AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ನಲ್ಲಿ ಕಿಚ್ಚನ ಖಡಕ್ ಕ್ಲಾಸ್​ಗೆ ಕಾದಿದ್ದಾರೆ ವೀಕ್ಷಕರು; ತಪ್ಪು ಮಾಡಿದವರಿಗೆ ಶಿಕ್ಷೆ?

ಕಳಪೆಯನ್ನು ಯಾರಿಗೆ ನೀಡಬೇಕು ಎಂಬ ಬಗ್ಗೆ ಓಪನ್ ಆಗಿ ಚರ್ಚೆ ಮಾಡುವಂತಿಲ್ಲ. ಆದಾಗ್ಯೂ ವಿನಯ್ ಅವರು ಗುಂಪು ಕಟ್ಟಿಕೊಂಡು ಕಳಪೆ ಯಾರಿಗೆ ನೀಡಬೇಕು ಎಂಬುದರ ಕುರಿತು ಚರ್ಚೆ ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ವೀಕೆಂಡ್​ನಲ್ಲಿ ಕಿಚ್ಚನ ಖಡಕ್ ಕ್ಲಾಸ್​ಗೆ ಕಾದಿದ್ದಾರೆ ವೀಕ್ಷಕರು; ತಪ್ಪು ಮಾಡಿದವರಿಗೆ ಶಿಕ್ಷೆ?
ಸುದೀಪ್​-ವಿನಯ್
ರಾಜೇಶ್ ದುಗ್ಗುಮನೆ
|

Updated on: Nov 03, 2023 | 2:28 PM

Share

ವಿನಯ್ ಗೌಡ ಅವರು ‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಎಲ್ಲೆ ಮೀರಿ ನಡೆದುಕೊಂಡಿದ್ದಾರೆ. ಬಳೆ ವಿಚಾರದಿಂದ ಹಿಡಿದು ಏಕವಚನದಲ್ಲಿ ಮಾತನಾಡಿಸುವವರೆಗೆ ಸಾಕಷ್ಟು ಬಾರಿ ತಪ್ಪಿದ್ದಾರೆ. ಆನೆ ನಡೆದಿದ್ದೇ ಹಾದಿ ಎಂದು ಮನಬಂದಂತೆ ವರ್ತಿಸಿದ್ದಾರೆ. ಈ ವೀಕೆಂಡ್​ನಲ್ಲಿ ಈ ಎಲ್ಲಾ ವಿಚಾರಗಳು ಚರ್ಚೆಗೆ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸ್ವತಃ ಸುದೀಪ್ ಅಭಿಮಾನಿಗಳೇ ಈ ಬಗ್ಗೆ ಪೋಸ್ಟ್ ಮಾಡುತ್ತಿದ್ದಾರೆ. ಹೀಗಾಗಿ, ವೀಕೆಂಡ್ ಎಪಿಸೋಡ್ ಸಾಕಷ್ಟು ಕುತೂಹಲದಿಂದ ಕೂಡುವ ಸಾಧ್ಯತೆ ಇದೆ.

ಬಳೆಯ ವಿಚಾರ

ಪುರುಷರಿಂದ ಮಾತ್ರ ಎಲ್ಲವೂ ಸಾಧ್ಯ, ಮಹಿಳೆಯರ ಕೈಯಿಂದ ಏನೂ ಆಗದು ಎಂಬರ್ಥದಲ್ಲಿ ವಿನಯ್ ಮಾತನಾಡಿದ್ದಾರೆ. ಈ ಕಾರಣದಿಂದಲೇ ಅವರು ‘ಬಳೆ ಹಾಕಿಕೊಂಡವರು’ ಎನ್ನುವ ಪದ ಬಳಕೆ ಮಾಡಿದ್ದಾರೆ.  ‘ಗಂಡಸಿನ ರೀತಿ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’ ಎಂದಿದ್ದರು ವಿನಯ್. ಇದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಮಹಿಳೆಯರು ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ.

ಒಳ ಒಪ್ಪಂದ

ಕಳಪೆಯನ್ನು ಯಾರಿಗೆ ನೀಡಬೇಕು ಎಂಬ ಬಗ್ಗೆ ಓಪನ್ ಆಗಿ ಚರ್ಚೆ ಮಾಡುವಂತಿಲ್ಲ. ಆದಾಗ್ಯೂ ವಿನಯ್ ಅವರು ಗುಂಪು ಕಟ್ಟಿಕೊಂಡು ಕಳಪೆ ಯಾರಿಗೆ ನೀಡಬೇಕು ಎಂಬುದರ ಕುರಿತು ಚರ್ಚೆ ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಭಾಗ್ಯಶ್ರೀ ಬಗ್ಗೆ ಟೀಕೆ

ಕಳೆದ ವೀಕೆಂಡ್​ನಲ್ಲಿ ಭಾಗ್ಯಶ್ರೀ ಅವರು ಎಲಿಮಿನೇಟ್ ಆದರು. ಆದರೆ, ದಸರಾ ಹಬ್ಬಕ್ಕೆ ವೀಕ್ಷಕರು ಯಾರನ್ನೂ ಎಲಿಮಿನೇಟ್ ಮಾಡಬಾರದು ಎಂದು ಕೋರಿದ್ದರಿಂದ ಅವರು ಉಳಿದುಕೊಂಡರು. ಇದನ್ನು ವಿನಯ್ ಟೀಕಿಸಿದ್ದರು. ‘ದಸರಾ ಆಫರ್​ನಲ್ಲಿ ಭಾಗ್ಯಶ್ರೀ ಉಳಿದುಕೊಂಡರು’ ಎಂದು ಟೀಕಿಸಿದ್ದರು.

ಇದನ್ನೂ ಓದಿ: ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

ಅವಾಚ್ಯ ಶಬ್ದ

ಹಲವು ಕಡೆಗಳಲ್ಲಿ ವಿನಯ್ ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಅನೇಕರನ್ನು ಹೀಯಾಳಿಸಿ ಅವರು ಮಾತನಾಡಿದ್ದರು. ಈ ಬಗ್ಗೆಯೂ ಚರ್ಚೆ ಆಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳಲಿ ಎಂದು ಫ್ಯಾನ್ಸ್ ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!