AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ

ಪ್ರತಾಪ್ ಹಾಗೂ ಕಾರ್ತಿಕ್ ಸತತ 112 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಳೆದು ಬಂದಿದ್ದಾರೆ. ಕಾರ್ತಿಕ್ ಅವರ ಆಟ ಅನೇಕರಿಗೆ ಇಷ್ಟ ಆಗಿದೆ. ಅವರು ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ
ಪ್ರತಾಪ್-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Jan 29, 2024 | 9:29 AM

Share

ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಬಿಗ್ ಬಾಸ್​ ನೀಡೋ ಆಕರ್ಷಕ ಟ್ರೋಫಿ ಜೊತೆಯಲ್ಲಿ 50 ಲಕ್ಷ ರೂಪಾಯಿ, ಮಾರುತಿ ಸುಜುಕಿ ಬ್ರೇಜಾ ಕಾರು ಹಾಗೂ ಇಲೆಕ್ಟ್ರಿಕ್ ಬೌನ್ಸ್ ಸ್ಕೂಟರ್ ಕಾರ್ತಿಕ್​ಗೆ ಸಿಕ್ಕಿದೆ. ರನ್ನರ್​ಅಪ್ ಆದ ಪ್ರತಾಪ್ ಅವರಿಗೆ ಬಿಗ್ ಬಾಸ್ ಕಡೆಯಿಂದ 10 ಲಕ್ಷ ರೂಪಾಯಿ ಹಾಗೂ ಒಂದು ಬೌನ್ಸ್ ಬೈಕ್ ಸಿಕ್ಕಿದೆ. ಇಬ್ಬರಿಗೂ ಬಿದ್ದ ವೋಟ್​ಗಳ ಸಂಖ್ಯೆ ಕೋಟಿಗಳಲ್ಲಿದೆ.

ಕಾರ್ತಿಕ್ ಮಹೇಶ್ ಅವರು ಈ ಹಣವನ್ನು ಮನೆ ಕಟ್ಟಲು ಬಳಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಾಯಿಗಾಗಿ ಪುಟ್ಟ ಮನೆ ಕಟ್ಟುವ ಕನಸು ಕಂಡಿದ್ದಾರೆ. ಪ್ರತಾಪ್ ಅವರು ಈ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲಿನಿಂದಲೂ ಉತ್ತಮ ಆಟ ಪ್ರದರ್ಶಿಸುತ್ತಿದ್ದ ಕಾರ್ತಿಕ್ ಅವರು ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ ಅನ್ನೋದು ವಿಶೇಷ.

ಈ ಬಾರಿ ಬಿಗ್ ಬಾಸ್ ನೋಡುವವರ ಸಂಖ್ಯೆ ದೊಡ್ಡದಿತ್ತು. ಹೀಗಾಗಿ, ಅಭಿಮಾನಿ ಬಳಗ ಕೂಡ ಹಿರಿದಾಗಿತ್ತು. ಅದೇ ರೀತಿ ಬಿದ್ದ ವೋಟ್​ಗಳ ಸಂಖ್ಯೆಯೂ ಕೋಟಿಗಳಲ್ಲಿವೆ. ಕಿಚ್ಚ ಸುದೀಪ್ ಅವರು ಆರಂಭದಲ್ಲೇ ಈ ವಿಚಾರ ಹೇಳಿದ್ದರು. ವಿನರ್ ಯಾರು ಎಂದು ಘೋಷಿಸುವುದಕ್ಕೂ ಮೊದಲು ವೋಟ್​ಗಳನ್ನು ರಿವೀಲ್ ಮಾಡಿದರು.

‘ಟಾಪ್ ಆರರಲ್ಲಿ ಇರುವವರ ವೋಟ್ ಸೇರಿದರೆ 10 ಕೋಟಿಗೂ ಮೇಲಿರಲಿದೆ. ರನ್ನರ್​ ಅಪ್​ಗೆ ಸಿಕ್ಕ ವೋಟ್ 2,20,04,202, ವಿನ್ನರ್​ಗೆ ಸಿಕ್ಕ ವೋಟ್ 2, 97,39,904’ ಎಂದರು ಸುದೀಪ್. ‘ಅವರು ಇಷ್ಟ, ಇವರು ಇಷ್ಟ ಎಂದು ನಾವು ವಿನ್ ಮಾಡ್ಸಲ್ಲ. ಯಾರಿಗೆ ಹೆಚ್ಚು ವೋಟ್ ಬಿದ್ದಿದೆಯೋ ಅವರನ್ನೇ ಗೆಲ್ಲಿಸುತ್ತೇವೆ. ಅದನ್ನು ಯಾರೂ ಡಿಬೇಟ್ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಸುದೀಪ್. ಕೊನೆಯಲ್ಲಿ ಕಾರ್ತಿಕ್​ ಕೈನ ಎತ್ತಿದ್ದಾರೆ ಅವರು.

ಇದನ್ನೂ ಓದಿ:ಬಿಗ್​ಬಾಸ್ ಕನ್ನಡ ಸೀಸನ್ 10 ಗೆದ್ದ ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್​ ರನ್ನರ್ ಅಪ್ 

ಕಾರ್ತಿಕ್ ಹಾಗೂ ಪ್ರತಾಪ್​ ಸತತ 112 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಳೆದು ಬಂದಿದ್ದಾರೆ. ಕಾರ್ತಿಕ್ ಆಟ ಅನೇಕರಿಗೆ ಇಷ್ಟ ಆಗಿದೆ. ಅವರು ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:25 am, Mon, 29 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ