AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಕ್ಯಾಪ್ಟೆನ್ಸಿಯಲ್ಲಿ ಮತ್ತೆ ರಣರಂಗ ಆಗುತ್ತಿದೆ ಬಿಗ್ ಬಾಸ್ ಮನೆ

ಸಿಂಗರ್ ಹನುಮಂತ ಬಿಗ್ ಬಾಸ್ ಮನೆಗೆ ಕಾಲಿಟ್ಟ ಬಳಿಕ ಸಾಕಷ್ಟು ವಿಷಯಗಳು ಬದಲಾಗಿವೆ. ಮೊದಲಿಗೆ ಸೈಲೆಂಟ್ ಆಗಿದ್ದ ಹನುಮಂತ ಅವರು ಈಗ ಬಿಗ್ ಬಾಸ್ ಆಟದ ರೀತಿ-ನೀತಿಯನ್ನು ಅರ್ಥ ಮಾಡಿಕೊಂಡಿದ್ದಾರೆ. ಎರಡು ಬಾರಿ ಅವರು ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಿದ್ದಾಗಲೇ ದೊಡ್ಡ ದೊಡ್ಡ ಜಗಳಗಳು ನಡೆಯುತ್ತಿವೆ.

ಹನುಮಂತನ ಕ್ಯಾಪ್ಟೆನ್ಸಿಯಲ್ಲಿ ಮತ್ತೆ ರಣರಂಗ ಆಗುತ್ತಿದೆ ಬಿಗ್ ಬಾಸ್ ಮನೆ
ಬಿಗ್ ಬಾಸ್ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Nov 05, 2024 | 10:19 PM

Share

ಬೇರೆ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಸಿಂಗರ್ ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮಕ್ಕೆ ವೈಲ್ಡ್ ಕಾರ್ಡ್​ ಮೂಲಕ ಬಂದರು. ಅವರು ಮುಗ್ಧತೆಯಿಂದ ಗಮನ ಸೆಳೆಯುತ್ತಿದ್ದಾರೆ. ಆದರೆ ಅವರು ನಿಜಕ್ಕೂ ಮುಗ್ಧ ಹೌದೋ ಅಲ್ಲವೋ ಎಂಬ ಅನುಮಾನ ಎಲ್ಲರಲ್ಲೂ ಇದೆ. ಬಿಗ್ ಬಾಸ್ ಮನೆಗೆ ಕಾಲಿಟ್ಟಾಗ ಅವರಿಗೆ ಕೆಲವು ವಿಷಯಗಳು ತಿಳಿದಿಲ್ಲ ಎಂದು ಭಾವಿಸಲಾಗಿತ್ತು. ಆದರೆ ಅವರು ಎಲ್ಲರಿಗಿಂತಲೂ ಚೆನ್ನಾಗಿ ಈ ಆಟವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂಬುದು ನಂತರ ಗೊತ್ತಾಯಿತು. ಕ್ಯಾಪ್ಟನ್ ಆಗಿರುವ ಹನುಮಂತ ಅವರು ದೊಡ್ಡ ಜಗಳಕ್ಕೆ ಸಾಕ್ಷಿ ಆಗಿದ್ದಾರೆ.

ಈ ವಾರ ಬಿಗ್ ಬಾಸ್ ಮನೆಯಲ್ಲಿ ಇರುವ ಸದಸ್ಯರಿಗೆ ಹೊಸ ಟಾಸ್ಕ್ ನೀಡಲಾಗಿದೆ. ಇದು ಸಾಮಾನ್ಯವಾದ ಟಾಸ್ಕ್​ ಅಲ್ಲ. 4 ತಂಡಗಳಲ್ಲಿ ಈ ಆಟವನ್ನು ಆಡಬೇಕು. ಗೆದ್ದ ತಂಡಕ್ಕೆ ಸಿಕ್ಕಾಪಟ್ಟೆ ಸೌಕರ್ಯಗಳು ಸಿಗಲಿದೆ. ಹನುಮಂತ ಅವರಿಗೆ ವಿಶೇಷ ಅಧಿಕಾರ ಸಿಗಲಿದೆ. ಕೆಲವರಿಗೆ ಇಮ್ಯುನಿಟಿ ಕಾರ್ಡ್​ ಸಿಗಲಿದೆ. ಅದಕ್ಕಾಗಿ ಎಲ್ಲರೂ ಗುದ್ದಾಡುತ್ತಿದ್ದಾರೆ. ಆದರೆ ಸೋತ ತಂಡಕ್ಕೆ ತುಂಬ ತೊಂದರೆ ಆಗಲಿದೆ. ಹಲವು ಸೌಕರ್ಯಗಳನ್ನು ಅವರಿಂದ ಕಸಿದುಕೊಳ್ಳಲಾಗುವುದು. ಊಟದಲ್ಲೂ ಇತಿಮಿತಿ ಹಾಕಲಾಗುವುದು.

ಆಟದ ಸೋಲು ಮತ್ತು ಗೆಲುವಿನ ಪರಿಣಾಮ ತೀವ್ರವಾಗಿ ಇರುವುದರಿಂದ ಎಲ್ಲ ಸ್ಪರ್ಧಿಗಳು ಈ ಟಾಸ್ಕ್​ ಅನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಈ ಆಟದ ಉಸ್ತುವಾರಿ ವಹಿಸಿರುವ ಕ್ಯಾಪ್ಟನ್ ಹನುಮಂತ ಅವರು ಸರಿಯಾಗಿ ತಮ್ಮ ಕೆಲಸವನ್ನು ನಿಭಾಯಿಸಿಲ್ಲ ಎಂದು ಕೆಲವರು ಸ್ಪರ್ಧಿಗಳು ಕಿಡಿಕಾರಿದ್ದಾರೆ. ಆಟದ ತೀವ್ರತೆ ಹೆಚ್ಚಿದಂತೆಲ್ಲ ಜಗಳ ಕೂಡ ಹೆಚ್ಚಾಗಿದೆ.

ಇದನ್ನೂ ಓದಿ: ಹನುಮಂತ ಮುಗ್ಧನಾ? ಕಿಲಾಡಿಯಾ? ಬಿಗ್​ಬಾಸ್​ನಿಂದ ಹೊರಬಂದ ಮಾನಸ ಮಾತು

ಹನುಮಂತ ಅವರು ಯಾವುದೇ ಮುಲಾಜು ಇಲ್ಲದೇ ಬಿಗ್ ಬಾಸ್ ಆಟವನ್ನು ಆಡುತ್ತಿದ್ದಾರೆ. ನಾಮಿನೇಷನ್ ವಿಚಾರದಲ್ಲಿ ಅವರು ಸ್ವಲ್ಪವೂ ಹಿಂಜರಿಕೆ ಇಲ್ಲದೇ ಕೆಲವರ ಹೆಸರನ್ನು ಹೇಳುತ್ತಾರೆ. ಇನ್ನು ವಿಶೇಷ ಅಧಿಕಾರಗಳು ಸಿಕ್ಕರೆ ಅವರ ಆಟದ ವರಸೆ ಮತ್ತಷ್ಟು ಬಲವಾಗಲಿದೆ. ಕಾಮಿಡಿ ಮತ್ತು ಹಾಡಿನ ಮೂಲಕವೂ ಹನುಮಂತ ಅವರು ಮನರಂಜನೆ ನೀಡುತ್ತಿದ್ದಾರೆ. ವೀಕ್ಷಕರಿಗೆ ಅವರ ಆಟ ಇಷ್ಟ ಆಗುತ್ತಿದೆ. ಕಳೆದ ವಾರ ‘ಕಿಚ್ಚಾನ ಚಪ್ಪಾಳೆ’ ಕೂಡ ಹನುಂತ ಅವರಿಗೆ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್