AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಸುಡಬೇಕೋ ಅಥವಾ ಹೂಳಬೇಕೋ ನಿರ್ಧರಿಸುತ್ತೇನೆ’; ಸಾನಿಯಾಗೆ ಹರ್ಷನ ಎಚ್ಚರಿಕೆ

ಭುವಿಯನ್ನು ಕೆಲಸದಿಂದ ತೆಗೆಯಲು ನೀಲೇಶ್ ಎಂಬ ವ್ಯಕ್ತಿಯನ್ನು ಸಾನಿಯಾ ಆಯ್ಕೆ ಮಾಡಿಕೊಂಡಿದ್ದಳು. ಆತ ಬಲಗೈ ಬಂಟನಂತೆ ವರ್ತಿಸಿದ್ದ. ನೀಲೇಶ್​ಗೆ ಸಾಕಷ್ಟು ಹಣ ನೀಡಿದ್ದರಿಂದ ಆತ ಸಾನಿಯಾ ಹೇಳಿದಂತೆ ನಡೆದುಕೊಳ್ಳುತ್ತಿದ್ದ. ಈ ಮಧ್ಯೆ ಆತ ಉಲ್ಟಾ ಹೊಡೆದಿದ್ದಾನೆ.

‘ನಿಮ್ಮನ್ನು ಸುಡಬೇಕೋ ಅಥವಾ ಹೂಳಬೇಕೋ ನಿರ್ಧರಿಸುತ್ತೇನೆ’; ಸಾನಿಯಾಗೆ ಹರ್ಷನ ಎಚ್ಚರಿಕೆ
ಹರ್ಷ-ಸಾನಿಯಾ
TV9 Web
| Edited By: |

Updated on:Oct 04, 2022 | 3:03 PM

Share

‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಫ್ಯಾಮಿಲಿ ಡ್ರಾಮಾ ಹೈಲೈಟ್ ಆಗುತ್ತಿದೆ. ಒಂದು ಕಡೆ ಎಂಡಿ ಪಟ್ಟ ಉಳಿಸಿಕೊಳ್ಳಬೇಕು ಎಂದು ಸಾನಿಯಾ ಹೋರಾಡುತ್ತಿದ್ದಾಳೆ. ಸದಾ ಸಂಚು ರೂಪಿಸುವ ಸಾನಿಯಾನ ಮಟ್ಟ ಹಾಕಲು ಹರ್ಷ ಪ್ರಯತ್ನ ಮಾಡುತ್ತಿದ್ದಾನೆ. ಇದರ ಜತೆಗೆ ಹರ್ಷನ ಬಾಯಿಯಿಂದ ಆಗಾಗ ಬರುವ ಕಟು ಮಾತುಗಳಿಂದ ಭುವಿಗೆ ಬೇಸರ ಆಗುತ್ತಿದೆ. ರತ್ನಮಾಲಾ ಲೋಕವೇ ಬೇರೆ. ಆಕೆಗೆ ಮರೆವಿನ ಕಾಯಿಲೆ ಕಾಡುತ್ತಿದೆ. ಇದರಿಂದ ಆಕೆ ಸಾಕಷ್ಟು ನೊಂದಿದ್ದಾಳೆ. ತನಗೆ ಯಾವುದೋ ಸಮಸ್ಯೆ ಕಾಡುತ್ತಿದೆ ಎಂಬುದು ರತ್ನಮಾಲಾಗೆ ಮನದಟ್ಟಾಗಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸಾನಿಯಾಗೆ ಹರ್ಷ (Harsha) ಖಡಕ್ ಎಚ್ಚರಿಕೆ ನೀಡಿದ್ದಾನೆ. ನಿಂತ ಜಾಗದಲ್ಲೇ ಸಾನಿಯಾನ ಹೂಳುವ ಎಚ್ಚರಿಕೆ ನೀಡಿದ್ದಾನೆ.

ಭುವಿಯನ್ನು ಕೆಲಸದಿಂದ ತೆಗೆಯಲು ನೀಲೇಶ್ ಎಂಬ ವ್ಯಕ್ತಿಯನ್ನು ಸಾನಿಯಾ ಆಯ್ಕೆ ಮಾಡಿಕೊಂಡಿದ್ದಳು. ಆತ ಬಲಗೈ ಬಂಟನಂತೆ ವರ್ತಿಸಿದ್ದ. ನೀಲೇಶ್​ಗೆ ಸಾಕಷ್ಟು ಹಣ ನೀಡಿದ್ದರಿಂದ ಆತ ಸಾನಿಯಾ ಹೇಳಿದಂತೆ ನಡೆದುಕೊಳ್ಳುತ್ತಿದ್ದ. ಈ ಮಧ್ಯೆ ಆತ ಉಲ್ಟಾ ಹೊಡೆದಿದ್ದಾನೆ. ಸಾನಿಯಾ ಮಾಡಿದ ಕೆಟ್ಟ ಕೆಲಸಗಳ ಬಗ್ಗೆ ಹರ್ಷನ ಎದುರು ನೀಲೇಶ್ ಬಾಯ್ಬಿಟ್ಟಿದ್ದಾನೆ. ಇದರಿಂದ ಸಾನಿಯಾ ಅಸಲಿ ಮುಖ ತೆರೆದುಕೊಂಡಿದೆ.

ಸಾನಿಯಾ ಕಾರಿನಲ್ಲಿ ಹೋಗುತ್ತಿರುವಾಗ ಹರ್ಷ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಪದೇಪದೇ ಹಾರ್ನ್ ಹೊಡೆದಿದ್ದಾನೆ. ಸಾನಿಯಾ ಸಿಟ್ಟಿನಿಂದ ಬಾಗಿಲು ತೆಗೆದು ನೋಡಿದಾಗ ಆಕೆಗೆ ಕಂಡಿದ್ದು ಹರ್ಷ. ಇದೇ ಸಮಯಕ್ಕೆ ನೀಲೇಶ್ ಕೂಡ ಕರೆ ಮಾಡಿದ್ದಾನೆ. ‘ನಾನು ಹರ್ಷನಿಗೆ ಕರೆ ಮಾಡಿ ಎಲ್ಲವನ್ನೂ ಹೇಳಿದ್ದೇನೆ. ನಿಮ್ಮ ದುಡ್ಡೂ ಬೇಡ, ನಿಮ್ಮ ಸಹವಾಸವೂ ಬೇಡ’ ಎಂದು ಹೇಳಿ ಆತ ಕಾಲ್ ಕಟ್ ಮಾಡಿದ್ದಾನೆ. ಇದರಿಂದ ಸಾನಿಯಾ ಆಕಾಶವೇ ಕಳಚಿ ಬಿದ್ದಂತೆ ವರ್ತಿಸಿದ್ದಾಳೆ.

ಇದನ್ನೂ ಓದಿ
Image
ಏಕವಚನದಲ್ಲಿ ಬೈಸಿಕೊಂಡು, ಆಸ್ಪತ್ರೆಯಲ್ಲಿ ನಿದ್ರಿಸಿದ ಸಾನಿಯಾ; ಆದ ಅವಮಾನಕ್ಕೆ ಸೇಡು ತೀರಿಸಿಕೊಳ್ತಾಳಾ ರತ್ನಮಾಲಾ ಸೊಸೆ?
Image
‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

‘ಸಾನಿಯಾ ನಿಮ್ಮ ಕಾರು ಮುಂದಿದೆ ಎಂದ ಮಾತ್ರಕ್ಕೆ ರೇಸ್​ನಲ್ಲಿ ನೀವು ಮುಂದಿದ್ದೀರಿ ಎಂದು ಅರ್ಥವಲ್ಲ. ಕಾರು ಹತ್ತಿ ಹೊರಡಿ. ನಿಮ್ಮನ್ನು ಸುಡಬೇಕೋ ಅಥವಾ ಹೂಳಬೇಕೋ ಎಂಬುದನ್ನು ನಾನು ನಿರ್ಧರಿಸುತ್ತೀನಿ’ ಎಂದು ಸಾನಿಯಾಗೆ ಎಚ್ಚರಿಕೆ ನೀಡಿದ್ದಾನೆ ಹರ್ಷ. ಆದರೆ, ಹರ್ಷನ ಬೆದರಿಕೆಗೆ ಸಾನಿಯಾ ಹೆದರಿಲ್ಲ.

‘ನೀಲೇಶ್ ದುಡ್ಡು ಕೊಟ್ಟರೆ ಐದು ನಿಮಿಷಕ್ಕೆ ಒಂದು ಬಾರಿ ಮನಸ್ಸು ಬದಲಾಯಿಸುತ್ತಾನೆ. ಆತನ ಬಳಿ ಹೋಗಿ ನೀವು ಸಾಕ್ಷಿ ಹೇಳಿಸ್ತೀರಿ ಅಂತಿದೀರಲ್ಲ. ನೀವು ಏನೇ ಮಾಡಿದ್ರೂ ನನಗೆ ಭಯ ಇಲ್ಲ. ಮನೆಯಲ್ಲಿರುವ ಒಳ್ಳೆಯವರ ಮೇಲೆ ನನಗೆ ನಂಬಿಕೆ ಇದೆ. ನೀವು ಒಳ್ಳೆಯವರಾಗಿ, ನಿಮಗೂ ಒಳ್ಳೆಯದಾಗುತ್ತದೆ’ ಎಂದು ಸಾನಿಯಾ ಹರ್ಷನಿಗೆ ಕಿವಿಮಾತು ಹೇಳಿ ಅಲ್ಲಿಂದ ತೆರಳಿದ್ದಾಳೆ.

ಇದನ್ನೂ ಓದಿ: ‘ಕನ್ನಡತಿ’ ಕಥೆಗೆ ಬಿಗ್ ಟ್ವಿಸ್ಟ್​: ಮಾಡದ ತಪ್ಪಿಗೆ ಅರೆಸ್ಟ್​ ಆದ ಭುವನೇಶ್ವರಿ

ಸಾನಿಯಾ ಕೆಲಸಕ್ಕೆ ಕುತ್ತು?

ಸಾನಿಯಾ ಕೆಲಸಕ್ಕೆ ಕುತ್ತು ಬರುವ ಬಗ್ಗೆ ರತ್ನಮಾಲಾ ಈ ಮೊದಲೇ ಎಚ್ಚರಿಕೆ ನೀಡಿದ್ದಳು. ಅದು ನಿಜವಾಗುವ ಕಾಲ ಸಮೀಪಿಸಿದೆ. ರತ್ನಮಾಲಾ ಸಂದರ್ಶನಕ್ಕೆ ಪತ್ರಕರ್ತೆ ಬಂದಿದ್ದಾಳೆ. ಅವಳ ಬಳಿ ಏನು ಮಾತನಾಡಬೇಕು ಎಂಬುದು ತಿಳಿಯದೇ ಭುವಿ ಸಮೀಪ ಬಂದು ರತ್ನಮಾಲಾ ತನ್ನ ಆತಂಕ ತೋಡಿಕೊಂಡಿದ್ದಾಳೆ. ‘ಏನಾದರೂ ಹೇಳೋಕೆ ಇದ್ದರೆ ಹೇಳಿಬಿಡಿ. ಇಲ್ಲ ಎಂದರೆ ಹಾಗೇ ಕಳುಹಿಸಿ’ ಎಂದು ರತ್ನಮಾಲಾಗೆ ಭುವಿ ಸೂಚಿಸಿದ್ದಾಳೆ. ‘ಕಂಪನಿಗೆ ಸಂಬಂಧಿಸಿ ಕೆಲ ಪ್ರಮುಖ ನಿರ್ಧಾರ ಕೈಗೊಂಡಿದ್ದೇನೆ. ಅದನ್ನು ಮಾಧ್ಯಮದವರಿಗೆ ಹೇಳಿದರೆ ಹೇಗೆ’ ಎಂದು ಕೇಳಿದಳು ರತ್ನಮಾಲಾ. ‘ಸಂಬಂಧಿಸಿದವರಿಗೆ ಆ ನಿರ್ಧಾರವನ್ನು ಮೊದಲು ಹೇಳಿ ಆ ಬಳಿಕ ಅದನ್ನು ಮಾಧ್ಯಮದವರಿಗೆ ತಿಳಿಸಿ’ ಎಂದು ಭುವಿ ಸೂಚಿಸಿದಳು.

ಶ್ರೀಲಕ್ಷ್ಮಿ ಎಚ್.

Published On - 7:00 am, Tue, 4 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ