AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ

ಪ್ರತಾಪ್ ಹಾಗೂ ಕಾರ್ತಿಕ್ ಸತತ 112 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಳೆದು ಬಂದಿದ್ದಾರೆ. ಕಾರ್ತಿಕ್ ಅವರ ಆಟ ಅನೇಕರಿಗೆ ಇಷ್ಟ ಆಗಿದೆ. ಅವರು ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್​ಗೆ ಬಿದ್ದ ವೋಟ್​ಗಳೆಷ್ಟು? ಎಲ್ಲವೂ ಕೋಟಿಯಲ್ಲಿದೆ
ಪ್ರತಾಪ್-ಕಾರ್ತಿಕ್
Follow us
ರಾಜೇಶ್ ದುಗ್ಗುಮನೆ
|

Updated on:Jan 29, 2024 | 9:29 AM

ಕಾರ್ತಿಕ್ ಮಹೇಶ್ (Karthik Mahesh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಬಿಗ್ ಬಾಸ್​ ನೀಡೋ ಆಕರ್ಷಕ ಟ್ರೋಫಿ ಜೊತೆಯಲ್ಲಿ 50 ಲಕ್ಷ ರೂಪಾಯಿ, ಮಾರುತಿ ಸುಜುಕಿ ಬ್ರೇಜಾ ಕಾರು ಹಾಗೂ ಇಲೆಕ್ಟ್ರಿಕ್ ಬೌನ್ಸ್ ಸ್ಕೂಟರ್ ಕಾರ್ತಿಕ್​ಗೆ ಸಿಕ್ಕಿದೆ. ರನ್ನರ್​ಅಪ್ ಆದ ಪ್ರತಾಪ್ ಅವರಿಗೆ ಬಿಗ್ ಬಾಸ್ ಕಡೆಯಿಂದ 10 ಲಕ್ಷ ರೂಪಾಯಿ ಹಾಗೂ ಒಂದು ಬೌನ್ಸ್ ಬೈಕ್ ಸಿಕ್ಕಿದೆ. ಇಬ್ಬರಿಗೂ ಬಿದ್ದ ವೋಟ್​ಗಳ ಸಂಖ್ಯೆ ಕೋಟಿಗಳಲ್ಲಿದೆ.

ಕಾರ್ತಿಕ್ ಮಹೇಶ್ ಅವರು ಈ ಹಣವನ್ನು ಮನೆ ಕಟ್ಟಲು ಬಳಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಾಯಿಗಾಗಿ ಪುಟ್ಟ ಮನೆ ಕಟ್ಟುವ ಕನಸು ಕಂಡಿದ್ದಾರೆ. ಪ್ರತಾಪ್ ಅವರು ಈ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲಿನಿಂದಲೂ ಉತ್ತಮ ಆಟ ಪ್ರದರ್ಶಿಸುತ್ತಿದ್ದ ಕಾರ್ತಿಕ್ ಅವರು ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ ಅನ್ನೋದು ವಿಶೇಷ.

ಈ ಬಾರಿ ಬಿಗ್ ಬಾಸ್ ನೋಡುವವರ ಸಂಖ್ಯೆ ದೊಡ್ಡದಿತ್ತು. ಹೀಗಾಗಿ, ಅಭಿಮಾನಿ ಬಳಗ ಕೂಡ ಹಿರಿದಾಗಿತ್ತು. ಅದೇ ರೀತಿ ಬಿದ್ದ ವೋಟ್​ಗಳ ಸಂಖ್ಯೆಯೂ ಕೋಟಿಗಳಲ್ಲಿವೆ. ಕಿಚ್ಚ ಸುದೀಪ್ ಅವರು ಆರಂಭದಲ್ಲೇ ಈ ವಿಚಾರ ಹೇಳಿದ್ದರು. ವಿನರ್ ಯಾರು ಎಂದು ಘೋಷಿಸುವುದಕ್ಕೂ ಮೊದಲು ವೋಟ್​ಗಳನ್ನು ರಿವೀಲ್ ಮಾಡಿದರು.

‘ಟಾಪ್ ಆರರಲ್ಲಿ ಇರುವವರ ವೋಟ್ ಸೇರಿದರೆ 10 ಕೋಟಿಗೂ ಮೇಲಿರಲಿದೆ. ರನ್ನರ್​ ಅಪ್​ಗೆ ಸಿಕ್ಕ ವೋಟ್ 2,20,04,202, ವಿನ್ನರ್​ಗೆ ಸಿಕ್ಕ ವೋಟ್ 2, 97,39,904’ ಎಂದರು ಸುದೀಪ್. ‘ಅವರು ಇಷ್ಟ, ಇವರು ಇಷ್ಟ ಎಂದು ನಾವು ವಿನ್ ಮಾಡ್ಸಲ್ಲ. ಯಾರಿಗೆ ಹೆಚ್ಚು ವೋಟ್ ಬಿದ್ದಿದೆಯೋ ಅವರನ್ನೇ ಗೆಲ್ಲಿಸುತ್ತೇವೆ. ಅದನ್ನು ಯಾರೂ ಡಿಬೇಟ್ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ ಸುದೀಪ್. ಕೊನೆಯಲ್ಲಿ ಕಾರ್ತಿಕ್​ ಕೈನ ಎತ್ತಿದ್ದಾರೆ ಅವರು.

ಇದನ್ನೂ ಓದಿ:ಬಿಗ್​ಬಾಸ್ ಕನ್ನಡ ಸೀಸನ್ 10 ಗೆದ್ದ ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್​ ರನ್ನರ್ ಅಪ್ 

ಕಾರ್ತಿಕ್ ಹಾಗೂ ಪ್ರತಾಪ್​ ಸತತ 112 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಳೆದು ಬಂದಿದ್ದಾರೆ. ಕಾರ್ತಿಕ್ ಆಟ ಅನೇಕರಿಗೆ ಇಷ್ಟ ಆಗಿದೆ. ಅವರು ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:25 am, Mon, 29 January 24

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ