AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಜೀ ಕನ್ನಡ ತವರು ಮನೆ, ಕಲರ್ಸ್​ ಗಂಡನ ಮನೆ: ಹತ್ತಿದ ಏಣಿ ಮರೆಯಲಿಲ್ಲ ಹನುಮಂತ

ಸಿಂಗರ್ ಹನುಮಂತ ಲಮಾಣಿ ಅವರು ಬಿಗ್ ಬಾಸ್ ಟ್ರೋಫಿ ಗೆದ್ದು ಸಂಭ್ರಮಿಸಿದ್ದಾರೆ. ಅವರಿಗಿಂತಲೂ ಹೆಚ್ಚಾಗಿ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಹನುಮಂತ ಅವರು ಇಂದು (ಜನವರಿ 27) ಸುದ್ದಿಗೋಷ್ಠಿಯಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಕಲರ್ಸ್​ ಕನ್ನಡ’ ವಾಹಿನಿಯ ವೇದಿಕೆಯಲ್ಲಿ ಇದ್ದರೂ ಕೂಡ ಅವರು ‘ಜೀ ಕನ್ನಡ’ ವಾಹಿನಿಯನ್ನು ಮರೆತಿಲ್ಲ.

ನನಗೆ ಜೀ ಕನ್ನಡ ತವರು ಮನೆ, ಕಲರ್ಸ್​ ಗಂಡನ ಮನೆ: ಹತ್ತಿದ ಏಣಿ ಮರೆಯಲಿಲ್ಲ ಹನುಮಂತ
Hanumantha Lamani
ಮದನ್​ ಕುಮಾರ್​
|

Updated on: Jan 27, 2025 | 9:23 PM

Share

ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ವಿನ್ನರ್​ ಆಗಿದ್ದಾರೆ. ರಿಯಾಲಿಟಿ ಶೋಗಳ ಜಗತ್ತಿಗೆ ಹನುಮಂತ ಹೊಸಬರೇನೂ ಅಲ್ಲ. ಈ ಮೊದಲು ಅವರು ‘ಜೀ ಕನ್ನಡ’ ವಾಹಿನಿಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ‘ಸರಿಗಮಪ’ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಈ ಬಾರಿ ಅವರಿಗೆ ‘ಕಲರ್ಸ್​ ಕನ್ನಡ’ ವಾಹಿನಿಯ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತು. ವಿನ್ನರ್​ ಕೂಡ ಆದರು. ಈ ಸಂಭ್ರಮದಲ್ಲಿ ಅವರು ‘ಜೀ ಕನ್ನಡ’ ವಾಹಿನಿಯನ್ನು ಮರೆತಿಲ್ಲ.

ಇಂದು (ಜ.27) ಹನುಮಂತ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ನಾನು ಮೊದಲೆಲ್ಲ ಬಿಗ್ ಬಾಸ್ ಶೋ ದೇವರಾಣೆಗೂ ನೋಡುತ್ತಿರಲಿಲ್ಲ. ನಾನು ಜೀ ಕನ್ನಡದಲ್ಲಿ ಇದ್ದೆ. ಅದು ಗಂಡನ ಮನೆ ಇದ್ದಂತೆ. ಈಗ ‘ಕಲರ್ಸ್​ ಕನ್ನಡ’ ಎಂಬ ಗಂಡನ ಮನೆಗೆ ಬಂದಿದ್ದೇನೆ. ಸುದೀಪ್ ಸರ್​ ಶೋ ನಡೆಸಿಕೊಡುವಾಗಲೇ ಒಮ್ಮೆಯಾದರೂ ಬಿಗ್ ಬಾಸ್​ಗೆ ಹೋಗು ಅಂತ ನನಗೆ ಗೆಳೆಯರು ಹೇಳಿದರು. ಹಾಗಾಗಿ ಈ ಶೋಗೆ ಬಂದೆ’ ಎಂದು ಹನುಮಂತ ಹೇಳಿದ್ದಾರೆ.

ಹನುಮಂತ ಗೆದ್ದಿದ್ದಕ್ಕೆ ‘ಜೀ ಕನ್ನಡ’ ವಾಹಿನಿ ಅಭಿನಂದನೆ ತಿಳಿಸಿದೆ. ಈ ರೀತಿ, ಬೇರೆ ವಾಹಿನಿಯ ರಿಯಾಲಿಟಿ ಶೋನಲ್ಲಿ ಗೆದ್ದ ಸ್ಪರ್ಧಿಗೆ ಇನ್ನೊಂದು ವಾಹಿನಿ ಅಭಿನಂದನೆ ತಿಳಿಸುವುದು ತುಂಬ ವಿರಳ.

View this post on Instagram

A post shared by Zee Kannada (@zeekannada)

‘ನಿಮ್ಮಂಥ ನೆಲಮೂಲದ ಪ್ರತಿಭೆಯನ್ನು ಹುಡುಕಿ, ಬೆಳಕಿಗೆ ತಂದ ಜೀ ಕನ್ನಡ ನಿಮ್ಮ ಗೆಲುವನ್ನು ಸಂಭ್ರಮಿಸುತ್ತದೆ. ಹನುಮಂತ ಅವರೇ ನಿಮ್ಮ ಗೆಲುವಿಗೆ ಹಾರ್ದಿಕ ಅಭಿನಂದನೆಗಳು! ಸರಿಗಮಪ ವೇದಿಕೆಗೆ ಈ ಅದಮ್ಯ ಪ್ರತಿಭೆಯನ್ನು ಹುಡುಕಿ, ಬೆಳಕಿಗೆ ತಂದ ಜೀ ಕನ್ನಡಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ’ ಎಂದು ಜೀ ಕನ್ನಡ ವಾಹಿನಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಹನುಮಂತ ಗೆದ್ದಿದ್ದಕ್ಕೆ ಬಹುತೇಕರಿಗೆ ಖುಷಿ ಇದೆ. ಯಾಕೆಂದರೆ, ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಗುಂಪುಗಾರಿಕೆ ಮಾಡಿಲ್ಲ. ಪಕ್ಷಪಾತ ಮಾಡಿಲ್ಲ. ಯಾರ ಮೇಲೂ ವೈಯಕ್ತಿಕ ದ್ವೇಷ ಸಾಧಿಸಿಲ್ಲ. ಪಿತೂರಿ ನಡೆಸಿಲ್ಲ. ನೇರ ನಡೆ-ನುಡಿ ಮೂಲಕ ಅವರು ಗುರುತಿಸಿಕೊಂಡರು. ಈ ಎಲ್ಲ ಕಾರಣಗಳಿಂದಾಗಿ ಹನುಮಂತನ ಗೆಲುವನ್ನು ಎಲ್ಲರೂ ಸಂಭ್ರಮಿಸಿದ್ದಾರೆ. ಈಗ ಅವರು ‘ಕಲರ್ಸ್​ ಕನ್ನಡ’ ವಾಹಿನಿಯ ‘ಬಾಯ್ಸ್​ ವರ್ಸಸ್ ಗರ್ಲ್ಸ್​’ ಶೋಗೆ ಆಯ್ಕೆ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​