AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆಗೆ ಕ್ಷಣಗಣನೆ: ಇಂದು ಎಷ್ಟು ಜನರ ಎಲಿಮಿನೇಷನ್?

Bigg Boss Kannada Finale: ಬಿಗ್ ಬಾಸ್ ಫಿನಾಲೆ ಸಾಮಾನ್ಯವಾಗಿ ಸಂಜೆ ಆರು ಗಂಟೆಗೆ ಆರಂಭ ಆಗುತ್ತಿತ್ತು. ಆದರೆ, ಈ ಬಾರಿ ವಾಹಿನಿಯವರು ನಿರ್ಧಾರ ಬದಲಿಸಿದ್ದಾರೆ ಎನ್ನಲಾಗಿದೆ. ರಾತ್ರಿ 7:30ಕ್ಕೆ ಫಿನಾಲೆ ಆರಂಭ ಆಗಲಿದೆ.

ಬಿಗ್ ಬಾಸ್ ಫಿನಾಲೆಗೆ ಕ್ಷಣಗಣನೆ: ಇಂದು ಎಷ್ಟು ಜನರ ಎಲಿಮಿನೇಷನ್?
ರಾಜೇಶ್ ದುಗ್ಗುಮನೆ
|

Updated on:Jan 27, 2024 | 7:10 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಫಿನಾಲೆಗೆ ಕ್ಷಣಗಣನೆ ಆರಂಭ ಆಗಿದೆ. ಇಂದು (ಜನವರಿ 27) ಹಾಗೂ ನಾಳೆ (ಜನವರಿ 28) ರಾತ್ರಿ ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಇದಕ್ಕೆ ಬೆಳಿಗ್ಗಿನಿಂದಲೇ ಶೂಟ್ ನಡೆಯಲಿದೆ. ಕೊನೆಯ ಭಾಗದ ಶೂಟ್​​ಗಳನ್ನು ಭಾನುವಾರ ನಡೆಸುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಬಾರಿಯ ಸೀಸನ್ ಸಾಕಷ್ಟು ಟಿಆರ್​ಪಿ ತಂದುಕೊಂಟ್ಟಿದೆ. ಹೀಗಾಗಿ, ಗ್ರ್ಯಾಂಡ್ ಆಗಿ ಕಾರ್ಯಕ್ರಮ ನಡೆಸಿಕೊಡಲು ವಾಹಿನಿಯವರು ಮುಂದಾಗಿದ್ದಾರೆ.

ಎಷ್ಟು ಗಂಟೆಗೆ ಆರಂಭ?

ಸಾಮಾನ್ಯವಾಗಿ ಬಿಗ್ ಬಾಸ್ ಫಿನಾಲೆ ಸಂಜೆ ಆರು ಗಂಟೆಗೆ ಆರಂಭ ಆಗುತ್ತಿತ್ತು. ಆದರೆ, ಈ ಬಾರಿ ವಾಹಿನಿಯವರು ನಿರ್ಧಾರ ಬದಲಿಸಿದ್ದಾರೆ. ರಾತ್ರಿ 7:30ಕ್ಕೆ ಫಿನಾಲೆ ಆರಂಭ ಆಗಲಿದೆ. ವಾಹಿನಿಯವರ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಆರು ಮಂದಿ

ಪ್ರತಿ ಬಾರಿ ಐದು ಮಂದಿ ಮಾತ್ರ ಫಿನಾಲೆಯಲ್ಲಿ ಇರುತ್ತಿದ್ದರು. ಆದರೆ, ಈ ಬಾರಿ ಹಾಗಾಗಿಲ್ಲ. ಆರು ಮಂದಿ ಫಿನಾಲೆಯಲ್ಲಿ ಇದ್ದಾರೆ. ಈ ರೀತಿ ಆಗುತ್ತಿರುವುದು ಇದೇ ಮೊದಲು. ಕೆಲವು ವರದಿಗಳ ಪ್ರಕಾರ ಇಂದು ನಾಲ್ಕು ಮಂದಿಯನ್ನು ಹೊರಕ್ಕೆ ಕಳುಹಿಸಿ, ಕೊನೆಯಲ್ಲಿ ಇಬ್ಬರನ್ನು ಫಿನಾಲೆಗೆ ಕಳುಹಿಸುವ ಆಲೋಚನೆ ವಾಹಿನಿಗೆ ಇದೆ ಎನ್ನಲಾಗುತ್ತಿದೆ. ಮೂವರನ್ನು ಇಂದು ಹೊರಕ್ಕೆ ಕಳುಹಿಸಿ, ಉಳಿದ ಮೂವರನ್ನು ಹಾಗೆಯೇ ಉಳಿಸಿಕೊಳ್ಳುವ ಸಾಧ್ಯತೆಯೂ ಇದೆ.

ಏನೆಲ್ಲ ಇರಲಿದೆ?

ಈ ಸೀಸನ್​ನ ಕಿಚ್ಚ ಸುದೀಪ್ ಅವರು ಎಂದಿನ ಗತ್ತಿನಲ್ಲಿ ನಡೆಸಿಕೊಟ್ಟಿದ್ದಾರೆ. ಈ ಕಾರಣಕ್ಕೆ ಅವರಿಗೆ ಗ್ರ್ಯಾಂಡ್ ಎಂಟ್ರಿ ಇರಲಿದೆ. ಎಲಿಮಿನೇಟ್ ಆದ ಸ್ಪರ್ಧಿಗಳ ಜೊತೆ ಸುದೀಪ್ ಅವರು ಒಂದಷ್ಟು ಹೊತ್ತು ಮಾತುಕತೆ ನಡೆಸಲಿದ್ದಾರೆ. ಅದ್ದೂರಿ ವೇದಿಕೆಯ ಮೇಲೆ ಮಾಜಿ ಸ್ಪರ್ಧಿಗಳು ಡ್ಯಾನ್ಸ್ ಮಾಡಲಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ಬಂತು ಪ್ರತಾಪ್​ನ ಡ್ರೋನ್​; ಅಂದು ಚುಚ್ಚುಮಾತು, ಇಂದು ಮೆಚ್ಚುಗೆ ಮಾತು

ಕಪ್ ಎತ್ತೋದು..

ಜನವರಿ 28ರಂದು ಕಪ್ ಎತ್ತೋದು ಯಾರು ಎನ್ನುವ ವಿಚಾರ ಗೊತ್ತಾಗಲಿದೆ. ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್, ವಿನಯ್ ಗೌಡ, ಕಾರ್ತಿಕ್ ಮಹೇಶ್, ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಮಧ್ಯೆ ಸದ್ಯ ಫೈಟ್ ನಡೆಯುತ್ತಿದೆ. ಇಂದು ಮಧ್ಯಾಹ್ನ 2 ಗಂಟೆಗೆ ವೋಟಿಂಗ್ ಲೈನ್ ಬಂದ್ ಆಗಲಿದೆ. ಈ ಬಾರಿ ಕಪ್ ಗೆದ್ದು 50 ಲಕ್ಷ ರೂಪಾಯಿ ತೆಗೆದುಕೊಂಡು ಹೋಗುವವರು ಯಾರು ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Sat, 27 January 24

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!