AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ನಾನೇ ಬಾಸ್’; ಬಿಗ್ ಬಾಸ್ ಎಂಟ್ರಿ ವಿಚಾರದ ಬಗ್ಗೆ ನಟಿಯ ಸ್ಪಷ್ಟನೆ

ಈ ಸ್ಟಾರ್ ನಟಿ ಬಿಗ್ ಬಾಸ್​ಗೆ ಬರುತ್ತಾರೆ ಎನ್ನುವ ಸುದ್ದಿ ಹುಟ್ಟಲೂ ಒಂದು ಕಾರಣ ಇದೆ. ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಪ್ರೋಮೋ ಒಂದು ವೈರಲ್ ಆಯಿತು. ಈ ಪ್ರೋಮೋದಲ್ಲಿ ಬಿಗ್ ಬಾಸ್​ಗೆ ಬರೋ ಸ್ಪರ್ಧಿಗಳ ಮುಖವನ್ನು ಬ್ಲರ್ ಮಾಡಿ ತೋರಿಸಲಾಗಿತ್ತು. ಇದರಲ್ಲಿ ಒಂದು ಫೋಟೋ ಹರಿಪ್ರಿಯಾ ಅವರ ಹೋಲಿಕೆ ಆಗಿತ್ತು.

‘ನನಗೆ ನಾನೇ ಬಾಸ್’; ಬಿಗ್ ಬಾಸ್ ಎಂಟ್ರಿ ವಿಚಾರದ ಬಗ್ಗೆ ನಟಿಯ ಸ್ಪಷ್ಟನೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Sep 27, 2024 | 2:56 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭಕ್ಕೆ ಉಳಿದಿರೋದು ಇನ್ನು ಎರಡು ದಿನ ಮಾತ್ರ. ಈ ಬಾರಿ ಬಿಗ್ ಬಾಸ್​ಗೆ ಯಾರೆಲ್ಲ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಇದಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗಲೇ ಕೆಲವು ಸೆಲೆಬ್ರಿಟಿಗಳು ಬಿಗ್ ಬಾಸ್ ಎಂಟ್ರಿ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಯಾರು? ಅವರು ಕೊಟ್ಟ ಸ್ಪಷ್ಟನೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ಬಾರಿ ಹರಿಪ್ರಿಯಾ ಇರುತ್ತಾರೆ ಎಂದು ಈ ಮೊದಲು ವರದಿ ಆಗಿತ್ತು. ಈ ಸುದ್ದಿ ಹುಟ್ಟಲೂ ಒಂದು ಕಾರಣ ಇದೆ. ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಪ್ರೋಮೋ ಒಂದು ವೈರಲ್ ಆಯಿತು. ಈ ಪ್ರೋಮೋದಲ್ಲಿ ಬಿಗ್ ಬಾಸ್​ಗೆ ಬರೋ ಸ್ಪರ್ಧಿಗಳ ಮುಖವನ್ನು ಬ್ಲರ್ ಮಾಡಿ ತೋರಿಸಲಾಗಿತ್ತು. ಇದರಲ್ಲಿ ಒಂದು ಫೋಟೋ ಹರಿಪ್ರಿಯಾ ಅವರ ಹೋಲಿಕೆ ಆಗಿತ್ತು.

ಈ ಬಾರಿ ಹರಿಪ್ರಿಯಾ ಬಿಗ್ ಬಾಸ್​ಗೆ ಬರುತ್ತಾರೆ ಎಂದು ಚರ್ಚೆ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇಲ್ಲಪ್ಪಾ ಇಲ್ಲ. ನನಗೆ ನಾನೇ ಬಾಸು. ನಾನು ನಮ್ಮ ಮನೆ ಬಿಟ್ಟು ಯಾವ ಮನೆಗೂ ಹೋಗ್ತಿಲ್ಲ’ ಎಂದು ಹರಿಪ್ರಿಯಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಸಿನಿಮಾಗೂ ಇಷ್ಟು ನರ್ವಸ್ ಆಗಿಲ್ಲ’; ರಿಷಬ್ ಎದುರು ಹೇಳಿಕೊಂಡ ಹರಿಪ್ರಿಯಾ

ಹರಿಪ್ರಿಯಾ ಅವರು ಹಲವು ಸಿನಿಮಾ ಆಫರ್​ಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ‘ಬೆಲ್ ಬಾಟಂ 2’, ‘ಹ್ಯಾಪಿ ಎಂಡಿಂಗ್’, ‘ಲಗಾಮ್’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಾ ಇದ್ದಾರೆ. ಅವರ ನಟನೆಯ ಯಾವುದೇ ಸಿನಿಮಾ ಈ ವರ್ಷ ರಿಲೀಸ್ ಆಗಿಲ್ಲ. ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಮದುವೆ ಕಳೆದ ವರ್ಷ ನಡೆದಿದೆ. ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ಕಾರಣಕ್ಕೂ ಅವರು ಬಿಗ್ ಬಾಸ್​ಗೆ ಬರೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ