AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿಗೆ ಒಬ್ಬರು ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು?

ಬಿಗ್ ಬಾಸ್​ ಮನೆ ಸೇರಿದ ನಂತರದಲ್ಲಿ ಸ್ಪರ್ಧಿಗಳ ಕೈಯಲ್ಲಿ ಏನೂ ಇರುವುದಿಲ್ಲ. ಅವರು ಯಾವಾಗ ಹೊರ ಬರಬೇಕು? ಯಾರನ್ನು ಗೆಲ್ಲಿಸಬೇಕು ಎಂಬುದು ಇರೋದು ವೀಕ್ಷಕರ ಕೈಯಲ್ಲಿ.

ಬಿಗ್​ ಬಾಸ್​ ಸ್ಪರ್ಧಿಗೆ ಒಬ್ಬರು ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು?
ಕಿಚ್ಚ ಸುದೀಪ್
TV9 Web
| Edited By: |

Updated on: Aug 05, 2021 | 3:22 PM

Share

ಬಿಗ್​ ಬಾಸ್​ ಮನೆ ಸೇರಿದ ನಂತರದಲ್ಲಿ ಜನರ ಗಮನ ಸೆಳೆಯಲು ಸ್ಪರ್ಧಿಗಳು ನಾನಾ ಕಸರತ್ತು ಮಾಡುತ್ತಾರೆ. ಮನೆಯಲ್ಲಿ ಎಷ್ಟೇ ಪ್ರಯತ್ನ ನಡೆಸಿದರೂ ಅಂತಿಮವಾಗಿ ವೀಕ್ಷಕರು ಯಾರಿಗೆ ವೋಟ್​ ಮಾಡುತ್ತಾರೋ ಅವರು ಗೆದ್ದಂತೆ. ಹಾಗಾದರೆ ಓರ್ವ ವ್ಯಕ್ತಿ ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು ಎನ್ನುವ ಪ್ರಶ್ನೆಯೇ? ಅದಕ್ಕೆ ಇಲ್ಲಿದೆ ಉತ್ತರ.

ಬಿಗ್ ಬಾಸ್​ ಮನೆ ಸೇರಿದ ನಂತರದಲ್ಲಿ ಸ್ಪರ್ಧಿಗಳ ಕೈಯಲ್ಲಿ ಏನೂ ಇರುವುದಿಲ್ಲ. ಅವರು ಯಾವಾಗ ಹೊರ ಬರಬೇಕು? ಯಾರನ್ನು ಗೆಲ್ಲಿಸಬೇಕು ಎಂಬುದು ಇರೋದು ವೀಕ್ಷಕರ ಕೈಯಲ್ಲಿ. ಬಿಗ್​ ಬಾಸ್​ನಲ್ಲಿ ಪ್ರತಿ ವಾರ ಎಲಿಮಿನೇಷನ್​ ಮಾಡಲಾಗುತ್ತದೆ. ಎಲಿಮಿನೇಷನ್​ ಮಾಡೋಕೆ ನಾಮಿನೇಷನ್​ ಮಾಡಲಾಗುತ್ತದೆ. ಯಾರ್ಯಾರು ನಾಮಿನೇಟ್​ ಆಗಿರುತ್ತಾರೋ ಅವರಿಗೆ ವೀಕ್ಷಕರು ವೋಟ್​ ಮಾಡಬೇಕು. ಹೆಚ್ಚು ವೋಟ್​ ಪಡೆದ ಸ್ಪರ್ಧಿಗಳು ಸೇವ್​ ಆಗುತ್ತಾರೆ. ಕಡಿಮೆ ಮತ ಪಡೆದವರು ಔಟ್​ ಆಗುತ್ತಾರೆ.

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸದ್ಯ ಐದು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇದೇ ಶನಿವಾರ ಹಾಗೂ ಭಾನುವಾರ ಫಿನಾಲೆ ನಡೆಯಲಿದೆ. ಯಾರಿಗೆ ಅತಿ ಹೆಚ್ಚು ಮತ ಬೀಳುತ್ತದೆಯೋ ಅವರು ಗೆದ್ದಂತೆ. ಸ್ಪರ್ಧಿಗಳಿಗೆ ವೋಟ್​ ಮಾಡೋಕೆ ವೂಟ್​ ಆ್ಯಪ್​ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅಲ್ಲಿಗೆ ತೆರಳಿ ತಮ್ಮಿಷ್ಟದ ವ್ಯಕ್ತಿಗೆ ವೀಕ್ಷಕರು ವೋಟ್ ಮಾಡಬಹುದು.

ಹಾಗಾದರೆ, ವ್ಯಕ್ತಿ ಒಬ್ಬರು ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಒಂದು ಖಾತೆಯಿಂದ ಓರ್ವ ವ್ಯಕ್ತಿ ಒಂದು ದಿನಕ್ಕೆ 99 ವೋಟ್​ ಚಲಾಯಿಸಬಹುದು. ಹಾಗಂತ ಒಂದೇ ವ್ಯಕ್ತಿಗೆ 99 ಮತಗಳನ್ನು ಹಾಕಬೇಕು ಎನ್ನುವ ನಿಯಮವಿಲ್ಲ. ನಿಮ್ಮಿಷ್ಟದ ಯಾವುದೇ ಸ್ಪರ್ಧಿಗೆ ನೀವು ಮತ ಹಾಕಬಹುದು. ಆದರೆ, 99ಕ್ಕಿಂತ ಹೆಚ್ಚಿನ ಮತ ಹಾಕಲು ಸಾಧ್ಯವಿಲ್ಲ.

ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದ್ದಾರೆ. ಇವರಲ್ಲಿ ಅತಿ ಹೆಚ್ಚು ವೋಟ್​ ಪಡೆದವರು ಗೆಲ್ಲುತ್ತಾರೆ.

ಇದನ್ನೂ ಓದಿ: Divya Suresh: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ ತೋರಿಸದೇ ಮನೆಯಿಂದ ಹೊರ ನಡೆದ ದಿವ್ಯಾ ಸುರೇಶ್​

ತೀವ್ರ ಸಂಕಷ್ಟದ ನಡುವೆಯೂ ಬಿಗ್​ ಬಾಸ್​ ಓಟಿಟಿಗೆ ಬರ್ತಾರಾ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ?

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ