AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು; ಈ ವಿವಾಹಕ್ಕೆ ಕನ್ನಡದ ಮಂತ್ರ

‘ಕನ್ನಡತಿ’ ಕಥೆ ಹೇಗೇಗೋ ಹೋಗುತ್ತಿದೆ ಎಂಬುದನ್ನು ಕೇಳಿ ಫ್ಯಾನ್ಸ್ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಹರ್ಷ ಹಾಗೂ ಭುವಿಯ ಮದುವೆ ನಡೆದಿದೆ.

ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು; ಈ ವಿವಾಹಕ್ಕೆ ಕನ್ನಡದ ಮಂತ್ರ
ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು
TV9 Web
| Edited By: |

Updated on: Jun 28, 2022 | 5:46 PM

Share

‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಕೊನೆಗೂ ಹರ್ಷ ಹಾಗೂ ಭುವಿ ಮದುವೆ ನಡೆದಿದೆ. ಹಲವು ದಿನಗಳಿಂದ ವೀಕ್ಷಕರು ಕಾದಿದ್ದ ಸಮಯ ಕೊನೆಗೂ ಕೂಡಿ ಬಂದಿದೆ. ಸಾಮಾನ್ಯವಾಗಿ ಧಾರಾವಾಹಿಗಳಲ್ಲಿ ಮದುವೆ ಎಂದರೆ ದೊಡ್ಡ ದೊಡ್ಡ ಸೆಟ್ ಹಾಕಲಾಗುತ್ತದೆ. ‘ಕನ್ನಡತಿ’ ಧಾರಾವಾಹಿಯಲ್ಲೂ ವಿವಾಹಕ್ಕೆ ದೊಡ್ಡ ಸೆಟ್ ಹಾಕಲಾಗಿತ್ತು. ಆದರೆ, ಮದುವೆ ನಡೆದಿದ್ದು ಮಾತ್ರ ಆಸ್ಪತ್ರೆಯಲ್ಲಿ. ಭುವಿಗೆ ಹರ್ಷ ತಾಳಿ ಕಟ್ಟುವುದನ್ನು ನೋಡಿ ವರುಧಿನಿ ಒದ್ದಾಡಿದ್ದಾಳೆ. ಪ್ಲ್ಯಾನ್ ಫ್ಲಾಪ್ ಆಯಿತು ಎನ್ನುವ ಬೇಸರದಲ್ಲಿ ಸಾನಿಯಾ ಇದ್ದಾಳೆ. ಈ ಮದುವೆಯನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹರ್ಷ ಹಾಗೂ ಭುವಿ ಮದುವೆ ನಡೆಯುವಾಗ ವರುಧಿನಿ ಕೈ ಕತ್ತರಿಸಿಕೊಂಡಿದ್ದಳು. ಆಕೆಯನ್ನು ಭುವಿ ಆಸ್ಪತ್ರೆಗೆ ಕರೆದುಕೊಂಡು ಹೋದಳು. ಕಥೆ ಹೇಗೇಗೋ ಹೋಗುತ್ತಿದೆ ಎಂಬುದನ್ನು ಕೇಳಿ ಫ್ಯಾನ್ಸ್ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಹರ್ಷ ಹಾಗೂ ಭುವಿಯ ಮದುವೆ ನಡೆದಿದೆ. ಆಸ್ಪತ್ರೆಯಲ್ಲಿ ಈ ಮದುವೆ ನಡೆಸಲಾಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ
Image
ಆಸ್ಪತ್ರೆಯಲ್ಲೇ ನಡೆಯಲಿದೆ ಹರ್ಷ-ಭುವಿ ಮದುವೆ; ವಿವಾಹ ಮಾಡಲು ಬಂದ ರಾಮಾಚಾರಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ
Image
‘ಕನ್ನಡತಿ’ ಧಾರಾವಾಹಿ: ಮದುವೆಗೂ ಮುನ್ನ ಹರ್ಷನ ಬಳಿ ಮಾಡಿದ್ದ 30 ಲಕ್ಷ ರೂಪಾಯಿ ಸಾಲ ತೀರಿಸಿದ ಭುವಿ

ಆಸ್ಪತ್ರೆಯ ಒಳಗೆ ಚಿಕ್ಕದಾಗಿ ಮದುವೆ ಅರೇಂಜ್​ಮೆಂಟ್ಸ್ ಮಾಡಲಾಗಿದೆ. ಭುವಿಯನ್ನು ವೀಲ್​ಚೇರ್ ಮೇಲೆ ಕೂರಿಸಲಾಗಿದೆ. ‘ರಾಮಾಚಾರಿ’ ಧಾರಾವಾಹಿ ನಾಯಕ ರಾಮಾಚಾರಿ ಈ ಮದುವೆಗೆ ಅರ್ಚಕನಾಗಿ ಬಂದಿದ್ದರು. ಅವನೇ ಮುಂದೆ ನಿಂತು ಮದುವೆ ಮಾಡಿಸಿದ್ದಾನೆ. ವಿಶೇಷ ಎಂದರೆ ಈ ಮದುವೆಯಲ್ಲಿ ಸಂಸ್ಕೃತದ ಮಂತ್ರಗಳನ್ನು ಹೇಳದೆ ಕನ್ನಡದಲ್ಲಿ ಮಂತ್ರಗಳನ್ನು ಹೇಳಲಾಯಿತು. ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಈ ಮದುವೆ ನಡೆಯಬಾರದು ಎನ್ನುವ ಉದ್ದೇಶ ಇದ್ದಿದ್ದು ಸಾನಿಯಾ ಹಾಗೂ ವರುಧಿನಿಗೆ. ಇವರಿಬ್ಬರೂ ಕೂಡ ಈ ಮದುವೆಯಲ್ಲಿ ಭಾಗಿ ಆಗಿದ್ದರು. ಇವರ ಎದುರೇ ಈ ವಿವಾಹ ನಡೆದಿದೆ. ವರುಧಿನಿ ಈ ಮದುವೆ ನೋಡಲಾಗದೆ ಒದ್ದಾಡಿದ್ದಾಳೆ.

ಹರ್ಷನನ್ನು ಬಿಟ್ಟುಕೊಡುವಂತೆ ಭುವಿಗೆ ಕೇಳಿದ್ದಳು ವರುಧಿನಿ. ಆದರೆ, ಬಿಟ್ಟುಕೊಡುವುದಿಲ್ಲ ಎನ್ನುವ ಮಾತನ್ನು ವರುಧಿನಿಗೆ ನೇರವಾಗಿಯೇ ಹೇಳಿದ್ದಳು ಭುವಿ. ಹೀಗಾಗಿ, ಮುಂದಿನ ದಿನಗಳಲ್ಲಿ ಆಕೆಯ ವಿರುದ್ಧ ವರು ಸೇಡು ತೀರಿಸಿಕೊಳ್ಳಲು ಮುಂದಾದರೂ ಅಚ್ಚರಿ ಏನಿಲ್ಲ. ಇನ್ನು, ರತ್ನಮಾಲಾ ಒಡೆತನದ ಎಲ್ಲಾ ಕಂಪೆನಿಗೆ ಭುವಿಯೇ ಸಿಇಒ ಆಗಲಿದ್ದಾಳೆ. ಈ ವಿಚಾರ ಗೊತ್ತಾದರೆ ಸಾನಿಯಾ ಹೊಟ್ಟೆ ಉರಿದುಕೊಳ್ಳುವುದು ಪಕ್ಕಾ.

ಇದನ್ನೂ ಓದಿ: ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ

ಆಸ್ಪತ್ರೆಯಲ್ಲೇ ನಡೆಯಲಿದೆ ಹರ್ಷ-ಭುವಿ ಮದುವೆ; ವಿವಾಹ ಮಾಡಲು ಬಂದ ರಾಮಾಚಾರಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!