AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿ ಎಲಿಮಿನೇಟ್ ಆಗಲು ಕಾರಣವಾಯ್ತು ಈ ಎಲ್ಲ ಅಂಶಗಳು

ಬಿಗ್ ಬಾಸ್​ನಲ್ಲಿ ಸಿರಿ ಅವರು ಯಾವುದೇ ಗುಂಪಿನಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಸ್ವತಂತ್ರವಾಗಿ ಇದ್ದರು. ಅವರು ಎಂದಿಗೂ ಜಗಳ ಮಾಡಿದವರಲ್ಲ. ಟಾಸ್ಕ್​ ಬಂದಾಗ ಅಗ್ರೆಸ್ ಆಗಿ ಆಡಿದವರಲ್ಲ.

ಸಿರಿ ಎಲಿಮಿನೇಟ್ ಆಗಲು ಕಾರಣವಾಯ್ತು ಈ ಎಲ್ಲ ಅಂಶಗಳು
ಸಿರಿ
ರಾಜೇಶ್ ದುಗ್ಗುಮನೆ
|

Updated on: Jan 01, 2024 | 7:06 AM

Share

ವೀಕೆಂಡ್ ಎಪಿಸೋಡ್​ನಲ್ಲಿ ನಟಿ ಸಿರಿ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ನಾಮಿನೇಟ್ ಆದವರ ಪೈಕಿ ಕೊನೆಯಲ್ಲಿ ಮೈಕಲ್ ಹಾಗೂ ಸಿರಿ (Siri) ಉಳಿದುಕೊಂಡಿದ್ದರು. ಸುದೀಪ್ ಅವರು ಸಿರಿ ಹೆಸರು ತೆಗೆದುಕೊಂಡರು. ಸಿರಿಗಿಂತ ಮನೆ ಮಂದಿ ಹೆಚ್ಚು ಬೇಸರಗೊಂಡಿದ್ದರು. ಸಂಗೀತಾ (Sangeetha Sringeri) ಅವರು ಬಿಕ್ಕಿ ಬಿಕ್ಕಿ ಅತ್ತರು. ಮಾರ್ಗದರ್ಶಕರಂತಿದ್ದ ಸಿರಿಯನ್ನು ಬಿಗ್ ಬಾಸ್ ಮನೆ ಕಳೆದುಕೊಂಡಿದೆ. ಈ ಮೂಲಕ ಬಿಗ್ ಬಾಸ್​ ಸದಸ್ಯರ ಸಂಖ್ಯೆ 9ಕ್ಕೆ ಇಳಿಕೆ ಆಗಿದೆ. ಇದರ ಜೊತೆ ಸ್ಪರ್ಧೆಯೂ ಜೋರಾಗಿದೆ.

‘ಬಿಗ್ ಬಾಸ್’ನಲ್ಲಿ ಸಿರಿ ಅನೇಕ ಬಾರಿ ಡೇಂಜರ್​ಜೋನ್​ಗೆ ಹೋಗಿದ್ದರು. ಕೊನೆಯ ಕ್ಷಣದಲ್ಲಿ ಅವರು ಸೇವ್ ಆಗಿ ಬಂದಿದ್ದರು. ಈಗ ಅವರು ಎಲಿಮಿನೇಟ್ ಆಗಿದ್ದಾರೆ. ಮನೆಯಿಂದ ಹೊರ ಹೋಗುವಾಗ ಹೆಚ್ಚು ಬೇಸರ ಮಾಡಿಕೊಳ್ಳಲಿಲ್ಲ. ಅವರು ಬಿಗ್ ಬಾಸ್​ನಿಂದ ಹೊರ ಹೋಗಲು ಸಾಕಷ್ಟು ವಿಚಾರಗಳು ಕಾರಣ ಆದವು. ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಮನೆಯಲ್ಲಿ ಸಿರಿ ಅವರು ಸೇಫ್ ಗೇಮ್ ಆಡುತ್ತಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಇತ್ತು. ವೀಕ್ಷಕರಿಗೂ ಕೆಲವು ಬಾರಿ ಹೀಗೆಯೇ ಅನಿಸಿದ್ದಿದೆ. ಇದು ಅವರಿಗೆ ಮುಳುವಾಗಿದೆ. ಸಿರಿ ಅವರು ತಮ್ಮ ಅಭಿಪ್ರಾಯವನ್ನು ಓಪನ್ ಆಗಿ ಹೇಳುತ್ತಿರಲಿಲ್ಲ. ಸುದೀಪ್ ಅವರ ಗಮನಕ್ಕೂ ಈ ವಿಚಾರ ಬಂದಿದೆ. ಕಿಚ್ಚ ಕೂಡ ಈ ಬಗ್ಗೆ ಮಾತನಾಡಿದ್ದರು.

ಬಿಗ್ ಬಾಸ್​ನಲ್ಲಿ ಸಿರಿ ಅವರು ಯಾವುದೇ ಗುಂಪಿನಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಸ್ವತಂತ್ರವಾಗಿ ಇದ್ದರು. ಅವರು ಎಂದಿಗೂ ಜಗಳ ಮಾಡಿದವರಲ್ಲ. ಟಾಸ್ಕ್​ ಬಂದಾಗ ಅಗ್ರೆಸ್ ಆಗಿ ಆಡಿದವರಲ್ಲ. ಇದೆಲ್ಲ ವಿಚಾರಗಳು ಅವರಿಗೆ ಹಿನ್ನಡೆ ತಂದಿರಬಹುದು ಎಂಬುದು ಅನೇಕರ ಊಹೆ.

ಇದನ್ನೂ ಓದಿ: ಕಾರ್ತಿಕ್​-ತುಕಾಲಿ ಸಂತೋಷ್​ ಕಿಸ್​; ಕೂದಲು ಕಿತ್ತ ನಮ್ರತಾ, ಸಿರಿ: ವಿಡಿಯೋ ನೋಡಿ..

ಸಿರಿ ಅವರಿಂದ ಬಿಗ್ ಬಾಸ್​ನಲ್ಲಿ ಇತರ ಸ್ಪರ್ಧಿಗಳಿಗೆ ಸಾಕಷ್ಟು ಸಹಾಯ ಆಗಿದ್ದಿದೆ. ಸ್ಪರ್ಧಿಗಳು ಡಲ್ ಆಗಿದ್ದಾಗ ಅವರು ಚಿಯರ್ ಮಾಡುತ್ತಿದ್ದರು. ಎಲ್ಲರಿಗೂ ಮಾರ್ಗದರ್ಶನ ನೀಡಿದ್ದರು. ಸದ್ಯ ಬಿಗ್ ಬಾಸ್​ನಲ್ಲಿ ಉಳಿದುಕೊಂಡಿದ್ದು 27 ದಿನ ಮಾತ್ರ. ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ