Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋ ಫಿನಾಲೆಗೆ ಹನುಮಂತ ಎಂಟ್ರಿ ನೀಡಿದ್ದಾರೆ. ಅವರ ಮುಂದೆ ಘಟಾನುಘಟಿ ಸ್ಪರ್ಧಿಗಳು ಕೂಡ ಗಪ್​ಚುಪ್ ಆಗಿದ್ದಾರೆ. ಎಲ್ಲರಿಗೂ ಟಫ್​ ಸ್ಪರ್ಧೆ ನೀಡಿ ಹನುಮಂತ ಅವರು ಫಿನಾಲೆಯ ಟಿಕೆಟ್​ ಪಡೆದುಕೊಂಡಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ರಜತ್ ಅವರಿಗೆ ಫಿನಾಲೆ ಟಿಕೆಟ್ ಮಿಸ್ ಆಗಿದೆ.

ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​
Hanumantha
Follow us
ಮದನ್​ ಕುಮಾರ್​
|

Updated on: Jan 10, 2025 | 10:54 PM

ಸಿಕ್ಕಾಪಟ್ಟೆ ಸಿಂಪಲ್ ಆಗಿ ಕಾಣಿಸುವ ಹನುಮಂತ ಸಾಮಾನ್ಯ ವ್ಯಕ್ತಿ ಅಲ್ಲ. ಆಟದಲ್ಲಿ ಅವರ ಚುರುಕುತನಕ್ಕೆ ಯಾರೂ ಸರಿಸಾಟಿ ಇಲ್ಲ. ಹೆಚ್ಚೇನೂ ಲೆಕ್ಕಾಚಾರ ಹಾಕದ ಅವರು ಆಟದ ಮೇಲೆ ಪೂರ್ಣ ಗಮನ ನೀಡುತ್ತಾರೆ. ಯಾವುದೇ ಟೆನ್ಷನ್​ ಮಾಡಿಕೊಳ್ಳದೇ ಟಾಸ್ಕ್​ ಆಡುತ್ತಾರೆ. ಅದರ ಫಲವಾಗಿ ಅವರಿಗೆ ಈಗಾಗಲೇ ಅನೇಕರ ಮೆಚ್ಚುಗೆ ಸಿಕ್ಕಿದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು ‘ಬಿಗ್ ಬಾಸ್​ ಕನ್ನಡ 11’ ಕಾರ್ಯಕ್ರಮದ ಫಿನಾಲೆ ಸ್ಪರ್ಧಿಯಾಗಿ ಆಯ್ಕೆ ಆಗಿದ್ದಾರೆ. ಸದ್ಯ ಬಿಗ್ ಬಾಸ್​ ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ.

ಫಿನಾಲೆ ಟಿಕೆಟ್​ ಪಡೆಯಲು ಬಿಗ್ ಬಾಸ್​ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಭವ್ಯಾ ಗೌಡ ಅವರು 3 ನಿಮಿಷ 22 ಸೆಕೆಂಡ್​​ ತೆಗೆದುಕೊಂಡರು. ರಜತ್ ಅವರು 3 ನಿಮಿಷ 49 ಸೆಕೆಂಡ್ ತೆಗೆದುಕೊಂಡರು. ತ್ರಿವಿಕ್ರಮ್ ಅವರು 2 ನಿಮಿಷ 30 ಸೆಕೆಂಡ್​ ಪಡೆದುಕೊಂಡರು.

ಎಲ್ಲರಿಗಿಂತಲೂ ಕಡಿಮೆ ಸಮಯದಲ್ಲಿ ಟಾಸ್ಕ್​ ಪೂರ್ಣಗೊಳಿಸಿದ್ದು ಹನುಮಂತ. ಅವರು ಕೇವಲ 2 ನಿಮಿಷ 27 ಸೆಕೆಂಡ್​ ತೆಗೆದುಕೊಂಡು ಜಯ ಸಾಧಿಸಿದರು. ‘ಛೂ ಮಂತರ್​’ ಸಿನಿಮಾದ ನಾಯಕ ನಟ ಶರಣ್ ಹಾಗೂ ನಾಯಕಿ ಅದಿತಿ ಪ್ರಭುದೇವ ಅವರು ಬಿಗ್ ಬಾಸ್ ಮನೆಗೆ ಬಂದು ಹನುಮಂತ ಅವರಿಗೆ ಫಿನಾಲೆಯ ಟಿಕೆಟ್​ ನೀಡಿದರು. ಹನುಮಂತನ ಈ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸಿದರು. ಕೇವಲ 3 ಸೆಕೆಂಡ್​ ಅಂತರದಲ್ಲಿ ಸೋತಿದ್ದಕ್ಕೆ ತ್ರಿವಿಕ್ರಮ್ ಅವರಿಗೆ ಬೇಸರ ಆಯಿತು. ಇಲ್ಲಿಯ ತನಕ ಬಂದು ಫಿನಾಲೆ ಟಿಕೆಟ್ ಮಿಸ್ ಮಾಡಿಕೊಂಡಿದ್ದಕ್ಕೆ ಭವ್ಯಾ ಗೌಡ ಕೂಡ ಸಖತ್ ಬೇಸರ ಮಾಡಿಕೊಂಡರು.

ಇದನ್ನೂ ಓದಿ: ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಯಾರ ಬಳಿಯೂ ದ್ವೇಷ ಕಟ್ಟಿಕೊಂಡಿಲ್ಲ. ಹಾಗಂತ ಅವರು ತಮ್ಮ ಅಭಿಪ್ರಾಯವನ್ನು ಹೇಳದೇ ಉಳಿದಿಲ್ಲ. ಎಲ್ಲವನ್ನೂ ಶುದ್ಧ ಮನಸ್ಸಿನಿಂದ ಹೇಳಿದ್ದರಿಂದ ಅವರನ್ನು ಯಾರೂ ದ್ವೇಷಿಸುತ್ತಿಲ್ಲ. ಹೊರಗೆ ಕೂಡ ಹನುಮಂತ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ಹನುಮಂತ ಅಂತಮವಾಗಿ ಫಿನಾಲೆ ಘಟ್ಟಕ್ಕೆ ಬಂದಿದ್ದಾರೆ. ಅಲ್ಲದೇ ಈ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಕೂಡ ಅವರು ಆಯ್ಕೆ ಆಗಿದ್ದಾರೆ. ಆದ್ದರಿಂದ ಅವರನ್ನು ಅಲ್ಟಿಮೇಟ್​ ಕ್ಯಾಪ್ಟನ್​ ಎಂದು ಘೋಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ