AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಟ್ ಆದ ವ್ಯಕ್ತಿಯ ಮೇಲಿನ ವಿಶೇಷ ಪ್ರೀತಿಗೆ ಅವರ ವಸ್ತುವನ್ನು ಎತ್ತಿಟ್ಟುಕೊಂಡ ಹಂಸಾ  

ಜಗದೀಶ್ ಅವರು ಹಂಸಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದರು. ಇದು ಸಾಕಷ್ಟು ಶಾಕಿಂಗ್ ಎನಿಸಿತ್ತು. ಇದನ್ನು ಇಡೀ ಮನೆ ಖಂಡಿಸಿತು. ಸಂದರ್ಭದಲ್ಲಿ ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಹೀಗಾಗಿ, ಬಿಗ್ ಬಾಸ್ ಮನೆಯಿಂದ ಇಬ್ಬರನ್ನೂ ಹೊರಕ್ಕೆ ಹಾಕಲಾಗಿದೆ.

ಎಲಿಮಿನೇಟ್ ಆದ ವ್ಯಕ್ತಿಯ ಮೇಲಿನ ವಿಶೇಷ ಪ್ರೀತಿಗೆ ಅವರ ವಸ್ತುವನ್ನು ಎತ್ತಿಟ್ಟುಕೊಂಡ ಹಂಸಾ  
ಹಂಸಾ
ರಾಜೇಶ್ ದುಗ್ಗುಮನೆ
|

Updated on:Oct 19, 2024 | 6:51 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವಾರದ ಮಧ್ಯವೇ ಎಲಿಮಿನೇಷನ್ ನಡೆದು ಹೋಗಿದೆ. ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದಾರೆ. ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿ ಎಲಿಮಿನೇಟ್ ಆದರೆ, ರಂಜಿತ್ ಅವರು ಜಗದೀಶ್​ನ ತಳ್ಳಿದ ಕಾರಣಕ್ಕೆ ಹೊರಕ್ಕೆ ಹೋಗಿದ್ದಾರೆ. ರಂಜಿತ್ ಅವರ ಬ್ಯಾಗ್​ನಿಂದ ಒಂದು ವಿಶೇಷ ವಸ್ತುವನ್ನು ಹಂಸಾ ನೆನಪಿಗಾಗಿ ಎತ್ತಿಟ್ಟುಕೊಂಡಿದ್ದಾರೆ.

ಜಗದೀಶ್ ಅವರು ಹಂಸಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದರು. ಇದು ಸಾಕಷ್ಟು ಶಾಕಿಂಗ್ ಎನಿಸಿತ್ತು. ಇದನ್ನು ಇಡೀ ಮನೆ ಖಂಡಿಸಿತು. ಆದಾಗ್ಯೂ ಜಗದೀಶ್ ಅವರು ಸ್ತಿಮಿತತೆ ಕಳೆದುಕೊಂಡು ಬಾಯಿಗೆ ಬಂದಂತೆ ಹೇಳುತ್ತಲೇ ಹೋದರು. ಈ ಸಂದರ್ಭದಲ್ಲಿ ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಹೀಗಾಗಿ, ಬಿಗ್ ಬಾಸ್ ಮನೆಯಿಂದ ಇಬ್ಬರನ್ನೂ ಹೊರಕ್ಕೆ ಹಾಕಲಾಗಿದೆ.

ಬಿಗ್ ಬಾಸ್​ನಿಂದ ಮೊದಲು ಹೊರ ಹೋಗಿದ್ದು ಜಗದೀಶ್. ಆಗ ಎಲ್ಲರೂ ಖುಷಿಯಿಂದ ಕೇಕೆ ಹಾಕಿದರು. ಆದರೆ, ರಂಜಿತ್ ಕೂಡ ಎಲಿಮಿನೇಟ್ ಆಗುತ್ತಾರೆ ಎಂದು ಅಲ್ಲಿದ್ದ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರು ಹೊರ ಹೋಗುತ್ತಿದ್ದಂತೆ ಎಲ್ಲರೂ ಬಿಗ್ ಬಾಸ್ ಬಳಿ ಮನವಿ ಮಾಡಿದರು. ಆ ಬಳಿಕ ದೊಡ್ಮನೆಯಲ್ಲಿ ಎಲ್ಲರೂ ಕಣ್ಣೀರು ಹಾಕಿದರು.

ಇದನ್ನೂ ಓದಿ: ಇಡೀ ಮನೆಗೆ ಕಣ್ಣೀರು ತರಿಸಿದ ಶಾಕಿಂಗ್ ಎಲಿಮಿನೇಷನ್; ಇದನ್ನು ಯಾರೂ ಊಹಿಸಿರಲಿಲ್ಲ

ರಂಜಿತ್ ಅವರು ಹೊರ ಹೋದ ಬಳಿಕ ಅವರ ಬ್ಯಾಗ್​ನ ಪ್ಯಾಕ್ ಮಾಡಿ ಇಡಬೇಕಿತ್ತು. ಅಂತೆಯೇ ಎಲ್ಲರೂ ರಂಜಿತ್ ಬ್ಯಾಗ್​ನ ಪ್ಯಾಕ್ ಮಾಡುತ್ತಿದ್ದರು. ಆಗ ಅಲ್ಲಿಗೆ ಬಂದ ಹಂಸಾ ಅವರು ರಂಜಿತ್ ಅವರ ವುಲ್ಲನ್ ಕ್ಯಾಪ್​ನ ತೆಗೆದುಕೊಂಡರು. ಚಳಿ ಆಗುವ ಸಂದರ್ಭದಲ್ಲಿ ಈ ಕ್ಯಾಪ್​ನ ರಂಜಿತ್ ಧರಿಸುತ್ತಿದ್ದರು. ಹೊರ ಬಂದ ಬಳಿಕ ಈ ಕ್ಯಾಪ್​ನ ಕೊಡೋದಾಗಿ ಅವರು ಹೇಳಿದ್ದಾರೆ. ಅಷ್ಟೇ ಅಲ್ಲ ರಂಜಿತ್ ಮೇಲಿನ ವಿಶೇಷ ಪ್ರೀತಿಗೆ ಅವರು ಕ್ಯಾಪ್​ನ ಸದಾ ಧರಿಸಿರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Sat, 19 October 24

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ