AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಟ್ ಆದ ವ್ಯಕ್ತಿಯ ಮೇಲಿನ ವಿಶೇಷ ಪ್ರೀತಿಗೆ ಅವರ ವಸ್ತುವನ್ನು ಎತ್ತಿಟ್ಟುಕೊಂಡ ಹಂಸಾ  

ಜಗದೀಶ್ ಅವರು ಹಂಸಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದರು. ಇದು ಸಾಕಷ್ಟು ಶಾಕಿಂಗ್ ಎನಿಸಿತ್ತು. ಇದನ್ನು ಇಡೀ ಮನೆ ಖಂಡಿಸಿತು. ಸಂದರ್ಭದಲ್ಲಿ ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಹೀಗಾಗಿ, ಬಿಗ್ ಬಾಸ್ ಮನೆಯಿಂದ ಇಬ್ಬರನ್ನೂ ಹೊರಕ್ಕೆ ಹಾಕಲಾಗಿದೆ.

ಎಲಿಮಿನೇಟ್ ಆದ ವ್ಯಕ್ತಿಯ ಮೇಲಿನ ವಿಶೇಷ ಪ್ರೀತಿಗೆ ಅವರ ವಸ್ತುವನ್ನು ಎತ್ತಿಟ್ಟುಕೊಂಡ ಹಂಸಾ  
ಹಂಸಾ
ರಾಜೇಶ್ ದುಗ್ಗುಮನೆ
|

Updated on:Oct 19, 2024 | 6:51 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವಾರದ ಮಧ್ಯವೇ ಎಲಿಮಿನೇಷನ್ ನಡೆದು ಹೋಗಿದೆ. ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದಾರೆ. ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿ ಎಲಿಮಿನೇಟ್ ಆದರೆ, ರಂಜಿತ್ ಅವರು ಜಗದೀಶ್​ನ ತಳ್ಳಿದ ಕಾರಣಕ್ಕೆ ಹೊರಕ್ಕೆ ಹೋಗಿದ್ದಾರೆ. ರಂಜಿತ್ ಅವರ ಬ್ಯಾಗ್​ನಿಂದ ಒಂದು ವಿಶೇಷ ವಸ್ತುವನ್ನು ಹಂಸಾ ನೆನಪಿಗಾಗಿ ಎತ್ತಿಟ್ಟುಕೊಂಡಿದ್ದಾರೆ.

ಜಗದೀಶ್ ಅವರು ಹಂಸಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದರು. ಇದು ಸಾಕಷ್ಟು ಶಾಕಿಂಗ್ ಎನಿಸಿತ್ತು. ಇದನ್ನು ಇಡೀ ಮನೆ ಖಂಡಿಸಿತು. ಆದಾಗ್ಯೂ ಜಗದೀಶ್ ಅವರು ಸ್ತಿಮಿತತೆ ಕಳೆದುಕೊಂಡು ಬಾಯಿಗೆ ಬಂದಂತೆ ಹೇಳುತ್ತಲೇ ಹೋದರು. ಈ ಸಂದರ್ಭದಲ್ಲಿ ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಹೀಗಾಗಿ, ಬಿಗ್ ಬಾಸ್ ಮನೆಯಿಂದ ಇಬ್ಬರನ್ನೂ ಹೊರಕ್ಕೆ ಹಾಕಲಾಗಿದೆ.

ಬಿಗ್ ಬಾಸ್​ನಿಂದ ಮೊದಲು ಹೊರ ಹೋಗಿದ್ದು ಜಗದೀಶ್. ಆಗ ಎಲ್ಲರೂ ಖುಷಿಯಿಂದ ಕೇಕೆ ಹಾಕಿದರು. ಆದರೆ, ರಂಜಿತ್ ಕೂಡ ಎಲಿಮಿನೇಟ್ ಆಗುತ್ತಾರೆ ಎಂದು ಅಲ್ಲಿದ್ದ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರು ಹೊರ ಹೋಗುತ್ತಿದ್ದಂತೆ ಎಲ್ಲರೂ ಬಿಗ್ ಬಾಸ್ ಬಳಿ ಮನವಿ ಮಾಡಿದರು. ಆ ಬಳಿಕ ದೊಡ್ಮನೆಯಲ್ಲಿ ಎಲ್ಲರೂ ಕಣ್ಣೀರು ಹಾಕಿದರು.

ಇದನ್ನೂ ಓದಿ: ಇಡೀ ಮನೆಗೆ ಕಣ್ಣೀರು ತರಿಸಿದ ಶಾಕಿಂಗ್ ಎಲಿಮಿನೇಷನ್; ಇದನ್ನು ಯಾರೂ ಊಹಿಸಿರಲಿಲ್ಲ

ರಂಜಿತ್ ಅವರು ಹೊರ ಹೋದ ಬಳಿಕ ಅವರ ಬ್ಯಾಗ್​ನ ಪ್ಯಾಕ್ ಮಾಡಿ ಇಡಬೇಕಿತ್ತು. ಅಂತೆಯೇ ಎಲ್ಲರೂ ರಂಜಿತ್ ಬ್ಯಾಗ್​ನ ಪ್ಯಾಕ್ ಮಾಡುತ್ತಿದ್ದರು. ಆಗ ಅಲ್ಲಿಗೆ ಬಂದ ಹಂಸಾ ಅವರು ರಂಜಿತ್ ಅವರ ವುಲ್ಲನ್ ಕ್ಯಾಪ್​ನ ತೆಗೆದುಕೊಂಡರು. ಚಳಿ ಆಗುವ ಸಂದರ್ಭದಲ್ಲಿ ಈ ಕ್ಯಾಪ್​ನ ರಂಜಿತ್ ಧರಿಸುತ್ತಿದ್ದರು. ಹೊರ ಬಂದ ಬಳಿಕ ಈ ಕ್ಯಾಪ್​ನ ಕೊಡೋದಾಗಿ ಅವರು ಹೇಳಿದ್ದಾರೆ. ಅಷ್ಟೇ ಅಲ್ಲ ರಂಜಿತ್ ಮೇಲಿನ ವಿಶೇಷ ಪ್ರೀತಿಗೆ ಅವರು ಕ್ಯಾಪ್​ನ ಸದಾ ಧರಿಸಿರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Sat, 19 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ