AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanumantha Lamani: 50 ಲಕ್ಷದಲ್ಲಿ ಹನುಮಂತಗೆ ಸಿಗೋ ಹಣ ಎಷ್ಟು? ಕಟ್ ಆಗೋ ತೆರಿಗೆ ಎಷ್ಟು?

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ವಿಜೇತರಾಗಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ. ಆದರೆ, ಇಷ್ಟೂ ಹಣ ಅವರಿಗೆ ಸಿಗೋದಿಲ್ಲ. ಸರ್ಕಾರ ದೊಡ್ಡ ಮೊತ್ತದ ತೆರಿಗೆಯನ್ನು ವಿಜೇತರಿಗೆ ವಿಧಿಸುತ್ತದೆ. ಇದನ್ನು ಸರ್ಕಾರಕ್ಕೆ ಅವರು ಪಾವತಿಸಬೇಕಾಗುತ್ತದೆ. ಟಿವಿ ರಿಯಾಲಿಟಿ ಶೋ, ಲಾಟರಿ, ಸ್ಪರ್ಧೆ, ಕಾರ್ಡ್​ ಗೇಮ್​ನಲ್ಲಿ ಆಡಿ ಗೆದ್ದಲ್ಲಿಈ ತೆರಿಗೆ ಪಾವತಿಸಬೇಕಾಗುತ್ತದೆ.

Hanumantha Lamani: 50 ಲಕ್ಷದಲ್ಲಿ ಹನುಮಂತಗೆ ಸಿಗೋ ಹಣ ಎಷ್ಟು? ಕಟ್ ಆಗೋ ತೆರಿಗೆ ಎಷ್ಟು?
ಹನುಮಂತ
ರಾಜೇಶ್ ದುಗ್ಗುಮನೆ
|

Updated on:Jan 27, 2025 | 7:01 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ವಿನ್ನರ್ ಎಂದು ಘೋಷಣೆ ಆಗಿದೆ. ಅವರು ದೊಡ್ಮನೆಯಲ್ಲಿ ಕೆಲ ವಾರಗಳ ಬಳಿಕ ಎಂಟ್ರಿ ಕೊಟ್ಟರೂ ಮೆಚ್ಚುಗೆ ಪಡೆದರು. ಈಗ ದೊಡ್ಮನೆಯಲ್ಲಿ ಅವರು ಕಪ್ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಅವರಿಗೆ ಬಿಗ್ ಬಾಸ್ ಬಹುಮಾನ ಮೊತ್ತವಾಗಿ ಬರೋಬ್ಬರಿ 50 ಲಕ್ಷ ರೂಪಾಯಿ ಸಿಕ್ಕಿದೆ. ಆದರೆ, ಇದರಲ್ಲಿ ಸಂಪೂರ್ಣ ಮೊತ್ತ ಅವರಿಗೆ ಸಿಗೋದಿಲ್ಲ.

‘ಬಿಗ್ ಬಾಸ್ ಕನ್ನಡ’ ದೊಡ್ಡ ಮಟ್ಟದ ಜನಪ್ರಿಯತೆ ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ 50 ಲಕ್ಷ ರೂಪಾಯಿ ಸಿಗುತ್ತದೆ. ಆದರೆ, ಈ ಹಣ ಸಂಪೂರ್ಣವಾಗಿ ಗೆದ್ದ ವ್ಯಕ್ತಿಗೆ ಸಿಗುವುದಿಲ್ಲ ಎಂಬುದು ಅನೇಕರಿಗೆ ಗೊತ್ತಿಲ್ಲ. ಹೌದು, ಬಿಗ್ ಬಾಸ್ ಗೆದ್ದ ಹಣಕ್ಕೆ ಸರ್ಕಾರ ದೊಡ್ಡ ಮೊತ್ತದ ಟ್ಯಾಕ್ಸ್ ಹೇರುತ್ತದೆ.

ಎಷ್ಟು ತೆರಿಗೆ?

ಬಹುಮಾನ ಮೊತ್ತಕ್ಕೆ ಸರ್ಕಾರ ಬರೋಬ್ಬರಿ ಶೇ. 30ರಷ್ಟು ಟ್ಯಾಕ್ಸ್ ವಿಧಿಸುತ್ತದೆ. ಬರುವ ಒಟ್ಟೂ ಹಣದಲ್ಲಿ ಶೇ. 30 ಹಣ ಸರ್ಕಾರಕ್ಕೆ ಕೊಡಲೇಬೇಕಿದೆ. ಈ ಹಣವನ್ನು ಸಂಸ್ಥೆಯವರು ಕಡಿತ ಮಾಡಿಯೇ ವಿಜೇತರಿಗೆ ನೀಡುತ್ತಾರೆ. ಹೀಗಾಗಿ ಹನುಮಂತಗೆ ಸಿಗೋದು ಕೇವಲ 35 ಲಕ್ಷ ರೂಪಾಯಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಟಿವಿ ರಿಯಾಲಿಟಿ ಶೋ, ಲಾಟರಿ, ಸ್ಪರ್ಧೆ, ಕಾರ್ಡ್​ ಗೇಮ್​ನಲ್ಲಿ ಆಡಿ ಗೆದ್ದಲ್ಲಿ ಶೇ. 30 ತೆರಿಗೆ ಪಾವತಿಸಬೇಕು. ಕನಿಷ್ಠ 10 ಸಾವಿರ ರೂಪಾಯಿ ಇಂದ ಈ ತೆರಿಗೆ ಅನ್ವಯ ಆಗುತ್ತದೆ.

ಇದನ್ನೂ ಓದಿ: Bigg Boss 11 Grand Finale Winner: ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್

ಉಳಿದ ಸ್ಪರ್ಧಿಗಳಿಗೂ

ಕೇವಲ ಹನುಮಂತ ಮಾತ್ರವಲ್ಲದೆ ರನ್ನರ್ ಅಪ್​ ಆದ ತ್ರಿವಿಕ್ರಂ ಅವರೂ ತೆರಿಗೆ ಹಣ ಪಾವತಿಸಬೇಕು. ಅವರಿಗೆ ಒಟ್ಟೂ 15 ಲಕ್ಷ ರೂಪಾಯಿ ಸಿಕ್ಕಿದ್ದು, ಇದರಲ್ಲಿ ಅವರಿಗೆ 10,50,000 ಮಾತ್ರ ಸಿಗಲಿದೆ. ಉಳಿದ ಮೊತ್ತ ತೆರಿಗೆ ರೂಪದಲ್ಲಿ ಸರ್ಕಾರದ ಕೈ ಸೇರಲಿದೆ. ಇನ್ನು, ರಜತ್ ಅವರಿಗೆ 10 ಲಕ್ಷ ರೂಪಾಯಿ ಸಿಕ್ಕಿದ್ದು, ಅವರ ಕೈ ಸೇರೋದು 7 ಲಕ್ಷ ರೂಪಾಯಿ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:59 am, Mon, 27 January 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು