AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು; ಈ ವಿವಾಹಕ್ಕೆ ಕನ್ನಡದ ಮಂತ್ರ

‘ಕನ್ನಡತಿ’ ಕಥೆ ಹೇಗೇಗೋ ಹೋಗುತ್ತಿದೆ ಎಂಬುದನ್ನು ಕೇಳಿ ಫ್ಯಾನ್ಸ್ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಹರ್ಷ ಹಾಗೂ ಭುವಿಯ ಮದುವೆ ನಡೆದಿದೆ.

ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು; ಈ ವಿವಾಹಕ್ಕೆ ಕನ್ನಡದ ಮಂತ್ರ
ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು
TV9 Web
| Edited By: |

Updated on: Jun 28, 2022 | 5:46 PM

Share

‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಕೊನೆಗೂ ಹರ್ಷ ಹಾಗೂ ಭುವಿ ಮದುವೆ ನಡೆದಿದೆ. ಹಲವು ದಿನಗಳಿಂದ ವೀಕ್ಷಕರು ಕಾದಿದ್ದ ಸಮಯ ಕೊನೆಗೂ ಕೂಡಿ ಬಂದಿದೆ. ಸಾಮಾನ್ಯವಾಗಿ ಧಾರಾವಾಹಿಗಳಲ್ಲಿ ಮದುವೆ ಎಂದರೆ ದೊಡ್ಡ ದೊಡ್ಡ ಸೆಟ್ ಹಾಕಲಾಗುತ್ತದೆ. ‘ಕನ್ನಡತಿ’ ಧಾರಾವಾಹಿಯಲ್ಲೂ ವಿವಾಹಕ್ಕೆ ದೊಡ್ಡ ಸೆಟ್ ಹಾಕಲಾಗಿತ್ತು. ಆದರೆ, ಮದುವೆ ನಡೆದಿದ್ದು ಮಾತ್ರ ಆಸ್ಪತ್ರೆಯಲ್ಲಿ. ಭುವಿಗೆ ಹರ್ಷ ತಾಳಿ ಕಟ್ಟುವುದನ್ನು ನೋಡಿ ವರುಧಿನಿ ಒದ್ದಾಡಿದ್ದಾಳೆ. ಪ್ಲ್ಯಾನ್ ಫ್ಲಾಪ್ ಆಯಿತು ಎನ್ನುವ ಬೇಸರದಲ್ಲಿ ಸಾನಿಯಾ ಇದ್ದಾಳೆ. ಈ ಮದುವೆಯನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹರ್ಷ ಹಾಗೂ ಭುವಿ ಮದುವೆ ನಡೆಯುವಾಗ ವರುಧಿನಿ ಕೈ ಕತ್ತರಿಸಿಕೊಂಡಿದ್ದಳು. ಆಕೆಯನ್ನು ಭುವಿ ಆಸ್ಪತ್ರೆಗೆ ಕರೆದುಕೊಂಡು ಹೋದಳು. ಕಥೆ ಹೇಗೇಗೋ ಹೋಗುತ್ತಿದೆ ಎಂಬುದನ್ನು ಕೇಳಿ ಫ್ಯಾನ್ಸ್ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಹರ್ಷ ಹಾಗೂ ಭುವಿಯ ಮದುವೆ ನಡೆದಿದೆ. ಆಸ್ಪತ್ರೆಯಲ್ಲಿ ಈ ಮದುವೆ ನಡೆಸಲಾಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ
Image
ಆಸ್ಪತ್ರೆಯಲ್ಲೇ ನಡೆಯಲಿದೆ ಹರ್ಷ-ಭುವಿ ಮದುವೆ; ವಿವಾಹ ಮಾಡಲು ಬಂದ ರಾಮಾಚಾರಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ
Image
‘ಕನ್ನಡತಿ’ ಧಾರಾವಾಹಿ: ಮದುವೆಗೂ ಮುನ್ನ ಹರ್ಷನ ಬಳಿ ಮಾಡಿದ್ದ 30 ಲಕ್ಷ ರೂಪಾಯಿ ಸಾಲ ತೀರಿಸಿದ ಭುವಿ

ಆಸ್ಪತ್ರೆಯ ಒಳಗೆ ಚಿಕ್ಕದಾಗಿ ಮದುವೆ ಅರೇಂಜ್​ಮೆಂಟ್ಸ್ ಮಾಡಲಾಗಿದೆ. ಭುವಿಯನ್ನು ವೀಲ್​ಚೇರ್ ಮೇಲೆ ಕೂರಿಸಲಾಗಿದೆ. ‘ರಾಮಾಚಾರಿ’ ಧಾರಾವಾಹಿ ನಾಯಕ ರಾಮಾಚಾರಿ ಈ ಮದುವೆಗೆ ಅರ್ಚಕನಾಗಿ ಬಂದಿದ್ದರು. ಅವನೇ ಮುಂದೆ ನಿಂತು ಮದುವೆ ಮಾಡಿಸಿದ್ದಾನೆ. ವಿಶೇಷ ಎಂದರೆ ಈ ಮದುವೆಯಲ್ಲಿ ಸಂಸ್ಕೃತದ ಮಂತ್ರಗಳನ್ನು ಹೇಳದೆ ಕನ್ನಡದಲ್ಲಿ ಮಂತ್ರಗಳನ್ನು ಹೇಳಲಾಯಿತು. ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಈ ಮದುವೆ ನಡೆಯಬಾರದು ಎನ್ನುವ ಉದ್ದೇಶ ಇದ್ದಿದ್ದು ಸಾನಿಯಾ ಹಾಗೂ ವರುಧಿನಿಗೆ. ಇವರಿಬ್ಬರೂ ಕೂಡ ಈ ಮದುವೆಯಲ್ಲಿ ಭಾಗಿ ಆಗಿದ್ದರು. ಇವರ ಎದುರೇ ಈ ವಿವಾಹ ನಡೆದಿದೆ. ವರುಧಿನಿ ಈ ಮದುವೆ ನೋಡಲಾಗದೆ ಒದ್ದಾಡಿದ್ದಾಳೆ.

ಹರ್ಷನನ್ನು ಬಿಟ್ಟುಕೊಡುವಂತೆ ಭುವಿಗೆ ಕೇಳಿದ್ದಳು ವರುಧಿನಿ. ಆದರೆ, ಬಿಟ್ಟುಕೊಡುವುದಿಲ್ಲ ಎನ್ನುವ ಮಾತನ್ನು ವರುಧಿನಿಗೆ ನೇರವಾಗಿಯೇ ಹೇಳಿದ್ದಳು ಭುವಿ. ಹೀಗಾಗಿ, ಮುಂದಿನ ದಿನಗಳಲ್ಲಿ ಆಕೆಯ ವಿರುದ್ಧ ವರು ಸೇಡು ತೀರಿಸಿಕೊಳ್ಳಲು ಮುಂದಾದರೂ ಅಚ್ಚರಿ ಏನಿಲ್ಲ. ಇನ್ನು, ರತ್ನಮಾಲಾ ಒಡೆತನದ ಎಲ್ಲಾ ಕಂಪೆನಿಗೆ ಭುವಿಯೇ ಸಿಇಒ ಆಗಲಿದ್ದಾಳೆ. ಈ ವಿಚಾರ ಗೊತ್ತಾದರೆ ಸಾನಿಯಾ ಹೊಟ್ಟೆ ಉರಿದುಕೊಳ್ಳುವುದು ಪಕ್ಕಾ.

ಇದನ್ನೂ ಓದಿ: ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ

ಆಸ್ಪತ್ರೆಯಲ್ಲೇ ನಡೆಯಲಿದೆ ಹರ್ಷ-ಭುವಿ ಮದುವೆ; ವಿವಾಹ ಮಾಡಲು ಬಂದ ರಾಮಾಚಾರಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ