AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲಿ ಎಲ್ಲರೂ ತಿಪ್ಪೆಗುಂಡಿ, ಕೆದರಿದ್ರೆ ಹೊಲಸು ಬರ್ತಾ ಇರುತ್ತೆ’; ಸ್ಪರ್ಧಿಗಳ ವಿರುದ್ಧ ಹರಿಹಾಯ್ದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ಅವರ ಆಟ ಅನೇಕರಿಗೆ ಇಷ್ಟವಾಗುತ್ತಿದೆ. ಕ್ಯಾಪ್ಟನ್ ಭವ್ಯಾ ಅವರು ವೈಯಕ್ತಿಕ ಕಾರಣಗಳಿಗಾಗಿ ಹನುಮಂತರನ್ನು ನಾಮಿನೇಟ್ ಮಾಡಿದರು. ಆದರೆ, ಹನುಮಂತ ಅವರು ಶಾಂತವಾಗಿ ಪ್ರತಿಕ್ರಿಯಿಸಿದರು.

‘ಇಲ್ಲಿ ಎಲ್ಲರೂ ತಿಪ್ಪೆಗುಂಡಿ, ಕೆದರಿದ್ರೆ ಹೊಲಸು ಬರ್ತಾ ಇರುತ್ತೆ’; ಸ್ಪರ್ಧಿಗಳ ವಿರುದ್ಧ ಹರಿಹಾಯ್ದ ಹನುಮಂತ
ಹನುಮಂತ
ರಾಜೇಶ್ ದುಗ್ಗುಮನೆ
|

Updated on:Nov 20, 2024 | 6:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಅವರು ಆಟ ಆಡುವ ರೀತಿಗೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ನಡೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟ. ಯಾರಾದರೂ ಅವರನ್ನು ನಾಮಿನೇಟ್ ಮಾಡಿದರೆ ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆ ಬಗ್ಗೆ ಅವರಿಗೆ ಯಾವುದೇ ಚಿಂತೆ ಇಲ್ಲ. ಮಂಗಳವಾರದ (ನವೆಂಬರ್ 19) ಎಪಿಸೋಡ್​ನಲ್ಲಿ ಕ್ಯಾಪ್ಟನ್ ಭವ್ಯಾ ಗೌಡ ಅವರು ಹನುಮಂತ ಅವರನ್ನು ನೇರವಾಗಿ ನಾಮಿನೇಟ್ ಮಾಡಿದರು. ಈ ಬಗ್ಗೆ ಅವರು ತುಟುಕ್ ಪಿಟಕ್ ಎನ್ನಲಿಲ್ಲ. ಆದರೆ, ಆ ಬಳಿಕ ಈ ಬಗ್ಗೆ ಅವರು ಮಾತನಾಡಿದರು.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ನಾಮಿನೇಷನ್ ಪ್ರಕ್ರಿಯೆ ಭಿನ್ನವಾಗಿ ನಡೆದಿದೆ. ಒಬ್ಬರು ಮೂವರನ್ನು ನಾಮಿನೇಟ್ ಮಾಡಬೇಕಿತ್ತು. ಆ ಪೈಕಿ ಒಬ್ಬರನ್ನು ಹೊರಕ್ಕೆ ಇಡುವ ಅಧಿಕಾರ ವೈಲ್ಡ್ ಕಾರ್ಡ್ ಸ್ಪರ್ಧಿಗಳಾದ ಶೋಭಾ ಶೆಟ್ಟಿ ಹಾಗೂ ರಜತ್ ಅವರಿಗೆ ಇತ್ತು. ಈ ಪ್ರಕ್ರಿಯೆಯ ಅನುಸಾರ ಚೈತ್ರಾ, ಮಂಜು, ತ್ರಿವಿಕ್ರಮ್, ಗೌತಮಿ, ಮೋಕ್ಷಿತಾ, ಧರ್ಮ ನಾಮಿನೇಟ್ ಆದರು.

ನಾಮಿನೇಷನ್ ಪ್ರಕ್ರಿಯೆಯಲ್ಲಿ ಪ್ರತಿ ಕ್ಯಾಪ್ಟನ್​ಗೆ ವಿಶೇಷ ಅಧಿಕಾರ ಇರುತ್ತದೆ. ಒಬ್ಬರನ್ನು ನಾಮಿನೇಟ್ ಮಾಡಲು ಅಥವಾ ನಾಮಿನೇಷನ್​ನಿಂದ ಬಚಾವ್ ಮಾಡುವ ಅಧಿಕಾರ ಇರುತ್ತದೆ. ಒಬ್ಬರನ್ನು ನಾಮಿನೇಟ್ ಮಾಡುವ ಅಧಿಕಾರವನ್ನು ಭವ್ಯಾಗೆ ಬಿಗ್ ಬಾಸ್ ನೀಡಿದರು. ಇದರ ಪ್ರಕಾರ ಹನುಮಂತ ಅವರನ್ನು ಭವ್ಯಾ ನಾಮಿನೇಟ್ ಮಾಡಿದರು. ‘ಟಾಸ್ಕ್ ಬಗ್ಗೆ ನಾನು ಏನನ್ನೂ ಹೇಳಲ್ಲ. ವೈಯಕ್ತಿಕವಾಗಿ ಕೆಲವು ವಿಚಾರ ಇಷ್ಟ ಆಗುವುದಿಲ್ಲ. ಏನಾದರೂ ಹೇಳಿದ್ರೆ, ನಂದು ನಾನು ಹೇಳಿದ್ದೀನಿ, ನಿಂದು ಬಂದಾಗ ನೀನು ಹೇಳಿಕೋ ಎನ್ನುತ್ತಾರೆ’ ಎಂಬ ಕಾರಣ ನೀಡಿ ಭವ್ಯಾ ನಾಮಿನೇಟ್ ಮಾಡಿದರು.

ಇದನ್ನೂ ಓದಿ: ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಬಿಗ್ ಬಾಸ್ ಮಂದಿ

ಆ ಬಳಿಕ ಧನರಾಜ್ ಅವರು ಈ ಬಗ್ಗೆ ಹನುಮಂತ ಬಳಿ ಚರ್ಚೆ ಮಾಡಿದರು. ‘ಭವ್ಯಾ ನಿಮಗೆ ವೈಯಕ್ತಿಕ ಕಾರಣ ನೀಡಿ ನಾಮಿನೇಟ್ ಮಾಡಿದರು. ನೀವು ಕೂಡ ಟಾಸ್ಕ್ ಬದಲು ವೈಯಕ್ತಿಕ ಕಾರಣ ನೀಡಿ ನಾಮಿನೇಟ್ ಮಾಡಬೇಕಿತ್ತು’ ಎಂದು ಹೇಳಿದರು. ‘ಇಲ್ಲಿ ಎಲ್ಲರೂ ತಿಪ್ಪೆಗುಂಡಿ, ಅದನ್ನು ಕೆದರುತ್ತಿದ್ದರೆ ಹೊಲಸು ಬರುತ್ತಲೇ ಇರುತ್ತದೆ’ ಎಂದರು ಹನುಮಂತ. ಈ ಮೂಲಕ ಎಲ್ಲರೂ ಹಣೆಬರಹ ಒಂದೇ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:51 am, Wed, 20 November 24

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು