AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷನಿಗೆ ಭುವಿ ಸಿಕ್ಕರೆ ಆತ ಕಳೆದುಕೊಳ್ಳೋದು ಯಾರನ್ನ? ಭವಿಷ್ಯವಾಣಿಯ ಹಿಂದಿನ ಮರ್ಮವೇನು?

ಹರ್ಷ ಮೊದಲೇ ದೇವರ ಬಗ್ಗೆ ನಂಬಿಕೆ ಇಲ್ಲದ ವ್ಯಕ್ತಿ. ಆದಾಗ್ಯೂ, ಭವಿಷ್ಯ ಹೇಳುವ ಮಹಿಳೆಯ ಮಾತು ಆತನನ್ನು ಆಕರ್ಷಿಸುತ್ತದೆ.

ಹರ್ಷನಿಗೆ ಭುವಿ ಸಿಕ್ಕರೆ ಆತ ಕಳೆದುಕೊಳ್ಳೋದು ಯಾರನ್ನ? ಭವಿಷ್ಯವಾಣಿಯ ಹಿಂದಿನ ಮರ್ಮವೇನು?
ಹರ್ಷ-ಭುವಿ
TV9 Web
| Edited By: |

Updated on: Oct 14, 2021 | 4:20 PM

Share

‘ಕನ್ನಡತಿ’ ಧಾರಾವಾಹಿ ಹೊಸಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಒಂದು ಕಡೆ ಹರ್ಷ ಮತ್ತು ಭುವಿ ಪ್ರೀತಿ ವಿಚಾರ ಪ್ರಮುಖ ಘಟಕ್ಕೆ ಬಂದು ನಿಂತಿದೆ. ಮತ್ತೊಂದು ಕಡೆ ಸೌಪರ್ಣಿಕಾ ವಿಚಾರದಲ್ಲಿ ಸಾನಿಯಾ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾಳೆ. ಈ ಮಧ್ಯೆ ಹರ್ಷ ಕೇಳಿದ ಭವಿಷ್ಯವಾಣಿಯನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ.

ಭುವಿ ಜನ್ಮದಿನದ ಹಿನ್ನೆಲೆಯಲ್ಲಿ ಹರ್ಷ ಮತ್ತು ರತ್ನಮಾಲಾ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆಗೂ ಮೊದಲು ದೇವಸ್ಥಾನದಲ್ಲಿ ಹರ್ಷನಿಗೆ ಭವಿಷ್ಯ ಹೇಳುವ ಮಹಿಳೆ ಒಬ್ಬಳು ಸಿಕ್ಕಿದ್ದಳು. ಹರ್ಷ ಮೊದಲೇ ದೇವರ ಬಗ್ಗೆ ನಂಬಿಕೆ ಇಲ್ಲದ ವ್ಯಕ್ತಿ. ಆದಾಗ್ಯೂ, ಭವಿಷ್ಯ ಹೇಳುವ ಮಹಿಳೆಯ ಮಾತು ಆತನನ್ನು ಆಕರ್ಷಿಸುತ್ತದೆ.

ಭುವಿಗೆ ಪ್ರಪೋಸ್​ ಮಾಡಬೇಕು ಎಂದು ಹರ್ಷ ನಿರ್ಧರಿಸಿದ್ದಾನೆ. ಈ ವಿಚಾರದ ಬಗ್ಗೆ ಹರ್ಷ ಭವಿಷ್ಯ ಹೇಳುವ ಮಹಿಳೆಗೆ ಪ್ರಶ್ನೆ ಮಾಡಿದ್ದಾನೆ. ‘ಪ್ರೀತಿ ಸಿಕ್ಕರೆ ಎಲ್ಲವೂ ಸಿಕ್ಕಂತೆಯೇ? ಅಲ್ಲಿಗೆ ಮುಗಿಯುವುದಿಲ್ಲ. ಅಲ್ಲಿಂದ ಎಲ್ಲವೂ ಶುರುವಾಗುತ್ತದೆ. ಪ್ರೀತಿಸುವುದನ್ನು ಯಾವತ್ತೂ ಬಿಡಬಾರದು. ಪ್ರೀತಿಯೇನೋ ಸಿಗಬಹುದು, ಆದರೆ ಕಳೆದುಕೊಳ್ಳೋದು ಇದೆ’ ಎಂದು ಮಹಿಳೆ ಹೇಳುತ್ತಾಳೆ. ಇದು ಹರ್ಷನನ್ನು ಮತ್ತಷ್ಟು ಗೊಂದಲಕ್ಕೆ ಸಿಲುಕಿಸಿದೆ.

ಹರ್ಷನ ತಾಯಿ ರತ್ನಾಮಾಲಾಗೆ ಅನಾರೋಗ್ಯ ಕಾಡುತ್ತಿದೆ. ಅವಳು ಬದುಕೋದು ಇನ್ನು ಕೆಲವೇ ತಿಂಗಳು ಮಾತ್ರ. ಹೀಗಾಗಿ, ಹರ್ಷನಿಗೆ ಭುವಿ ಸಿಗುವ ಸಂದರ್ಭದಲ್ಲಿ ಆತನ ತಾಯಿ ದೂರವಾಗಬಹುದು. ಇನ್ನು, ಭುವಿ ಮತ್ತು ವರುಧಿನಿ ಕ್ಲೋಸ್​ ಫ್ರೆಂಡ್ಸ್​. ಆದರೆ, ಹರ್ಷನನ್ನು ವರುಧಿನಿ ಪ್ರೀತಿಸುತ್ತಿದ್ದಾಳೆ. ಈ ವಿಚಾರದಲ್ಲಿ ಭುವಿ ಮತ್ತು ವರುಧಿನಿ ನಡುವೆ ಮನಸ್ತಾಪ ಉಂಟಾಗಬಹುದು.

ಹರ್ಷ ಅವರು ಭುವಿಗೆ ಪ್ರಪೋಸ್​ ಮಾಡೋಕೆ ರೆಡಿ ಆಗಿದ್ದಾರೆ. ಇದನ್ನು, ಭುವಿ ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಅನ್ನೋದು ಸದ್ಯದ ಕುತೂಹಲ. ಈ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದೆ.

ಇದನ್ನೂ ಓದಿ: ಅದ್ದೂರಿಯಾಗಿ ಭುವಿಗೆ ಪ್ರಪೋಸ್​ ಮಾಡಲು ‘ಕನ್ನಡತಿ’ ಹರ್ಷ ರೆಡಿ; ವಿಲನ್​ ಯಾರು?

ಕನ್ನಡತಿಯಲ್ಲಿ ಹರ್ಷನ ಪ್ರಪೋಸ್​ ಭುವಿ ಒಪ್ಪಿಕೊಳ್ಳೋದು ಡೌಟು? ಇಲ್ಲಿದೆ ಕಾರಣ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ