AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಿಮ್ ಮಾಡಿದ್ರೆ ಸತ್ತಮೇಲೆ ಬೇರೆ ಕಡೆ ಸುಡ್ತಾರಾ’; ಹನುಮಂತನ ನೀತಿ ಪಾಠ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಎಂಟ್ರಿ ಪಡೆದರು. ಅವರು ಬಂದ ದಿನದಿಂದಲೂ ಚಿಲ್ ಆಗಿ ಇದ್ದಾರೆ. ಯಾವ ವಿಚಾರಕ್ಕೂ ಅವರು ಹೆಚ್ಚು ತೆಲಕೆಡಿಸಿಕೊಳ್ಳುತ್ತಿಲ್ಲ. ನವೆಂಬರ್ 5ರ ಎಪಿಸೋಡ್​ನಲ್ಲಿ ಅವರು ಒಂದು ಗಂಭೀರ ವಿಚಾರವನ್ನು ಹೇಳಿದ್ದಾರೆ.

‘ಜಿಮ್ ಮಾಡಿದ್ರೆ ಸತ್ತಮೇಲೆ ಬೇರೆ ಕಡೆ ಸುಡ್ತಾರಾ’; ಹನುಮಂತನ ನೀತಿ ಪಾಠ
ಹನುಮಂತ್
ರಾಜೇಶ್ ದುಗ್ಗುಮನೆ
|

Updated on:Nov 06, 2024 | 6:56 AM

Share

ಹನುಮಂತ ಅವರು ಬಿಗ್ ಬಾಸ್​​ನಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರು ಅನೇಕರ ಮೆಚ್ಚುಗೆ ಪಡೆದಿದ್ದಾರೆ. ಹನುಮಂತ ಯಾವ ವಿಚಾರಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಹೇಳುವ ಜೀವನ ಪಾಠ ಅನೇಕರಿಗೆ ಇಷ್ಟ ಆಗುತ್ತದೆ. ಈಗ ಹನುಮಂತ ಅವರು ಹೇಳಿದ ಒಂದು ಮಾತಿಗೆ ಅವರ ಗೆಳೆಯ ಧನರಾಜ್​ ಅವರು ಮೆಚ್ಚುಗೆ ಸೂಚಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಎಂಟ್ರಿ ಪಡೆದರು. ಅವರು ಬಂದ ದಿನದಿಂದಲೂ ಚಿಲ್ ಆಗಿ ಇದ್ದಾರೆ. ಯಾವ ವಿಚಾರಕ್ಕೂ ಅವರು ಹೆಚ್ಚು ತೆಲಕೆಡಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗಿದ್ದಾರೆ. ನವೆಂಬರ್ 5ರ ಎಪಿಸೋಡ್​ನಲ್ಲಿ ಅವರು ಒಂದು ಗಂಭೀರ ವಿಚಾರವನ್ನು ಹೇಳಿದ್ದಾರೆ.

ಧನರಾಜ್​ ಅವರು ಗಾರ್ಡನ್ ಏರಿಯಾದಲ್ಲಿ ಜಿಮ್ ಮಾಡುತ್ತಿದ್ದರು. ‘ಏಕೆ ವ್ಯಾಯಾಮ ಮಾಡುತ್ತಿದ್ದೀಯಾ’ ಎಂದು ಹನುಮಂತ ಅವರು ಕೇಳಿದರು. ಇದಕ್ಕೆ ಉತ್ತರಿಸಿದ ಧನರಾಜ್ ಅವರು, ‘ಹೊಟ್ಟೆ ಕರಗಿಸಬೇಕು. ಹೊಟ್ಟೆ ಫ್ಲ್ಯಾಟ್ ಆಗಿ ಕಾಣಬೇಕು. ಬೇಗ ಬೇಗ ಮಾಡಿ ಬರ್ತೀನಿ’ ಎಂದರು. ಇದನ್ನು ಕೇಳಿ ಹನುಮಂತ್ ಅವರು ತಮ್ಮದೇ ಸ್ಟೈಲ್​ನಲ್ಲಿ ಉತ್ತರ ಕೊಟ್ಟರು.

‘ಒಂದಿನ ಸತ್ತರೆ ಎಲ್ಲರೂ ಅಲ್ಲೇ ಹೋಗೋದು. ಜಿಮ್ ಮಾಡಿದಾನೆ, ಹೊಟ್ಟೆ ಕರಗಿಸಿದ್ದಾನೆ ಎಂದು ಬೇರೆ ಕಡೆ ಸುಡ್ತಾರಾ? ಹೀಗೂ ಆಲೋಚನೆ ಮಾಡಬೇಕು’ ಎಂದರು ಹನುಮಂತ. ಈ ಮಾತನ್ನು ಕೇಳಿ ಧನರಾಜ್​ ನಕ್ಕರು. ಅವರಿಗೂ ಈ ಮಾತು ಹೌದೆನ್ನಿಸಿದೆ.

ಇದನ್ನೂ ಓದಿ: ಹನುಮಂತನ ಕ್ಯಾಪ್ಟೆನ್ಸಿಯಲ್ಲಿ ಮತ್ತೆ ರಣರಂಗ ಆಗುತ್ತಿದೆ ಬಿಗ್ ಬಾಸ್ ಮನೆ

ಹನುಮಂತ ಅವರು ಬಂದ ಬಳಿಕ ಹಂಗಾಮಿ ಕ್ಯಾಪ್ಟನ್ ಆದರು. ಆ ಬಳಿಕ ಅವರು ಕ್ಯಾಪ್ಟನ್ ಆದರು. ಈಗ ಟಾಸ್ಕ್ ಉಸ್ತುವಾರಿ ಅವರದ್ದೇ. ಈ ಕಾರಣಕ್ಕೆ ಅವರು ಸಾಕಷ್ಟು ಚರ್ಚೆ ಆಗುತ್ತಿದ್ದಾರೆ. ಅವರ ನಿರ್ಧಾರಗಳಿಂದ ಇಡೀ ಮನೆ ಹೊತ್ತಿ ಉರಿಯುತ್ತಿದೆ. ಹನಮಂತ ಅವರು ಮುಗ್ಧನಾಗಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಅವರದ್ದು ನಿಜವಾದ ಮುಗ್ಧತೆ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Wed, 6 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ