AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋ ಫಿನಾಲೆಗೆ ಹನುಮಂತ ಎಂಟ್ರಿ ನೀಡಿದ್ದಾರೆ. ಅವರ ಮುಂದೆ ಘಟಾನುಘಟಿ ಸ್ಪರ್ಧಿಗಳು ಕೂಡ ಗಪ್​ಚುಪ್ ಆಗಿದ್ದಾರೆ. ಎಲ್ಲರಿಗೂ ಟಫ್​ ಸ್ಪರ್ಧೆ ನೀಡಿ ಹನುಮಂತ ಅವರು ಫಿನಾಲೆಯ ಟಿಕೆಟ್​ ಪಡೆದುಕೊಂಡಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ರಜತ್ ಅವರಿಗೆ ಫಿನಾಲೆ ಟಿಕೆಟ್ ಮಿಸ್ ಆಗಿದೆ.

ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​
Hanumantha
ಮದನ್​ ಕುಮಾರ್​
|

Updated on: Jan 10, 2025 | 10:54 PM

Share

ಸಿಕ್ಕಾಪಟ್ಟೆ ಸಿಂಪಲ್ ಆಗಿ ಕಾಣಿಸುವ ಹನುಮಂತ ಸಾಮಾನ್ಯ ವ್ಯಕ್ತಿ ಅಲ್ಲ. ಆಟದಲ್ಲಿ ಅವರ ಚುರುಕುತನಕ್ಕೆ ಯಾರೂ ಸರಿಸಾಟಿ ಇಲ್ಲ. ಹೆಚ್ಚೇನೂ ಲೆಕ್ಕಾಚಾರ ಹಾಕದ ಅವರು ಆಟದ ಮೇಲೆ ಪೂರ್ಣ ಗಮನ ನೀಡುತ್ತಾರೆ. ಯಾವುದೇ ಟೆನ್ಷನ್​ ಮಾಡಿಕೊಳ್ಳದೇ ಟಾಸ್ಕ್​ ಆಡುತ್ತಾರೆ. ಅದರ ಫಲವಾಗಿ ಅವರಿಗೆ ಈಗಾಗಲೇ ಅನೇಕರ ಮೆಚ್ಚುಗೆ ಸಿಕ್ಕಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು ‘ಬಿಗ್ ಬಾಸ್​ ಕನ್ನಡ 11’ ಕಾರ್ಯಕ್ರಮದ ಫಿನಾಲೆ ಸ್ಪರ್ಧಿಯಾಗಿ ಆಯ್ಕೆ ಆಗಿದ್ದಾರೆ. ಸದ್ಯ ಬಿಗ್ ಬಾಸ್​ ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ.

ಫಿನಾಲೆ ಟಿಕೆಟ್​ ಪಡೆಯಲು ಬಿಗ್ ಬಾಸ್​ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಭವ್ಯಾ ಗೌಡ ಅವರು 3 ನಿಮಿಷ 22 ಸೆಕೆಂಡ್​​ ತೆಗೆದುಕೊಂಡರು. ರಜತ್ ಅವರು 3 ನಿಮಿಷ 49 ಸೆಕೆಂಡ್ ತೆಗೆದುಕೊಂಡರು. ತ್ರಿವಿಕ್ರಮ್ ಅವರು 2 ನಿಮಿಷ 30 ಸೆಕೆಂಡ್​ ಪಡೆದುಕೊಂಡರು.

ಎಲ್ಲರಿಗಿಂತಲೂ ಕಡಿಮೆ ಸಮಯದಲ್ಲಿ ಟಾಸ್ಕ್​ ಪೂರ್ಣಗೊಳಿಸಿದ್ದು ಹನುಮಂತ. ಅವರು ಕೇವಲ 2 ನಿಮಿಷ 27 ಸೆಕೆಂಡ್​ ತೆಗೆದುಕೊಂಡು ಜಯ ಸಾಧಿಸಿದರು. ‘ಛೂ ಮಂತರ್​’ ಸಿನಿಮಾದ ನಾಯಕ ನಟ ಶರಣ್ ಹಾಗೂ ನಾಯಕಿ ಅದಿತಿ ಪ್ರಭುದೇವ ಅವರು ಬಿಗ್ ಬಾಸ್ ಮನೆಗೆ ಬಂದು ಹನುಮಂತ ಅವರಿಗೆ ಫಿನಾಲೆಯ ಟಿಕೆಟ್​ ನೀಡಿದರು. ಹನುಮಂತನ ಈ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸಿದರು. ಕೇವಲ 3 ಸೆಕೆಂಡ್​ ಅಂತರದಲ್ಲಿ ಸೋತಿದ್ದಕ್ಕೆ ತ್ರಿವಿಕ್ರಮ್ ಅವರಿಗೆ ಬೇಸರ ಆಯಿತು. ಇಲ್ಲಿಯ ತನಕ ಬಂದು ಫಿನಾಲೆ ಟಿಕೆಟ್ ಮಿಸ್ ಮಾಡಿಕೊಂಡಿದ್ದಕ್ಕೆ ಭವ್ಯಾ ಗೌಡ ಕೂಡ ಸಖತ್ ಬೇಸರ ಮಾಡಿಕೊಂಡರು.

ಇದನ್ನೂ ಓದಿ: ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಯಾರ ಬಳಿಯೂ ದ್ವೇಷ ಕಟ್ಟಿಕೊಂಡಿಲ್ಲ. ಹಾಗಂತ ಅವರು ತಮ್ಮ ಅಭಿಪ್ರಾಯವನ್ನು ಹೇಳದೇ ಉಳಿದಿಲ್ಲ. ಎಲ್ಲವನ್ನೂ ಶುದ್ಧ ಮನಸ್ಸಿನಿಂದ ಹೇಳಿದ್ದರಿಂದ ಅವರನ್ನು ಯಾರೂ ದ್ವೇಷಿಸುತ್ತಿಲ್ಲ. ಹೊರಗೆ ಕೂಡ ಹನುಮಂತ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ಹನುಮಂತ ಅಂತಮವಾಗಿ ಫಿನಾಲೆ ಘಟ್ಟಕ್ಕೆ ಬಂದಿದ್ದಾರೆ. ಅಲ್ಲದೇ ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಕೂಡ ಅವರು ಆಯ್ಕೆ ಆಗಿದ್ದಾರೆ. ಆದ್ದರಿಂದ ಅವರನ್ನು ಅಲ್ಟಿಮೇಟ್​ ಕ್ಯಾಪ್ಟನ್​ ಎಂದು ಘೋಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು