AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು; ಈ ವಿವಾಹಕ್ಕೆ ಕನ್ನಡದ ಮಂತ್ರ

‘ಕನ್ನಡತಿ’ ಕಥೆ ಹೇಗೇಗೋ ಹೋಗುತ್ತಿದೆ ಎಂಬುದನ್ನು ಕೇಳಿ ಫ್ಯಾನ್ಸ್ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಹರ್ಷ ಹಾಗೂ ಭುವಿಯ ಮದುವೆ ನಡೆದಿದೆ.

ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು; ಈ ವಿವಾಹಕ್ಕೆ ಕನ್ನಡದ ಮಂತ್ರ
ಕೊನೆಗೂ ನಡೆಯಿತು ಹರ್ಷ-ಭುವಿ ಮದುವೆ, ಒದ್ದಾಡಿದ ವರು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 28, 2022 | 5:46 PM

‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಕೊನೆಗೂ ಹರ್ಷ ಹಾಗೂ ಭುವಿ ಮದುವೆ ನಡೆದಿದೆ. ಹಲವು ದಿನಗಳಿಂದ ವೀಕ್ಷಕರು ಕಾದಿದ್ದ ಸಮಯ ಕೊನೆಗೂ ಕೂಡಿ ಬಂದಿದೆ. ಸಾಮಾನ್ಯವಾಗಿ ಧಾರಾವಾಹಿಗಳಲ್ಲಿ ಮದುವೆ ಎಂದರೆ ದೊಡ್ಡ ದೊಡ್ಡ ಸೆಟ್ ಹಾಕಲಾಗುತ್ತದೆ. ‘ಕನ್ನಡತಿ’ ಧಾರಾವಾಹಿಯಲ್ಲೂ ವಿವಾಹಕ್ಕೆ ದೊಡ್ಡ ಸೆಟ್ ಹಾಕಲಾಗಿತ್ತು. ಆದರೆ, ಮದುವೆ ನಡೆದಿದ್ದು ಮಾತ್ರ ಆಸ್ಪತ್ರೆಯಲ್ಲಿ. ಭುವಿಗೆ ಹರ್ಷ ತಾಳಿ ಕಟ್ಟುವುದನ್ನು ನೋಡಿ ವರುಧಿನಿ ಒದ್ದಾಡಿದ್ದಾಳೆ. ಪ್ಲ್ಯಾನ್ ಫ್ಲಾಪ್ ಆಯಿತು ಎನ್ನುವ ಬೇಸರದಲ್ಲಿ ಸಾನಿಯಾ ಇದ್ದಾಳೆ. ಈ ಮದುವೆಯನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹರ್ಷ ಹಾಗೂ ಭುವಿ ಮದುವೆ ನಡೆಯುವಾಗ ವರುಧಿನಿ ಕೈ ಕತ್ತರಿಸಿಕೊಂಡಿದ್ದಳು. ಆಕೆಯನ್ನು ಭುವಿ ಆಸ್ಪತ್ರೆಗೆ ಕರೆದುಕೊಂಡು ಹೋದಳು. ಕಥೆ ಹೇಗೇಗೋ ಹೋಗುತ್ತಿದೆ ಎಂಬುದನ್ನು ಕೇಳಿ ಫ್ಯಾನ್ಸ್ ಸಾಕಷ್ಟು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಹರ್ಷ ಹಾಗೂ ಭುವಿಯ ಮದುವೆ ನಡೆದಿದೆ. ಆಸ್ಪತ್ರೆಯಲ್ಲಿ ಈ ಮದುವೆ ನಡೆಸಲಾಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ
Image
ಆಸ್ಪತ್ರೆಯಲ್ಲೇ ನಡೆಯಲಿದೆ ಹರ್ಷ-ಭುವಿ ಮದುವೆ; ವಿವಾಹ ಮಾಡಲು ಬಂದ ರಾಮಾಚಾರಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ
Image
‘ಕನ್ನಡತಿ’ ಧಾರಾವಾಹಿ: ಮದುವೆಗೂ ಮುನ್ನ ಹರ್ಷನ ಬಳಿ ಮಾಡಿದ್ದ 30 ಲಕ್ಷ ರೂಪಾಯಿ ಸಾಲ ತೀರಿಸಿದ ಭುವಿ

ಆಸ್ಪತ್ರೆಯ ಒಳಗೆ ಚಿಕ್ಕದಾಗಿ ಮದುವೆ ಅರೇಂಜ್​ಮೆಂಟ್ಸ್ ಮಾಡಲಾಗಿದೆ. ಭುವಿಯನ್ನು ವೀಲ್​ಚೇರ್ ಮೇಲೆ ಕೂರಿಸಲಾಗಿದೆ. ‘ರಾಮಾಚಾರಿ’ ಧಾರಾವಾಹಿ ನಾಯಕ ರಾಮಾಚಾರಿ ಈ ಮದುವೆಗೆ ಅರ್ಚಕನಾಗಿ ಬಂದಿದ್ದರು. ಅವನೇ ಮುಂದೆ ನಿಂತು ಮದುವೆ ಮಾಡಿಸಿದ್ದಾನೆ. ವಿಶೇಷ ಎಂದರೆ ಈ ಮದುವೆಯಲ್ಲಿ ಸಂಸ್ಕೃತದ ಮಂತ್ರಗಳನ್ನು ಹೇಳದೆ ಕನ್ನಡದಲ್ಲಿ ಮಂತ್ರಗಳನ್ನು ಹೇಳಲಾಯಿತು. ಈ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಈ ಮದುವೆ ನಡೆಯಬಾರದು ಎನ್ನುವ ಉದ್ದೇಶ ಇದ್ದಿದ್ದು ಸಾನಿಯಾ ಹಾಗೂ ವರುಧಿನಿಗೆ. ಇವರಿಬ್ಬರೂ ಕೂಡ ಈ ಮದುವೆಯಲ್ಲಿ ಭಾಗಿ ಆಗಿದ್ದರು. ಇವರ ಎದುರೇ ಈ ವಿವಾಹ ನಡೆದಿದೆ. ವರುಧಿನಿ ಈ ಮದುವೆ ನೋಡಲಾಗದೆ ಒದ್ದಾಡಿದ್ದಾಳೆ.

ಹರ್ಷನನ್ನು ಬಿಟ್ಟುಕೊಡುವಂತೆ ಭುವಿಗೆ ಕೇಳಿದ್ದಳು ವರುಧಿನಿ. ಆದರೆ, ಬಿಟ್ಟುಕೊಡುವುದಿಲ್ಲ ಎನ್ನುವ ಮಾತನ್ನು ವರುಧಿನಿಗೆ ನೇರವಾಗಿಯೇ ಹೇಳಿದ್ದಳು ಭುವಿ. ಹೀಗಾಗಿ, ಮುಂದಿನ ದಿನಗಳಲ್ಲಿ ಆಕೆಯ ವಿರುದ್ಧ ವರು ಸೇಡು ತೀರಿಸಿಕೊಳ್ಳಲು ಮುಂದಾದರೂ ಅಚ್ಚರಿ ಏನಿಲ್ಲ. ಇನ್ನು, ರತ್ನಮಾಲಾ ಒಡೆತನದ ಎಲ್ಲಾ ಕಂಪೆನಿಗೆ ಭುವಿಯೇ ಸಿಇಒ ಆಗಲಿದ್ದಾಳೆ. ಈ ವಿಚಾರ ಗೊತ್ತಾದರೆ ಸಾನಿಯಾ ಹೊಟ್ಟೆ ಉರಿದುಕೊಳ್ಳುವುದು ಪಕ್ಕಾ.

ಇದನ್ನೂ ಓದಿ: ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ

ಆಸ್ಪತ್ರೆಯಲ್ಲೇ ನಡೆಯಲಿದೆ ಹರ್ಷ-ಭುವಿ ಮದುವೆ; ವಿವಾಹ ಮಾಡಲು ಬಂದ ರಾಮಾಚಾರಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ