AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Gowda: ಕಪ್ ಎತ್ತದೆ ಹೊರ ಹೋದ ವಿನಯ್ ಗೌಡ ಬಗ್ಗೆ ಫ್ಯಾನ್ಸ್ ರಿಯಾಕ್ಟ್ ಮಾಡಿದ್ದು ಹೇಗೆ?

ವಿನಯ್ ಗೌಡ ಅವರು ಆರಂಭದಿಂದಲೂ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡರು. ಸುದೀಪ್ ಪಕ್ಕ ನಿಲ್ಲುವ ಸ್ಪರ್ಧಿಗಳ ಪೈಕಿ ತಾವೂ ಒಬ್ಬರು ಎಂದು ವಿನಯ್ ಭಾವಿಸಿದ್ದರು. ಆದರೆ, ಅಲ್ಲಾಗಿದ್ದೇ ಬೇರೆ. ವಿನಯ್ ಗೌಡ ಅವರು ಮೂರನೇ ರನ್ನರ್​ ಅಪ್ ಸ್ಥಾನಕ್ಕೆ ಖುಷಿಪಟ್ಟರು.

Vinay Gowda: ಕಪ್ ಎತ್ತದೆ ಹೊರ ಹೋದ ವಿನಯ್ ಗೌಡ ಬಗ್ಗೆ ಫ್ಯಾನ್ಸ್ ರಿಯಾಕ್ಟ್ ಮಾಡಿದ್ದು ಹೇಗೆ?
ವಿನಯ್
ರಾಜೇಶ್ ದುಗ್ಗುಮನೆ
|

Updated on: Jan 29, 2024 | 11:32 AM

Share

ವಿನಯ್ ಗೌಡ (Vinay Gowda) ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 10’ರ ವಿನ್ನರ್ ಆಗುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಅವರು ಟಾಪ್​ 3ನಲ್ಲೂ ಇರಲಿಲ್ಲ. ಅವರ ಫ್ಯಾನ್ಸ್​ಗೆ ಇದನ್ನು ಒಪ್ಪಿಕೊಳ್ಳೋಕೆ ಕಷ್ಟ ಆಗಿದೆ. ಡ್ರೋನ್​ ಪ್ರತಾಪ್ ಮೊದಲ ರನ್ನರ್ ಅಪ್ ಆಗಿದ್ದಾರೆ. ಕಾರ್ತಿಕ್ ಕಪ್ ಎತ್ತಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಬಗೆಬಗೆಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ಅನೇಕರು ವಿನಯ್ ಅವರನ್ನು ಬೆಂಬಲಿಸಿದ್ದಾರೆ. ಇದರಿಂದ ಅವರಿಗೆ ನಿಜಕ್ಕೂ ಖುಷಿ ಆಗಿದೆ.

ವಿನಯ್ ಗೌಡ ಅವರು ಆರಂಭದಿಂದಲೂ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡರು. ಸುದೀಪ್ ಪಕ್ಕ ನಿಲ್ಲುವ ಸ್ಪರ್ಧಿಗಳ ಪೈಕಿ ತಾವೂ ಒಬ್ಬರು ಎಂದು ವಿನಯ್ ಭಾವಿಸಿದ್ದರು. ಆದರೆ, ಅಲ್ಲಾಗಿದ್ದೇ ಬೇರೆ. ವಿನಯ್ ಗೌಡ ಅವರು ಮೂರನೇ ರನ್ನರ್​ ಅಪ್ ಸ್ಥಾನಕ್ಕೆ ಖುಷಿಪಟ್ಟರು. ವಿನಯ್ ಅವರು ಕೋಪ ಮಾಡಿಕೊಳ್ಳದೆ ಇದನ್ನು ಸ್ವೀಕರಿಸಿದ್ದಾರೆ. ಅವರ ಅಭಿಮಾನಿಗಳು ಕೂಡ ಇದನ್ನು ಒಪ್ಪಿದ್ದಾರೆ.

ವಿನಯ್ ಮೂರನೇ ರನ್ನರ್ ಅಪ್ ಎಂಬುದನ್ನು ಕಲರ್ಸ್ ಕನ್ನಡ ವಾಹಿನಿ ಪೋಸ್ಟ್ ಮಾಡಿದೆ. ಇದೇ ಪೋಸ್ಟರ್​ನ ವಿನಯ್ ಗೌಡ ಅವರು ಕೂಡ ತಮ್ಮ ವಾಲ್​ನಲ್ಲಿ ಹಂಚಿಕೊಂಡಿದ್ದಾರೆ. ‘ನೀವು ನಿಜವಾದ ವಿನ್ನರ್’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಕಿಂಗ್ ಯಾವಾಗಲೂ ಕಿಂಗ್’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ನೀವೇ ಚಾಂಪಿಯನ್. ನಿಮ್ಮದು ಅದ್ಭುತ’ ಆಟ ಎಂದು ಕೆಲವರು ಹೇಳಿದ್ದಾರೆ.

ವಿನಯ್ ಗೌಡ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 1.74 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ. ಅವರ ಹೊಸ ಪೋಸ್ಟ್​ಗೆ 26 ಸಾವಿರ ಲೈಕ್ಸ್ ಹಾಗೂ ಸಾವಿರಕ್ಕೂ ಅಧಿಕ ಕಮೆಂಟ್ಸ್ ಬಂದಿವೆ. ವಿನಯ್ ಗೌಡ ಅವರಿಗೆ ದಿನ ಕಳೆದಂತೆ ಜನಪ್ರಿಯತೆ ಹೆಚ್ಚಿದೆ. ಅವರಿಗೆ ಸಿನಿಮಾಗಳಿಂದ ಆಫರ್ ಬರೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ವಿನಯ್ ಎಲಿಮಿನೇಷನ್ ಫೇರ್​ ಅಲ್ಲ ಎಂದವರಿಗೆ ಕಿಚ್ಚ ಕೊಟ್ಟ ಉತ್ತರ ಏನು?

ವಿನಯ್ ಅವರು ಆಡಿದ ರೀತಿಯನ್ನು ಕಿಚ್ಚ ಸುದೀಪ್ ಅವರು ಕೂಡ ಮೆಚ್ಚಿಕೊಂಡಿದ್ದಾರೆ. ‘ನಿಮ್ಮ ಮೆಚ್ಚಿಕೊಂಡವರಲ್ಲಿ ನಾನು ಒಬ್ಬನು’ ಎಂದು ವಿನಯ್ ಬಗ್ಗೆ ಖುಷಿಯಿಂದ ಹೇಳಿಕೊಂಡರು ಕಿಚ್ಚ ಸುದೀಪ್. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಪೂರ್ಣಗೊಂಡಿದೆ. ಈ ವರ್ಷಾಂತ್ಯಕ್ಕೆ ಮತ್ತೊಂದು ಸೀಸನ್ ಜೊತೆ ಬರೋಕೆ ಕಲರ್ಸ್ ಕನ್ನಡ ವಾಹಿನಿ ರೆಡಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು