AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋ ಫಿನಾಲೆಗೆ ಹನುಮಂತ ಎಂಟ್ರಿ ನೀಡಿದ್ದಾರೆ. ಅವರ ಮುಂದೆ ಘಟಾನುಘಟಿ ಸ್ಪರ್ಧಿಗಳು ಕೂಡ ಗಪ್​ಚುಪ್ ಆಗಿದ್ದಾರೆ. ಎಲ್ಲರಿಗೂ ಟಫ್​ ಸ್ಪರ್ಧೆ ನೀಡಿ ಹನುಮಂತ ಅವರು ಫಿನಾಲೆಯ ಟಿಕೆಟ್​ ಪಡೆದುಕೊಂಡಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ರಜತ್ ಅವರಿಗೆ ಫಿನಾಲೆ ಟಿಕೆಟ್ ಮಿಸ್ ಆಗಿದೆ.

ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​
Hanumantha
ಮದನ್​ ಕುಮಾರ್​
|

Updated on: Jan 10, 2025 | 10:54 PM

Share

ಸಿಕ್ಕಾಪಟ್ಟೆ ಸಿಂಪಲ್ ಆಗಿ ಕಾಣಿಸುವ ಹನುಮಂತ ಸಾಮಾನ್ಯ ವ್ಯಕ್ತಿ ಅಲ್ಲ. ಆಟದಲ್ಲಿ ಅವರ ಚುರುಕುತನಕ್ಕೆ ಯಾರೂ ಸರಿಸಾಟಿ ಇಲ್ಲ. ಹೆಚ್ಚೇನೂ ಲೆಕ್ಕಾಚಾರ ಹಾಕದ ಅವರು ಆಟದ ಮೇಲೆ ಪೂರ್ಣ ಗಮನ ನೀಡುತ್ತಾರೆ. ಯಾವುದೇ ಟೆನ್ಷನ್​ ಮಾಡಿಕೊಳ್ಳದೇ ಟಾಸ್ಕ್​ ಆಡುತ್ತಾರೆ. ಅದರ ಫಲವಾಗಿ ಅವರಿಗೆ ಈಗಾಗಲೇ ಅನೇಕರ ಮೆಚ್ಚುಗೆ ಸಿಕ್ಕಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು ‘ಬಿಗ್ ಬಾಸ್​ ಕನ್ನಡ 11’ ಕಾರ್ಯಕ್ರಮದ ಫಿನಾಲೆ ಸ್ಪರ್ಧಿಯಾಗಿ ಆಯ್ಕೆ ಆಗಿದ್ದಾರೆ. ಸದ್ಯ ಬಿಗ್ ಬಾಸ್​ ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ.

ಫಿನಾಲೆ ಟಿಕೆಟ್​ ಪಡೆಯಲು ಬಿಗ್ ಬಾಸ್​ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಭವ್ಯಾ ಗೌಡ ಅವರು 3 ನಿಮಿಷ 22 ಸೆಕೆಂಡ್​​ ತೆಗೆದುಕೊಂಡರು. ರಜತ್ ಅವರು 3 ನಿಮಿಷ 49 ಸೆಕೆಂಡ್ ತೆಗೆದುಕೊಂಡರು. ತ್ರಿವಿಕ್ರಮ್ ಅವರು 2 ನಿಮಿಷ 30 ಸೆಕೆಂಡ್​ ಪಡೆದುಕೊಂಡರು.

ಎಲ್ಲರಿಗಿಂತಲೂ ಕಡಿಮೆ ಸಮಯದಲ್ಲಿ ಟಾಸ್ಕ್​ ಪೂರ್ಣಗೊಳಿಸಿದ್ದು ಹನುಮಂತ. ಅವರು ಕೇವಲ 2 ನಿಮಿಷ 27 ಸೆಕೆಂಡ್​ ತೆಗೆದುಕೊಂಡು ಜಯ ಸಾಧಿಸಿದರು. ‘ಛೂ ಮಂತರ್​’ ಸಿನಿಮಾದ ನಾಯಕ ನಟ ಶರಣ್ ಹಾಗೂ ನಾಯಕಿ ಅದಿತಿ ಪ್ರಭುದೇವ ಅವರು ಬಿಗ್ ಬಾಸ್ ಮನೆಗೆ ಬಂದು ಹನುಮಂತ ಅವರಿಗೆ ಫಿನಾಲೆಯ ಟಿಕೆಟ್​ ನೀಡಿದರು. ಹನುಮಂತನ ಈ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸಿದರು. ಕೇವಲ 3 ಸೆಕೆಂಡ್​ ಅಂತರದಲ್ಲಿ ಸೋತಿದ್ದಕ್ಕೆ ತ್ರಿವಿಕ್ರಮ್ ಅವರಿಗೆ ಬೇಸರ ಆಯಿತು. ಇಲ್ಲಿಯ ತನಕ ಬಂದು ಫಿನಾಲೆ ಟಿಕೆಟ್ ಮಿಸ್ ಮಾಡಿಕೊಂಡಿದ್ದಕ್ಕೆ ಭವ್ಯಾ ಗೌಡ ಕೂಡ ಸಖತ್ ಬೇಸರ ಮಾಡಿಕೊಂಡರು.

ಇದನ್ನೂ ಓದಿ: ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಯಾರ ಬಳಿಯೂ ದ್ವೇಷ ಕಟ್ಟಿಕೊಂಡಿಲ್ಲ. ಹಾಗಂತ ಅವರು ತಮ್ಮ ಅಭಿಪ್ರಾಯವನ್ನು ಹೇಳದೇ ಉಳಿದಿಲ್ಲ. ಎಲ್ಲವನ್ನೂ ಶುದ್ಧ ಮನಸ್ಸಿನಿಂದ ಹೇಳಿದ್ದರಿಂದ ಅವರನ್ನು ಯಾರೂ ದ್ವೇಷಿಸುತ್ತಿಲ್ಲ. ಹೊರಗೆ ಕೂಡ ಹನುಮಂತ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ಹನುಮಂತ ಅಂತಮವಾಗಿ ಫಿನಾಲೆ ಘಟ್ಟಕ್ಕೆ ಬಂದಿದ್ದಾರೆ. ಅಲ್ಲದೇ ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಕೂಡ ಅವರು ಆಯ್ಕೆ ಆಗಿದ್ದಾರೆ. ಆದ್ದರಿಂದ ಅವರನ್ನು ಅಲ್ಟಿಮೇಟ್​ ಕ್ಯಾಪ್ಟನ್​ ಎಂದು ಘೋಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ