AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಂತನೇ ನನ್ನ ಫೇವರಿಟ್ ಸ್ಪರ್ಧಿ’; ಶರಣ್ ಮಾತಿನಿಂದ ಘಟಾನುಘಟಿಗಳಿಗೆ ಟೆನ್ಷನ್

ಬಿಗ್ ಬಾಸ್ ಕನ್ನಡ ಮನೆಗೆ ಶರಣ್ ಮತ್ತು ಅದಿತಿ ಪ್ರಭುದೇವ ಅವರ ಆಗಮನದಿಂದ ಉತ್ಸಾಹ ಹೆಚ್ಚಾಗಿದೆ. ಶರಣ್ ಅವರು ಹನುಮಂತ ಅವರನ್ನು ತಮ್ಮ ಮೆಚ್ಚಿನ ಸ್ಪರ್ಧಿ ಎಂದು ಘೋಷಿಸಿದ್ದಾರೆ. ಒಂದು ಟಾಸ್ಕ್‌ನಲ್ಲಿ ಹನುಮಂತ ಫೈನಲ್ ಟಿಕೆಟ್ ಗೆದ್ದಿದ್ದಾರೆ. ಇದರಿಂದ ಇತರ ಸ್ಪರ್ಧಿಗಳಲ್ಲಿ ಆತಂಕ ಮೂಡಿದೆ. ಈ ಘಟನೆಯು ಬಿಗ್ ಬಾಸ್ ಮನೆಯಲ್ಲಿ ಹೊಸ ತಿರುವು ತಂದಿದೆ.

‘ಹನುಮಂತನೇ ನನ್ನ ಫೇವರಿಟ್ ಸ್ಪರ್ಧಿ’; ಶರಣ್ ಮಾತಿನಿಂದ ಘಟಾನುಘಟಿಗಳಿಗೆ ಟೆನ್ಷನ್
ಹನುಮಂತ
ರಾಜೇಶ್ ದುಗ್ಗುಮನೆ
|

Updated on: Jan 11, 2025 | 8:33 AM

Share

ಬಿಗ್ ಬಾಸ್ ಮನೆಗೆ ಆಗಾಗ ಸೆಲೆಬ್ರಿಟಿಗಳ ಆಗಮನ ಆಗೋದು ಕಾಮನ್. ಈ ರೀತಿ ಬರುವ ಸ್ಪರ್ಧಿಗಳು ಮನರಂಜನೆ ಕೊಡುತ್ತಾರೆ. ಹೊರಗೆ ಏನು ನಡೆಯುತ್ತಿದೆ ಎಂಬುದನ್ನು ಪರೋಕ್ಷವಾಗಿ ಹೇಳುತ್ತಾರೆ. ಕೆಲವೊಮ್ಮೆ ತಮ್ಮಿಷ್ಟದ ಸ್ಪರ್ಧಿ ಯಾರು ಎಂಬುದನ್ನು ಕೂಡ ರಿವೀಲ್ ಮಾಡಿದ ಉದಾಹರಣೆ ಇದೆ. ‘ಛೂ ಮಂತರ್’ ಸಿನಿಮಾ ಪ್ರಚಾರ ಹಾಗೂ ಫಿನಾಲೆ ಟಿಕೆಟ್ ನೀಡಲು ದೊಡ್ಮನೆಗೆ ಶರಣ್ ಹಾಗೂ ಅದಿತಿ ಪ್ರಭುದೇವ ಅವರು ಆಗಮಿಸಿದ್ದರು. ಈ ವೇಳೆ ಹನುಮಂತ ಅವರೇ ತಮ್ಮ ಫೇವರಿಟ್ ಸ್ಪರ್ಧಿ ಎಂದು ಶರಣ್ ಹೇಳಿದ್ದಾರೆ. ಇದರಿಂದ ದೊಡ್ಮನೆಯಲ್ಲಿ ಕೆಲವಷ್ಟು ಬದಲಾವಣೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

ಸೆಲೆಬ್ರಿಟಿಗಳು ಕೂಡ ಬಿಗ್ ಬಾಸ್ ನೋಡುತ್ತಾರೆ. ಅದೇ ರೀತಿ ಶರಣ್ ಕೂಡ ಸಮಯ ಸಿಕ್ಕಾಗ ಬಿಗ್ ಬಾಸ್ ಫಾಲೋ ಮಾಡಿದ್ದಾರೆ ಎನ್ನಲಾಗಿದೆ. ಏಕೆಂದರೆ ಹನುಮಂತನ ಆಟ ಅವರಿಗೆ ಇಷ್ಟ ಆಗಿದೆ. ರಜತ್, ತ್ರಿವಿಕ್ರಂ, ಮಂಜು, ಮೋಕ್ಷಿತಾ, ಗೌತಮಿ ಅಂಥ ಸ್ಟ್ರಾಂಗ್ ಸ್ಪರ್ಧಿಗಳ ಮಧ್ಯೆ ಅವರಿಗೆ ಹನುಮಂತ ಇಷ್ಟ ಆಗಿದ್ದಾರೆ ಎಂದರೆ ಉಳಿದವರಿಗೆ ಸ್ವಲ್ಪ ಟೆನ್ಷನ್ ಆಗಲೇಬೇಕು.

ಸೋಫಾ ಮೇಲೆ ಎಲ್ಲರೂ ಕುಳಿತಿದ್ದಾಗ ಶರಣ್ ಅವರು ಸ್ಪರ್ಧಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಇದ್ದರು. ಆಗ ಅವರು ಹನುಮಂತ ಬಗ್ಗೆ ಮಾತನಾಡಿದರು. ‘ನೀವು ನನ್ನ ಫೇವರಿಟ್ ಸ್ಪರ್ಧಿ. ಇದನ್ನು ಎಲ್ಲಿಯೂ ಹೇಳಿಲ್ಲ’ ಎಂದರು ಶರಣ್. ಆ ಬಳಿಕ ಟಾಸ್ಕ್ ವಿನ್ ಆಗಿ ಹನುಮಂತ ಅವರು ಫಿನಾಲೆ ಟಿಕೆಟ್ ಪಡೆದಿದ್ದಾರೆ. ಇದಾದ ಬಳಿಕ ದೊಡ್ಮನೆಯಲ್ಲಿ ಚರ್ಚೆಗಳು ಜೋರಾಗಿವೆ. ಭವ್ಯಾ ಗೌಡ ಅವರು ಸಾಕಷ್ಟು ಕೊರಗಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​

ಭವ್ಯಾ ಅವರು ಟಾಸ್ಕ್​​ನ ಮುಗಿಸಲು ಮೂರು ನಿಮಿಷಕ್ಕೂ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ. ಹನುಮಂತ ಅವರು ಕೇವಲ ಎರಡು ನಿಮಿಷ ಹದಿನೇಳು ಸೆಕೆಂಡ್​ನಲ್ಲಿ ಟಾಸ್ಕ್ ಪೂರ್ಣಗೊಳಿಸಿ ಫಿನಾಲೆ ಟಿಕೆಟ್​ನ ತಮ್ಮದಾಗಿಸಿಕೊಂಡರು. ಈಗ ಆಟ ಇನ್ನಷ್ಟು ಕಠಿಣವಾಗಲಿದೆ. ಹನುಮಂತ ಅವರನ್ನು ಬಿಟ್ಟು 8 ಸ್ಪರ್ಧಿಗಳು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ