AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?

ನಟಿ ಹರಿಪ್ರಿಯಾ ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಕೆಲ ಸಿನಿಮಾ ಕೆಲಸಗಳು ವಿಳಂಬವಾಗಿವೆ.

Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?
ಹರಿಪ್ರಿಯಾ
TV9 Web
| Edited By: |

Updated on:Aug 04, 2021 | 3:11 PM

Share

ಕಿರುತೆರೆ ಕೂಡ ಈಗ ಹಿರಿತೆರೆಯಷ್ಟೇ ಬೆಳೆದು ನಿಂತಿದೆ. ಸ್ಟಾರ್​ ಕಲಾವಿದರು ಕಿರುತೆರೆ ನಿರೂಪಣೆ ಮಾಡಿದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ನಟಿ ಹರಿಪ್ರಿಯಾ ಹಾಗೂ ನಟ ಪ್ರಜ್ವಲ್​ ದೇವರಾಜ್​. ಇಬ್ಬರೂ ಈಗ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಹಾಗಾದರೆ, ಹರಿಪ್ರಿಯಾ ಹಾಗೂ ಪ್ರಜ್ವಲ್​ ಯಾವುದಾದರೂ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರಾ? ಇಲ್ಲ. ಇಬ್ಬರೂ ರಿಯಾಲಿಟಿ ಶೋ ಒಂದರ ಜಡ್ಜ್ ಆಗುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ.

ನಟಿ ಹರಿಪ್ರಿಯಾ ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಕೆಲ ಸಿನಿಮಾ ಕೆಲಸಗಳು ವಿಳಂಬವಾಗಿವೆ. ಈಗ ಆ ಕೆಲಸಗಳನ್ನು ಹರಿಪ್ರಿಯಾ ಪೂರ್ಣಗೊಳಿಸುತ್ತಿದ್ದಾರೆ. ಈ ಮಧ್ಯೆ ಅವರು ರಿಯಾಲಿಟಿ ಶೋಗೆ ಜಡ್ಜ್​ ಆಗುವುದಕ್ಕೂ ಒಪ್ಪಿದ್ದಾರೆ.

‘ಡ್ಯಾನ್ಸ್​ ಡ್ಯಾನ್ಸ್​’ ಹೆಸರಿನ ಹೊಸ ರಿಯಾಲಿಟಿ ಶೋ ಬರುತ್ತಿದೆ. ಈ ಶೋಗೆ ಹರಿಪ್ರಿಯಾ ಹಾಗೂ ಪ್ರಜ್ವಲ್​ ಜಡ್ಜ್​ ಆಗಲಿದ್ದಾರೆ. ಡ್ಯಾನ್ಸ್​ ಕೊರಿಯೋಗ್ರಫಿ ಹಾಗೂ ನಿರ್ದೇಶನದ ಮೂಲಕ ಹೆಸರು ಮಾಡಿರುವ ಎ. ಹರ್ಷ ಕೂಡ ಈ ಶೋನ ಜಡ್ಜ್​ ಸ್ಥಾನ ಅಲಂಕರಿಸಿದ್ದಾರೆ. ‘ಕನ್ನಡ ಬಿಗ್​ ಬಾಸ್​ ಸೀಸನ್​ 7’ ವಿನ್ನರ್​ ಶೈನ್​ ಶೆಟ್ಟಿ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

ಅಂದಹಾಗೆ, ಹರಿಪ್ರಿಯಾ ಅವರಿಗೆ ಈ ಮೊದಲು ಕೂಡ ರಿಯಾಲಿಟಿ ಶೋಗಳಿಂದ ಸಾಕಷ್ಟು ಆಫರ್​ಗಳು ಬಂದಿದ್ದವು. ಆದರೆ, ಇದನ್ನು ಅವರು ತಿರಸ್ಕರಿಸಿದ್ದರು. ಈಗ ಅವರಿಗೆ ‘ಡ್ಯಾನ್ಸ್​ ಡ್ಯಾನ್ಸ್​’ ಶೋ ಕಾನ್ಸೆಪ್ಟ್​ ಇಷ್ಟವಾಗಿದೆ. ಈ ಕಾರಣಕ್ಕೆ ಈ ರಿಯಾಲಿಟಿ ಶೋನ ಭಾಗವಾಗೋದಕ್ಕೆ ಅವರು ಒಪ್ಪಿಕೊಂಡಿದ್ದಾರೆ.

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರದಲ್ಲಿ ಹರಿಪ್ರಿಯಾ ನಟಿಸಿದ್ದಾರೆ. ಈ ಸಿನಿಮಾ ‘ಹಾಲಿವುಡ್ ಅಂತರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿತ್ತು. ಹರಿಪ್ರಿಯಾಗೆ ಶ್ರೇಷ್ಠನಟಿ ಪ್ರಶಸ್ತಿ ಸಿಕ್ಕಿತ್ತು. ‘ಅಮೃತಮತಿ’ ಚಿತ್ರ ಈ ಮೊದಲು ‘ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಶ್ರೇಷ್ಠ ವಿದೇಶಿ ಭಾಷೆಯ ಚಿತ್ರವೆಂಬ ಪ್ರಶಸ್ತಿ ಗಳಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕತೆ ಪ್ರಶಸ್ತಿ ಲಭಿಸಿತ್ತು.

ಇದನ್ನೂ ಓದಿ: Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ

Published On - 3:10 pm, Wed, 4 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?