಗಳ ಮಧ್ಯದಲ್ಲಿ ಇದ್ದರೆ ಹೋಲ್ಡ್​ನಲ್ಲಿ ಇದ್ದಾರೆ ಎಂದರ್ಥ.

ಇದನ್ನೂ ಓದಿ
Image
‘ಕಿತ್ತೋಗಿರೋ ನನ್ಮಕ್ಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’; ಸುದೀಪ್ ಕಿವಿಮಾತು
Image
ಪವನ್ ಕಲ್ಯಾಣ್ ಜನ್ಮದಿನ: 5 ಲಕ್ಷಕ್ಕೆ ಹರಾಜಾಯ್ತು ‘ಒಜಿ’ ಚಿತ್ರದ ಟಿಕೆಟ್
Image
ಮಲಯಾಳಂ ಸಿನಿಮಾದಲ್ಲಿ ಬೆಂಗಳೂರು ಯುವತಿಯರಿಗೆ ಡಗಾರ್ ಪದ ಬಳಕೆ
Image
ನಿಮ್ಮ ಲೈಫ್ ನಿಧಾನ ಎನಿಸುತ್ತಿದೆಯೇ? ಸುದೀಪ್ ಹೇಳಿದ ಈ ಜೀವನ ಪಾಠ ಕೇಳಿ

ಒಟ್ಟು 12 ಸ್ಪರ್ಧಿಗಳನ್ನು ಆಯ್ಕೆ ಮಾಡಿ ಅವರನ್ನು ಫೈವ್​ಸ್ಟಾರ್ ಹೋಟೆಲ್​ನಲ್ಲಿ ಇರಿಸಲಾಯಿತು. ಅಲ್ಲಿಂದ ಐಷಾರಾಮಿ ಕಾರಲ್ಲಿ ವಿಮಾನ ನಿಲ್ದಾಣಕ್ಕೆ ಎಲ್ಲರನ್ನೂ ಕೊಂಡೊಯ್ಯಲಾಯಿತು. ಅಲ್ಲಿಂದ ಎಲ್ಲರೂ ಹಾರಿದ್ದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ. ಹುಬ್ಬಳ್ಳಿಯಿಂದ ತೂಫಾನ್​ ವಾಹನದಲ್ಲಿ ಬೆಳಗಾವಿ ಸೇರಿ, ಬೆಳಗಾವಿಯಿಂದ ಸರ್ಕಾರಿ ಬಸ್​ನಲ್ಲಿ ಹೋಗಿ ಆ ಬಳಿಕ ಟ್ರ್ಯಾಕ್ಟರ್-ಎತ್ತಿನಗಾಡಿಯಲ್ಲಿ, ಸಂಗೊಳ್ಳಿ ಸೇರಿದರು.

ಹಳ್ಳಿ ಪವರ್ ಪ್ರೋಮೋ

ಸಿಟಿಯಲ್ಲೇ ಹುಟ್ಟಿ ಬೆಳೆದ ಎಲ್ಲರೂ ಹಳ್ಳಿ ಎಂಬುದನ್ನು ಕನಸಿನಲ್ಲೂ ಕಲ್ಪಿಸಿಕೊಂಡಿರಲಿಲ್ಲ. ಅವರಿಗೆ ಈಗ ಹಳ್ಳಿ ಜೀವನ ಕಷ್ಟ ಎನಿಸಿದೆ. ಮೊದಲ ದಿನವೇ ಅನೇಕರು ಹಸುವಿನ ಹಾಲು ಕರೆದಿದ್ದಾರೆ. ಕೆಲವರು ಹಸುವಿನ ಬಳಿ ಒದೆಸಿಕೊಂಡಿದ್ದಾರೆ. ಸಗಣಿ ಕ್ಲೀನ್ ಮಾಡಿ, ಅದರ ವಾಸನೆ ತಡೆಯಲಾರದೆ ಒದ್ದಾಡಿದ್ದಾರೆ. ಈ ಎಲ್ಲಾ ಕಾರಣದಿಂದ ಅನೇಕರು ಸುಸ್ತಾಗಿದ್ದು, ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ‘ಹಳ್ಳಿ ಪವರ್’; ನಗರದಿಂದ ಹಳ್ಳಿ ಸೇರಿದ ಸುಂದರಿಯರ ಪಾಡು ನೋಡಿ

ಸಿಟಿ ಜೀವನ ಇಷ್ಟೇ ಕಷ್ಟ ಆದರೆ, ಕೆಲವರು ಅರ್ಧಕ್ಕೆ ಶೋನಿಂದ ಹೊರ ನಡೆದರೂ ಅಚ್ಚರಿ ಏನಿಲ್ಲ. ಪ್ರತಿ ವಾರ ಇಲ್ಲಿಯೂ ಎಲಿಮಿನೇಷನ್ ಇರುತ್ತದೆ. ಅಲ್ಲದೆ, ಮುಂದಿನ ದಿನಗಳಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೂಡ ಆಗಲಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:38 pm, Tue, 2 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ