AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?

ನಟಿ ಹರಿಪ್ರಿಯಾ ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಕೆಲ ಸಿನಿಮಾ ಕೆಲಸಗಳು ವಿಳಂಬವಾಗಿವೆ.

Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?
ಹರಿಪ್ರಿಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 04, 2021 | 3:11 PM

Share

ಕಿರುತೆರೆ ಕೂಡ ಈಗ ಹಿರಿತೆರೆಯಷ್ಟೇ ಬೆಳೆದು ನಿಂತಿದೆ. ಸ್ಟಾರ್​ ಕಲಾವಿದರು ಕಿರುತೆರೆ ನಿರೂಪಣೆ ಮಾಡಿದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ನಟಿ ಹರಿಪ್ರಿಯಾ ಹಾಗೂ ನಟ ಪ್ರಜ್ವಲ್​ ದೇವರಾಜ್​. ಇಬ್ಬರೂ ಈಗ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಹಾಗಾದರೆ, ಹರಿಪ್ರಿಯಾ ಹಾಗೂ ಪ್ರಜ್ವಲ್​ ಯಾವುದಾದರೂ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರಾ? ಇಲ್ಲ. ಇಬ್ಬರೂ ರಿಯಾಲಿಟಿ ಶೋ ಒಂದರ ಜಡ್ಜ್ ಆಗುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ.

ನಟಿ ಹರಿಪ್ರಿಯಾ ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಕೆಲ ಸಿನಿಮಾ ಕೆಲಸಗಳು ವಿಳಂಬವಾಗಿವೆ. ಈಗ ಆ ಕೆಲಸಗಳನ್ನು ಹರಿಪ್ರಿಯಾ ಪೂರ್ಣಗೊಳಿಸುತ್ತಿದ್ದಾರೆ. ಈ ಮಧ್ಯೆ ಅವರು ರಿಯಾಲಿಟಿ ಶೋಗೆ ಜಡ್ಜ್​ ಆಗುವುದಕ್ಕೂ ಒಪ್ಪಿದ್ದಾರೆ.

‘ಡ್ಯಾನ್ಸ್​ ಡ್ಯಾನ್ಸ್​’ ಹೆಸರಿನ ಹೊಸ ರಿಯಾಲಿಟಿ ಶೋ ಬರುತ್ತಿದೆ. ಈ ಶೋಗೆ ಹರಿಪ್ರಿಯಾ ಹಾಗೂ ಪ್ರಜ್ವಲ್​ ಜಡ್ಜ್​ ಆಗಲಿದ್ದಾರೆ. ಡ್ಯಾನ್ಸ್​ ಕೊರಿಯೋಗ್ರಫಿ ಹಾಗೂ ನಿರ್ದೇಶನದ ಮೂಲಕ ಹೆಸರು ಮಾಡಿರುವ ಎ. ಹರ್ಷ ಕೂಡ ಈ ಶೋನ ಜಡ್ಜ್​ ಸ್ಥಾನ ಅಲಂಕರಿಸಿದ್ದಾರೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 7’ ವಿನ್ನರ್​ ಶೈನ್​ ಶೆಟ್ಟಿ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

ಅಂದಹಾಗೆ, ಹರಿಪ್ರಿಯಾ ಅವರಿಗೆ ಈ ಮೊದಲು ಕೂಡ ರಿಯಾಲಿಟಿ ಶೋಗಳಿಂದ ಸಾಕಷ್ಟು ಆಫರ್​ಗಳು ಬಂದಿದ್ದವು. ಆದರೆ, ಇದನ್ನು ಅವರು ತಿರಸ್ಕರಿಸಿದ್ದರು. ಈಗ ಅವರಿಗೆ ‘ಡ್ಯಾನ್ಸ್​ ಡ್ಯಾನ್ಸ್​’ ಶೋ ಕಾನ್ಸೆಪ್ಟ್​ ಇಷ್ಟವಾಗಿದೆ. ಈ ಕಾರಣಕ್ಕೆ ಈ ರಿಯಾಲಿಟಿ ಶೋನ ಭಾಗವಾಗೋದಕ್ಕೆ ಅವರು ಒಪ್ಪಿಕೊಂಡಿದ್ದಾರೆ.

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರದಲ್ಲಿ ಹರಿಪ್ರಿಯಾ ನಟಿಸಿದ್ದಾರೆ. ಈ ಸಿನಿಮಾ ‘ಹಾಲಿವುಡ್ ಅಂತರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿತ್ತು. ಹರಿಪ್ರಿಯಾಗೆ ಶ್ರೇಷ್ಠನಟಿ ಪ್ರಶಸ್ತಿ ಸಿಕ್ಕಿತ್ತು. ‘ಅಮೃತಮತಿ’ ಚಿತ್ರ ಈ ಮೊದಲು ‘ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಶ್ರೇಷ್ಠ ವಿದೇಶಿ ಭಾಷೆಯ ಚಿತ್ರವೆಂಬ ಪ್ರಶಸ್ತಿ ಗಳಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕತೆ ಪ್ರಶಸ್ತಿ ಲಭಿಸಿತ್ತು.

ಇದನ್ನೂ ಓದಿ: Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ

Published On - 3:10 pm, Wed, 4 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ