AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಕ್ಯಾಪ್ಟೆನ್ಸಿಯಲ್ಲಿ ಮತ್ತೆ ರಣರಂಗ ಆಗುತ್ತಿದೆ ಬಿಗ್ ಬಾಸ್ ಮನೆ

ಸಿಂಗರ್ ಹನುಮಂತ ಬಿಗ್ ಬಾಸ್ ಮನೆಗೆ ಕಾಲಿಟ್ಟ ಬಳಿಕ ಸಾಕಷ್ಟು ವಿಷಯಗಳು ಬದಲಾಗಿವೆ. ಮೊದಲಿಗೆ ಸೈಲೆಂಟ್ ಆಗಿದ್ದ ಹನುಮಂತ ಅವರು ಈಗ ಬಿಗ್ ಬಾಸ್ ಆಟದ ರೀತಿ-ನೀತಿಯನ್ನು ಅರ್ಥ ಮಾಡಿಕೊಂಡಿದ್ದಾರೆ. ಎರಡು ಬಾರಿ ಅವರು ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಿದ್ದಾಗಲೇ ದೊಡ್ಡ ದೊಡ್ಡ ಜಗಳಗಳು ನಡೆಯುತ್ತಿವೆ.

ಹನುಮಂತನ ಕ್ಯಾಪ್ಟೆನ್ಸಿಯಲ್ಲಿ ಮತ್ತೆ ರಣರಂಗ ಆಗುತ್ತಿದೆ ಬಿಗ್ ಬಾಸ್ ಮನೆ
ಬಿಗ್ ಬಾಸ್ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Nov 05, 2024 | 10:19 PM

Share

ಬೇರೆ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಸಿಂಗರ್ ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮಕ್ಕೆ ವೈಲ್ಡ್ ಕಾರ್ಡ್​ ಮೂಲಕ ಬಂದರು. ಅವರು ಮುಗ್ಧತೆಯಿಂದ ಗಮನ ಸೆಳೆಯುತ್ತಿದ್ದಾರೆ. ಆದರೆ ಅವರು ನಿಜಕ್ಕೂ ಮುಗ್ಧ ಹೌದೋ ಅಲ್ಲವೋ ಎಂಬ ಅನುಮಾನ ಎಲ್ಲರಲ್ಲೂ ಇದೆ. ಬಿಗ್ ಬಾಸ್ ಮನೆಗೆ ಕಾಲಿಟ್ಟಾಗ ಅವರಿಗೆ ಕೆಲವು ವಿಷಯಗಳು ತಿಳಿದಿಲ್ಲ ಎಂದು ಭಾವಿಸಲಾಗಿತ್ತು. ಆದರೆ ಅವರು ಎಲ್ಲರಿಗಿಂತಲೂ ಚೆನ್ನಾಗಿ ಈ ಆಟವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂಬುದು ನಂತರ ಗೊತ್ತಾಯಿತು. ಕ್ಯಾಪ್ಟನ್ ಆಗಿರುವ ಹನುಮಂತ ಅವರು ದೊಡ್ಡ ಜಗಳಕ್ಕೆ ಸಾಕ್ಷಿ ಆಗಿದ್ದಾರೆ.

ಈ ವಾರ ಬಿಗ್ ಬಾಸ್ ಮನೆಯಲ್ಲಿ ಇರುವ ಸದಸ್ಯರಿಗೆ ಹೊಸ ಟಾಸ್ಕ್ ನೀಡಲಾಗಿದೆ. ಇದು ಸಾಮಾನ್ಯವಾದ ಟಾಸ್ಕ್​ ಅಲ್ಲ. 4 ತಂಡಗಳಲ್ಲಿ ಈ ಆಟವನ್ನು ಆಡಬೇಕು. ಗೆದ್ದ ತಂಡಕ್ಕೆ ಸಿಕ್ಕಾಪಟ್ಟೆ ಸೌಕರ್ಯಗಳು ಸಿಗಲಿದೆ. ಹನುಮಂತ ಅವರಿಗೆ ವಿಶೇಷ ಅಧಿಕಾರ ಸಿಗಲಿದೆ. ಕೆಲವರಿಗೆ ಇಮ್ಯುನಿಟಿ ಕಾರ್ಡ್​ ಸಿಗಲಿದೆ. ಅದಕ್ಕಾಗಿ ಎಲ್ಲರೂ ಗುದ್ದಾಡುತ್ತಿದ್ದಾರೆ. ಆದರೆ ಸೋತ ತಂಡಕ್ಕೆ ತುಂಬ ತೊಂದರೆ ಆಗಲಿದೆ. ಹಲವು ಸೌಕರ್ಯಗಳನ್ನು ಅವರಿಂದ ಕಸಿದುಕೊಳ್ಳಲಾಗುವುದು. ಊಟದಲ್ಲೂ ಇತಿಮಿತಿ ಹಾಕಲಾಗುವುದು.

ಆಟದ ಸೋಲು ಮತ್ತು ಗೆಲುವಿನ ಪರಿಣಾಮ ತೀವ್ರವಾಗಿ ಇರುವುದರಿಂದ ಎಲ್ಲ ಸ್ಪರ್ಧಿಗಳು ಈ ಟಾಸ್ಕ್​ ಅನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಈ ಆಟದ ಉಸ್ತುವಾರಿ ವಹಿಸಿರುವ ಕ್ಯಾಪ್ಟನ್ ಹನುಮಂತ ಅವರು ಸರಿಯಾಗಿ ತಮ್ಮ ಕೆಲಸವನ್ನು ನಿಭಾಯಿಸಿಲ್ಲ ಎಂದು ಕೆಲವರು ಸ್ಪರ್ಧಿಗಳು ಕಿಡಿಕಾರಿದ್ದಾರೆ. ಆಟದ ತೀವ್ರತೆ ಹೆಚ್ಚಿದಂತೆಲ್ಲ ಜಗಳ ಕೂಡ ಹೆಚ್ಚಾಗಿದೆ.

ಇದನ್ನೂ ಓದಿ: ಹನುಮಂತ ಮುಗ್ಧನಾ? ಕಿಲಾಡಿಯಾ? ಬಿಗ್​ಬಾಸ್​ನಿಂದ ಹೊರಬಂದ ಮಾನಸ ಮಾತು

ಹನುಮಂತ ಅವರು ಯಾವುದೇ ಮುಲಾಜು ಇಲ್ಲದೇ ಬಿಗ್ ಬಾಸ್ ಆಟವನ್ನು ಆಡುತ್ತಿದ್ದಾರೆ. ನಾಮಿನೇಷನ್ ವಿಚಾರದಲ್ಲಿ ಅವರು ಸ್ವಲ್ಪವೂ ಹಿಂಜರಿಕೆ ಇಲ್ಲದೇ ಕೆಲವರ ಹೆಸರನ್ನು ಹೇಳುತ್ತಾರೆ. ಇನ್ನು ವಿಶೇಷ ಅಧಿಕಾರಗಳು ಸಿಕ್ಕರೆ ಅವರ ಆಟದ ವರಸೆ ಮತ್ತಷ್ಟು ಬಲವಾಗಲಿದೆ. ಕಾಮಿಡಿ ಮತ್ತು ಹಾಡಿನ ಮೂಲಕವೂ ಹನುಮಂತ ಅವರು ಮನರಂಜನೆ ನೀಡುತ್ತಿದ್ದಾರೆ. ವೀಕ್ಷಕರಿಗೆ ಅವರ ಆಟ ಇಷ್ಟ ಆಗುತ್ತಿದೆ. ಕಳೆದ ವಾರ ‘ಕಿಚ್ಚಾನ ಚಪ್ಪಾಳೆ’ ಕೂಡ ಹನುಂತ ಅವರಿಗೆ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು