AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷನಿಗೆ ಭುವಿ ಸಿಕ್ಕರೆ ಆತ ಕಳೆದುಕೊಳ್ಳೋದು ಯಾರನ್ನ? ಭವಿಷ್ಯವಾಣಿಯ ಹಿಂದಿನ ಮರ್ಮವೇನು?

ಹರ್ಷ ಮೊದಲೇ ದೇವರ ಬಗ್ಗೆ ನಂಬಿಕೆ ಇಲ್ಲದ ವ್ಯಕ್ತಿ. ಆದಾಗ್ಯೂ, ಭವಿಷ್ಯ ಹೇಳುವ ಮಹಿಳೆಯ ಮಾತು ಆತನನ್ನು ಆಕರ್ಷಿಸುತ್ತದೆ.

ಹರ್ಷನಿಗೆ ಭುವಿ ಸಿಕ್ಕರೆ ಆತ ಕಳೆದುಕೊಳ್ಳೋದು ಯಾರನ್ನ? ಭವಿಷ್ಯವಾಣಿಯ ಹಿಂದಿನ ಮರ್ಮವೇನು?
ಹರ್ಷ-ಭುವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 14, 2021 | 4:20 PM

‘ಕನ್ನಡತಿ’ ಧಾರಾವಾಹಿ ಹೊಸಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಒಂದು ಕಡೆ ಹರ್ಷ ಮತ್ತು ಭುವಿ ಪ್ರೀತಿ ವಿಚಾರ ಪ್ರಮುಖ ಘಟಕ್ಕೆ ಬಂದು ನಿಂತಿದೆ. ಮತ್ತೊಂದು ಕಡೆ ಸೌಪರ್ಣಿಕಾ ವಿಚಾರದಲ್ಲಿ ಸಾನಿಯಾ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾಳೆ. ಈ ಮಧ್ಯೆ ಹರ್ಷ ಕೇಳಿದ ಭವಿಷ್ಯವಾಣಿಯನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ.

ಭುವಿ ಜನ್ಮದಿನದ ಹಿನ್ನೆಲೆಯಲ್ಲಿ ಹರ್ಷ ಮತ್ತು ರತ್ನಮಾಲಾ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆಗೂ ಮೊದಲು ದೇವಸ್ಥಾನದಲ್ಲಿ ಹರ್ಷನಿಗೆ ಭವಿಷ್ಯ ಹೇಳುವ ಮಹಿಳೆ ಒಬ್ಬಳು ಸಿಕ್ಕಿದ್ದಳು. ಹರ್ಷ ಮೊದಲೇ ದೇವರ ಬಗ್ಗೆ ನಂಬಿಕೆ ಇಲ್ಲದ ವ್ಯಕ್ತಿ. ಆದಾಗ್ಯೂ, ಭವಿಷ್ಯ ಹೇಳುವ ಮಹಿಳೆಯ ಮಾತು ಆತನನ್ನು ಆಕರ್ಷಿಸುತ್ತದೆ.

ಭುವಿಗೆ ಪ್ರಪೋಸ್​ ಮಾಡಬೇಕು ಎಂದು ಹರ್ಷ ನಿರ್ಧರಿಸಿದ್ದಾನೆ. ಈ ವಿಚಾರದ ಬಗ್ಗೆ ಹರ್ಷ ಭವಿಷ್ಯ ಹೇಳುವ ಮಹಿಳೆಗೆ ಪ್ರಶ್ನೆ ಮಾಡಿದ್ದಾನೆ. ‘ಪ್ರೀತಿ ಸಿಕ್ಕರೆ ಎಲ್ಲವೂ ಸಿಕ್ಕಂತೆಯೇ? ಅಲ್ಲಿಗೆ ಮುಗಿಯುವುದಿಲ್ಲ. ಅಲ್ಲಿಂದ ಎಲ್ಲವೂ ಶುರುವಾಗುತ್ತದೆ. ಪ್ರೀತಿಸುವುದನ್ನು ಯಾವತ್ತೂ ಬಿಡಬಾರದು. ಪ್ರೀತಿಯೇನೋ ಸಿಗಬಹುದು, ಆದರೆ ಕಳೆದುಕೊಳ್ಳೋದು ಇದೆ’ ಎಂದು ಮಹಿಳೆ ಹೇಳುತ್ತಾಳೆ. ಇದು ಹರ್ಷನನ್ನು ಮತ್ತಷ್ಟು ಗೊಂದಲಕ್ಕೆ ಸಿಲುಕಿಸಿದೆ.

ಹರ್ಷನ ತಾಯಿ ರತ್ನಾಮಾಲಾಗೆ ಅನಾರೋಗ್ಯ ಕಾಡುತ್ತಿದೆ. ಅವಳು ಬದುಕೋದು ಇನ್ನು ಕೆಲವೇ ತಿಂಗಳು ಮಾತ್ರ. ಹೀಗಾಗಿ, ಹರ್ಷನಿಗೆ ಭುವಿ ಸಿಗುವ ಸಂದರ್ಭದಲ್ಲಿ ಆತನ ತಾಯಿ ದೂರವಾಗಬಹುದು. ಇನ್ನು, ಭುವಿ ಮತ್ತು ವರುಧಿನಿ ಕ್ಲೋಸ್​ ಫ್ರೆಂಡ್ಸ್​. ಆದರೆ, ಹರ್ಷನನ್ನು ವರುಧಿನಿ ಪ್ರೀತಿಸುತ್ತಿದ್ದಾಳೆ. ಈ ವಿಚಾರದಲ್ಲಿ ಭುವಿ ಮತ್ತು ವರುಧಿನಿ ನಡುವೆ ಮನಸ್ತಾಪ ಉಂಟಾಗಬಹುದು.

ಹರ್ಷ ಅವರು ಭುವಿಗೆ ಪ್ರಪೋಸ್​ ಮಾಡೋಕೆ ರೆಡಿ ಆಗಿದ್ದಾರೆ. ಇದನ್ನು, ಭುವಿ ಒಪ್ಪಿಕೊಳ್ಳುತ್ತಾರಾ ಅಥವಾ ಇಲ್ಲವಾ ಅನ್ನೋದು ಸದ್ಯದ ಕುತೂಹಲ. ಈ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದೆ.

ಇದನ್ನೂ ಓದಿ: ಅದ್ದೂರಿಯಾಗಿ ಭುವಿಗೆ ಪ್ರಪೋಸ್​ ಮಾಡಲು ‘ಕನ್ನಡತಿ’ ಹರ್ಷ ರೆಡಿ; ವಿಲನ್​ ಯಾರು?

ಕನ್ನಡತಿಯಲ್ಲಿ ಹರ್ಷನ ಪ್ರಪೋಸ್​ ಭುವಿ ಒಪ್ಪಿಕೊಳ್ಳೋದು ಡೌಟು? ಇಲ್ಲಿದೆ ಕಾರಣ

ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?