AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ವಾರವೇ ‘ಹಳ್ಳಿ ಪವರ್​’ನಿಂದ ಮೂವರು ಔಟ್? ಇಬ್ಬರು ಇಂಜುರಿ, ಒಬ್ಬರು ವಾಕ್​ಔಟ್

ಜೀ ಪವರ್‌ನಲ್ಲಿ ಪ್ರಸಾರವಾಗುತ್ತಿರುವ ‘ಹಳ್ಳಿ ಪವರ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿರುವ ಸ್ಪರ್ಧಿಗಳು ಹಳ್ಳಿ ಜೀವನದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಸ್ನೇಹಾ ಶೆಟ್ಟಿ ವಾಕೌಟ್ ಮಾಡುವ ಬಗ್ಗೆ ಚಿಂತಿಸುತ್ತಿದ್ದಾರೆ, ಟೆಲಿನ್ ಮತ್ತು ಕಾವ್ಯಾ ಗಾಯಗೊಂಡಿದ್ದಾರೆ. 12 ಸ್ಪರ್ಧಿಗಳು ಈ ಶೋನಲ್ಲಿ ಭಾಗವಹಿಸಿದ್ದು, ಭವಿಷ್ಯದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಗಳೂ ಇರಲಿವೆ.

ಮೊದಲ ವಾರವೇ ‘ಹಳ್ಳಿ ಪವರ್​’ನಿಂದ ಮೂವರು ಔಟ್? ಇಬ್ಬರು ಇಂಜುರಿ, ಒಬ್ಬರು ವಾಕ್​ಔಟ್
ಟೆಲಿನ್-ಕಾವ್ಯಾ-ಸ್ನೇಹಾ
ರಾಜೇಶ್ ದುಗ್ಗುಮನೆ
|

Updated on: Sep 04, 2025 | 11:06 AM

Share

‘ಹಳ್ಳಿ ಪವರ್’ (Halli Power) ರಿಯಾಲಿಟಿ ಶೋ ಭರ್ಜರಿಯಾಗಿ ನಡೆಯುತ್ತಿದೆ. ಜೀ ಪವರ್ ​ವಾಹಿನಿಯಲ್ಲಿ ಶೋ ನಡೆಯುತ್ತಿದೆ. ಬರೋಬ್ಬರಿ 12 ಸ್ಪರ್ಧಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಅಕುಲ್ ಬಾಲಾಜಿ ಅವರು ಈ ಶೋನ ನಡೆಸಿಕೊಡುತ್ತಿದ್ದಾರೆ. ಮೊದಲ ವಾರವೇ ಇಬ್ಬರು ಔಟ್ ಆಗುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಒಬ್ಬರಿಗೆ ಗಾಯ ಆದರೆ, ಮತ್ತೊಬ್ಬರಿಗೆ ವಾಕ್​ಔಟ್ ಮಾಡೋ ಮನಸ್ಸು ಬಂದಿದೆ.

ಸಿಟಿಯಲ್ಲಿ ಹುಟ್ಟಿ ಬೆಳೆದ ಹುಡುಗಿಯರಿಗೆ ಹಳ್ಳಿ ಜೀವನ ನೋಡಬೇಕು ಎಂದರೆ ಅದು ಬಲು ಕಷ್ಟ. ಅದರಲ್ಲೂ ಪಕ್ಕಾ ಹಳ್ಳಿ ಜೀವನ ನಡೆಸಬೇಕು ಎಂದರೆ ಅದು ದೊಡ್ಡ ಚಾಲೆಂಜ್. ಅಲ್ಲದೆ, ಮೊಬೈಲ್ ಬಳಕೆಗೂ ಇಲ್ಲಿ ಅವಕಾಶ ಇಲ್ಲ. ಇದು ಪ್ಯಾಟೆ ಹುಡುಗಿಯರಿಗೆ ಸಾಕಷ್ಟು ಕಷ್ಟ ಎನಿಸಿದೆ. ಇದಕ್ಕೆ ಅನೇಕರು ಸುಸ್ತಾಗಿದ್ದಾರೆ.

ಇದನ್ನೂ ಓದಿ
Image
ಶಂಕರ್​ ನಾಗ್​​ಗೆ ಅಣ್ಣ ಮಾತ್ರ ಅಲ್ಲ, ಸಾಕು ತಂದೆಯೂ ಆಗಿದ್ದ ಅನಂತ್ ನಾಗ್
Image
‘ಕಾಂತಾರ: ಚಾಪ್ಟರ್​ 1’ ಎದುರು ರಿಲೀಸ್ ಆಗಲಿದೆ ದೊಡ್ಡ ಹೀರೋ ಸಿನಿಮಾ
Image
ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಫೈನಲ್ ಆದ ಮೂವರು ಸ್ಪರ್ಧಿಗಳು ಇವರೇ ನೋಡಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

‘ಹಳ್ಳಿ ಪವರ್’ ಕಾರ್ಯಕ್ರಮದಲ್ಲಿ ಮಂಗಳೂರಿನ ಸ್ನೇಹಾ ಶೆಟ್ಟಿ ಮೊದಲ ವಾರವೇ ಸುಸ್ತಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಸ್ನೇಹಾ ಅವರು ತುಂಬಾನೇ ಸಾಫ್ಟ್ ಆಗಿ ಬೆಳೆದವರು. ಅವರಿಗೆ ಕಷ್ಟ ಎಂಬುದೇ ಗೊತ್ತಿಲ್ಲ. ಆದರೆ, ‘ಹಳ್ಳಿ ಪವರ್’ನಲ್ಲಿ ಹಳ್ಳಿ ಮನೆಯವರ ಕೆಲಸ ಮಾಡುತ್ತಿದ್ದಾರೆ. ವಿವಿಧ ಕೆಲಸಗಳನ್ನು ಮಾಡಿ ಸ್ನೇಹಾ ಸುಸ್ತಾಗಿದ್ದಾರೆ. ‘ನಾನು ವಾಕೌಟ್ ಮಾಡ್ತೀನಿ’ ಎಂದು ನೇರವಾಗಿ ಹೇಳಿದ್ದಾರೆ. ಆ ಬಳಿಕ ಅಕುಲ್ ಬಾಲಾಜಿ ಅವರು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಸ್ನೇಹಾ ಮನಸ್ಸು ಬದಲಾಯಿಸಿದ್ದಾರೆ. ಆದರೆ, ವಾಕೌಟ್ ಮಾಡಬೇಕು ಎಂಬುದು ಅವರ ಮನಸ್ಸಿಗೆ ಬಂದಿದೆ.

ಇದನ್ನೂ ಓದಿ: ಹಳ್ಳಿ ಪವರ್; ಹಾಲು ಕರೆಯೋ ಟಾಸ್ಕ್​ನಲ್ಲಿ ಸೋತವರಿಗೆ ಸಗಣಿ ನೀರ ಸ್ನಾನ; ಬಂತು ವಾಕರಿಕೆ

ಇನ್ನು, ಟೆಲಿನ್ ಅವರು ಇತ್ತೀಚೆಗೆ ಟಾಸ್ಕ್ ಆಡುವಾಗ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರ ಕಾಲು ಟ್ವಿಸ್ಟ್ ಆಗಿತ್ತು. ಹೀಗಾಗಿ, ಅವರ ಕಾಲಿಗೆ ಪ್ಲಾಸ್ಟರ್ ಹಾಕಲಾಗಿದೆ. ಅವರು ಓಡಾಡಲು ಕೂಡ ಕಷ್ಟಪಡುತ್ತಿದ್ದಾರೆ. ಕಾವ್ಯಾ ಕಾಲಿಗೂ ಪೆಟ್ಟಾಗಿದೆ. ಹೀಗಾಗಿ, ಇವರಿಬ್ಬರು ಯಾವಾಗ ಬೇಕಿದ್ದರೂ ಔಟ್ ಆಗೋ ಸಾಧ್ಯತೆ ಇದೆ. ಸದ್ಯ ಒಟ್ಟು 12 ಸ್ಪರ್ಧಿಗಳು ಇದ್ದಾರೆ. ಮುಂದಿನ ದಿನಗಳಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೂಡ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ