AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ

ಪ್ರತಾಪ್ ಹಾಗೂ ಕಾರ್ತಿಕ್ ಸತತ 112 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಳೆದು ಬಂದಿದ್ದಾರೆ. ಕಾರ್ತಿಕ್ ಅವರ ಆಟ ಅನೇಕರಿಗೆ ಇಷ್ಟ ಆಗಿದೆ. ಅವರು ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ
ಪ್ರತಾಪ್-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Jan 29, 2024 | 9:29 AM

Share

ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಬಿಗ್ ಬಾಸ್​ ನೀಡೋ ಆಕರ್ಷಕ ಟ್ರೋಫಿ ಜೊತೆಯಲ್ಲಿ 50 ಲಕ್ಷ ರೂಪಾಯಿ, ಮಾರುತಿ ಸುಜುಕಿ ಬ್ರೇಜಾ ಕಾರು ಹಾಗೂ ಇಲೆಕ್ಟ್ರಿಕ್ ಬೌನ್ಸ್ ಸ್ಕೂಟರ್ ಕಾರ್ತಿಕ್​ಗೆ ಸಿಕ್ಕಿದೆ. ರನ್ನರ್​ಅಪ್ ಆದ ಪ್ರತಾಪ್ ಅವರಿಗೆ ಬಿಗ್ ಬಾಸ್ ಕಡೆಯಿಂದ 10 ಲಕ್ಷ ರೂಪಾಯಿ ಹಾಗೂ ಒಂದು ಬೌನ್ಸ್ ಬೈಕ್ ಸಿಕ್ಕಿದೆ. ಇಬ್ಬರಿಗೂ ಬಿದ್ದ ವೋಟ್​ಗಳ ಸಂಖ್ಯೆ ಕೋಟಿಗಳಲ್ಲಿದೆ.

ಕಾರ್ತಿಕ್ ಮಹೇಶ್ ಅವರು ಈ ಹಣವನ್ನು ಮನೆ ಕಟ್ಟಲು ಬಳಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಾಯಿಗಾಗಿ ಪುಟ್ಟ ಮನೆ ಕಟ್ಟುವ ಕನಸು ಕಂಡಿದ್ದಾರೆ. ಪ್ರತಾಪ್ ಅವರು ಈ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲಿನಿಂದಲೂ ಉತ್ತಮ ಆಟ ಪ್ರದರ್ಶಿಸುತ್ತಿದ್ದ ಕಾರ್ತಿಕ್ ಅವರು ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ ಅನ್ನೋದು ವಿಶೇಷ.

ಈ ಬಾರಿ ಬಿಗ್ ಬಾಸ್ ನೋಡುವವರ ಸಂಖ್ಯೆ ದೊಡ್ಡದಿತ್ತು. ಹೀಗಾಗಿ, ಅಭಿಮಾನಿ ಬಳಗ ಕೂಡ ಹಿರಿದಾಗಿತ್ತು. ಅದೇ ರೀತಿ ಬಿದ್ದ ವೋಟ್​ಗಳ ಸಂಖ್ಯೆಯೂ ಕೋಟಿಗಳಲ್ಲಿವೆ. ಕಿಚ್ಚ ಸುದೀಪ್ ಅವರು ಆರಂಭದಲ್ಲೇ ಈ ವಿಚಾರ ಹೇಳಿದ್ದರು. ವಿನರ್ ಯಾರು ಎಂದು ಘೋಷಿಸುವುದಕ್ಕೂ ಮೊದಲು ವೋಟ್​ಗಳನ್ನು ರಿವೀಲ್ ಮಾಡಿದರು.

‘ಟಾಪ್ ಆರರಲ್ಲಿ ಇರುವವರ ವೋಟ್ ಸೇರಿದರೆ 10 ಕೋಟಿಗೂ ಮೇಲಿರಲಿದೆ. ರನ್ನರ್​ ಅಪ್​ಗೆ ಸಿಕ್ಕ ವೋಟ್ 2,20,04,202, ವಿನ್ನರ್​ಗೆ ಸಿಕ್ಕ ವೋಟ್ 2, 97,39,904’ ಎಂದರು ಸುದೀಪ್. ‘ಅವರು ಇಷ್ಟ, ಇವರು ಇಷ್ಟ ಎಂದು ನಾವು ವಿನ್ ಮಾಡ್ಸಲ್ಲ. ಯಾರಿಗೆ ಹೆಚ್ಚು ವೋಟ್ ಬಿದ್ದಿದೆಯೋ ಅವರನ್ನೇ ಗೆಲ್ಲಿಸುತ್ತೇವೆ. ಅದನ್ನು ಯಾರೂ ಡಿಬೇಟ್ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಸುದೀಪ್. ಕೊನೆಯಲ್ಲಿ ಕಾರ್ತಿಕ್​ ಕೈನ ಎತ್ತಿದ್ದಾರೆ ಅವರು.

ಇದನ್ನೂ ಓದಿ:ಬಿಗ್​ಬಾಸ್ ಕನ್ನಡ ಸೀಸನ್ 10 ಗೆದ್ದ ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್​ ರನ್ನರ್ ಅಪ್ 

ಕಾರ್ತಿಕ್ ಹಾಗೂ ಪ್ರತಾಪ್​ ಸತತ 112 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಳೆದು ಬಂದಿದ್ದಾರೆ. ಕಾರ್ತಿಕ್ ಆಟ ಅನೇಕರಿಗೆ ಇಷ್ಟ ಆಗಿದೆ. ಅವರು ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:25 am, Mon, 29 January 24

Follow Us
ಬೆಂಗಳೂರಿನಲ್ಲಿ ವಕೀಲರ ಸಂಘದಿಂದ ಭಾರೀ ಪ್ರತಿಭಟನೆ
ಬೆಂಗಳೂರಿನಲ್ಲಿ ವಕೀಲರ ಸಂಘದಿಂದ ಭಾರೀ ಪ್ರತಿಭಟನೆ
‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ