AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಂತನೇ ನನ್ನ ಫೇವರಿಟ್ ಸ್ಪರ್ಧಿ’; ಶರಣ್ ಮಾತಿನಿಂದ ಘಟಾನುಘಟಿಗಳಿಗೆ ಟೆನ್ಷನ್

ಬಿಗ್ ಬಾಸ್ ಕನ್ನಡ ಮನೆಗೆ ಶರಣ್ ಮತ್ತು ಅದಿತಿ ಪ್ರಭುದೇವ ಅವರ ಆಗಮನದಿಂದ ಉತ್ಸಾಹ ಹೆಚ್ಚಾಗಿದೆ. ಶರಣ್ ಅವರು ಹನುಮಂತ ಅವರನ್ನು ತಮ್ಮ ಮೆಚ್ಚಿನ ಸ್ಪರ್ಧಿ ಎಂದು ಘೋಷಿಸಿದ್ದಾರೆ. ಒಂದು ಟಾಸ್ಕ್‌ನಲ್ಲಿ ಹನುಮಂತ ಫೈನಲ್ ಟಿಕೆಟ್ ಗೆದ್ದಿದ್ದಾರೆ. ಇದರಿಂದ ಇತರ ಸ್ಪರ್ಧಿಗಳಲ್ಲಿ ಆತಂಕ ಮೂಡಿದೆ. ಈ ಘಟನೆಯು ಬಿಗ್ ಬಾಸ್ ಮನೆಯಲ್ಲಿ ಹೊಸ ತಿರುವು ತಂದಿದೆ.

‘ಹನುಮಂತನೇ ನನ್ನ ಫೇವರಿಟ್ ಸ್ಪರ್ಧಿ’; ಶರಣ್ ಮಾತಿನಿಂದ ಘಟಾನುಘಟಿಗಳಿಗೆ ಟೆನ್ಷನ್
ಹನುಮಂತ
ರಾಜೇಶ್ ದುಗ್ಗುಮನೆ
|

Updated on: Jan 11, 2025 | 8:33 AM

Share

ಬಿಗ್ ಬಾಸ್ ಮನೆಗೆ ಆಗಾಗ ಸೆಲೆಬ್ರಿಟಿಗಳ ಆಗಮನ ಆಗೋದು ಕಾಮನ್. ಈ ರೀತಿ ಬರುವ ಸ್ಪರ್ಧಿಗಳು ಮನರಂಜನೆ ಕೊಡುತ್ತಾರೆ. ಹೊರಗೆ ಏನು ನಡೆಯುತ್ತಿದೆ ಎಂಬುದನ್ನು ಪರೋಕ್ಷವಾಗಿ ಹೇಳುತ್ತಾರೆ. ಕೆಲವೊಮ್ಮೆ ತಮ್ಮಿಷ್ಟದ ಸ್ಪರ್ಧಿ ಯಾರು ಎಂಬುದನ್ನು ಕೂಡ ರಿವೀಲ್ ಮಾಡಿದ ಉದಾಹರಣೆ ಇದೆ. ‘ಛೂ ಮಂತರ್’ ಸಿನಿಮಾ ಪ್ರಚಾರ ಹಾಗೂ ಫಿನಾಲೆ ಟಿಕೆಟ್ ನೀಡಲು ದೊಡ್ಮನೆಗೆ ಶರಣ್ ಹಾಗೂ ಅದಿತಿ ಪ್ರಭುದೇವ ಅವರು ಆಗಮಿಸಿದ್ದರು. ಈ ವೇಳೆ ಹನುಮಂತ ಅವರೇ ತಮ್ಮ ಫೇವರಿಟ್ ಸ್ಪರ್ಧಿ ಎಂದು ಶರಣ್ ಹೇಳಿದ್ದಾರೆ. ಇದರಿಂದ ದೊಡ್ಮನೆಯಲ್ಲಿ ಕೆಲವಷ್ಟು ಬದಲಾವಣೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

ಸೆಲೆಬ್ರಿಟಿಗಳು ಕೂಡ ಬಿಗ್ ಬಾಸ್ ನೋಡುತ್ತಾರೆ. ಅದೇ ರೀತಿ ಶರಣ್ ಕೂಡ ಸಮಯ ಸಿಕ್ಕಾಗ ಬಿಗ್ ಬಾಸ್ ಫಾಲೋ ಮಾಡಿದ್ದಾರೆ ಎನ್ನಲಾಗಿದೆ. ಏಕೆಂದರೆ ಹನುಮಂತನ ಆಟ ಅವರಿಗೆ ಇಷ್ಟ ಆಗಿದೆ. ರಜತ್, ತ್ರಿವಿಕ್ರಂ, ಮಂಜು, ಮೋಕ್ಷಿತಾ, ಗೌತಮಿ ಅಂಥ ಸ್ಟ್ರಾಂಗ್ ಸ್ಪರ್ಧಿಗಳ ಮಧ್ಯೆ ಅವರಿಗೆ ಹನುಮಂತ ಇಷ್ಟ ಆಗಿದ್ದಾರೆ ಎಂದರೆ ಉಳಿದವರಿಗೆ ಸ್ವಲ್ಪ ಟೆನ್ಷನ್ ಆಗಲೇಬೇಕು.

ಸೋಫಾ ಮೇಲೆ ಎಲ್ಲರೂ ಕುಳಿತಿದ್ದಾಗ ಶರಣ್ ಅವರು ಸ್ಪರ್ಧಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಇದ್ದರು. ಆಗ ಅವರು ಹನುಮಂತ ಬಗ್ಗೆ ಮಾತನಾಡಿದರು. ‘ನೀವು ನನ್ನ ಫೇವರಿಟ್ ಸ್ಪರ್ಧಿ. ಇದನ್ನು ಎಲ್ಲಿಯೂ ಹೇಳಿಲ್ಲ’ ಎಂದರು ಶರಣ್. ಆ ಬಳಿಕ ಟಾಸ್ಕ್ ವಿನ್ ಆಗಿ ಹನುಮಂತ ಅವರು ಫಿನಾಲೆ ಟಿಕೆಟ್ ಪಡೆದಿದ್ದಾರೆ. ಇದಾದ ಬಳಿಕ ದೊಡ್ಮನೆಯಲ್ಲಿ ಚರ್ಚೆಗಳು ಜೋರಾಗಿವೆ. ಭವ್ಯಾ ಗೌಡ ಅವರು ಸಾಕಷ್ಟು ಕೊರಗಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​

ಭವ್ಯಾ ಅವರು ಟಾಸ್ಕ್​​ನ ಮುಗಿಸಲು ಮೂರು ನಿಮಿಷಕ್ಕೂ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ. ಹನುಮಂತ ಅವರು ಕೇವಲ ಎರಡು ನಿಮಿಷ ಹದಿನೇಳು ಸೆಕೆಂಡ್​ನಲ್ಲಿ ಟಾಸ್ಕ್ ಪೂರ್ಣಗೊಳಿಸಿ ಫಿನಾಲೆ ಟಿಕೆಟ್​ನ ತಮ್ಮದಾಗಿಸಿಕೊಂಡರು. ಈಗ ಆಟ ಇನ್ನಷ್ಟು ಕಠಿಣವಾಗಲಿದೆ. ಹನುಮಂತ ಅವರನ್ನು ಬಿಟ್ಟು 8 ಸ್ಪರ್ಧಿಗಳು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು