AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿಗೆ ಒಬ್ಬರು ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು?

ಬಿಗ್ ಬಾಸ್​ ಮನೆ ಸೇರಿದ ನಂತರದಲ್ಲಿ ಸ್ಪರ್ಧಿಗಳ ಕೈಯಲ್ಲಿ ಏನೂ ಇರುವುದಿಲ್ಲ. ಅವರು ಯಾವಾಗ ಹೊರ ಬರಬೇಕು? ಯಾರನ್ನು ಗೆಲ್ಲಿಸಬೇಕು ಎಂಬುದು ಇರೋದು ವೀಕ್ಷಕರ ಕೈಯಲ್ಲಿ.

ಬಿಗ್​ ಬಾಸ್​ ಸ್ಪರ್ಧಿಗೆ ಒಬ್ಬರು ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು?
ಕಿಚ್ಚ ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 05, 2021 | 3:22 PM

Share

ಬಿಗ್​ ಬಾಸ್​ ಮನೆ ಸೇರಿದ ನಂತರದಲ್ಲಿ ಜನರ ಗಮನ ಸೆಳೆಯಲು ಸ್ಪರ್ಧಿಗಳು ನಾನಾ ಕಸರತ್ತು ಮಾಡುತ್ತಾರೆ. ಮನೆಯಲ್ಲಿ ಎಷ್ಟೇ ಪ್ರಯತ್ನ ನಡೆಸಿದರೂ ಅಂತಿಮವಾಗಿ ವೀಕ್ಷಕರು ಯಾರಿಗೆ ವೋಟ್​ ಮಾಡುತ್ತಾರೋ ಅವರು ಗೆದ್ದಂತೆ. ಹಾಗಾದರೆ ಓರ್ವ ವ್ಯಕ್ತಿ ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು ಎನ್ನುವ ಪ್ರಶ್ನೆಯೇ? ಅದಕ್ಕೆ ಇಲ್ಲಿದೆ ಉತ್ತರ.

ಬಿಗ್ ಬಾಸ್​ ಮನೆ ಸೇರಿದ ನಂತರದಲ್ಲಿ ಸ್ಪರ್ಧಿಗಳ ಕೈಯಲ್ಲಿ ಏನೂ ಇರುವುದಿಲ್ಲ. ಅವರು ಯಾವಾಗ ಹೊರ ಬರಬೇಕು? ಯಾರನ್ನು ಗೆಲ್ಲಿಸಬೇಕು ಎಂಬುದು ಇರೋದು ವೀಕ್ಷಕರ ಕೈಯಲ್ಲಿ. ಬಿಗ್​ ಬಾಸ್​ನಲ್ಲಿ ಪ್ರತಿ ವಾರ ಎಲಿಮಿನೇಷನ್​ ಮಾಡಲಾಗುತ್ತದೆ. ಎಲಿಮಿನೇಷನ್​ ಮಾಡೋಕೆ ನಾಮಿನೇಷನ್​ ಮಾಡಲಾಗುತ್ತದೆ. ಯಾರ್ಯಾರು ನಾಮಿನೇಟ್​ ಆಗಿರುತ್ತಾರೋ ಅವರಿಗೆ ವೀಕ್ಷಕರು ವೋಟ್​ ಮಾಡಬೇಕು. ಹೆಚ್ಚು ವೋಟ್​ ಪಡೆದ ಸ್ಪರ್ಧಿಗಳು ಸೇವ್​ ಆಗುತ್ತಾರೆ. ಕಡಿಮೆ ಮತ ಪಡೆದವರು ಔಟ್​ ಆಗುತ್ತಾರೆ.

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸದ್ಯ ಐದು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇದೇ ಶನಿವಾರ ಹಾಗೂ ಭಾನುವಾರ ಫಿನಾಲೆ ನಡೆಯಲಿದೆ. ಯಾರಿಗೆ ಅತಿ ಹೆಚ್ಚು ಮತ ಬೀಳುತ್ತದೆಯೋ ಅವರು ಗೆದ್ದಂತೆ. ಸ್ಪರ್ಧಿಗಳಿಗೆ ವೋಟ್​ ಮಾಡೋಕೆ ವೂಟ್​ ಆ್ಯಪ್​ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅಲ್ಲಿಗೆ ತೆರಳಿ ತಮ್ಮಿಷ್ಟದ ವ್ಯಕ್ತಿಗೆ ವೀಕ್ಷಕರು ವೋಟ್ ಮಾಡಬಹುದು.

ಹಾಗಾದರೆ, ವ್ಯಕ್ತಿ ಒಬ್ಬರು ಒಂದು ದಿನಕ್ಕೆ ಎಷ್ಟು ವೋಟ್​ ಮಾಡಬಹುದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಒಂದು ಖಾತೆಯಿಂದ ಓರ್ವ ವ್ಯಕ್ತಿ ಒಂದು ದಿನಕ್ಕೆ 99 ವೋಟ್​ ಚಲಾಯಿಸಬಹುದು. ಹಾಗಂತ ಒಂದೇ ವ್ಯಕ್ತಿಗೆ 99 ಮತಗಳನ್ನು ಹಾಕಬೇಕು ಎನ್ನುವ ನಿಯಮವಿಲ್ಲ. ನಿಮ್ಮಿಷ್ಟದ ಯಾವುದೇ ಸ್ಪರ್ಧಿಗೆ ನೀವು ಮತ ಹಾಕಬಹುದು. ಆದರೆ, 99ಕ್ಕಿಂತ ಹೆಚ್ಚಿನ ಮತ ಹಾಕಲು ಸಾಧ್ಯವಿಲ್ಲ.

ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದ್ದಾರೆ. ಇವರಲ್ಲಿ ಅತಿ ಹೆಚ್ಚು ವೋಟ್​ ಪಡೆದವರು ಗೆಲ್ಲುತ್ತಾರೆ.

ಇದನ್ನೂ ಓದಿ: Divya Suresh: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ ತೋರಿಸದೇ ಮನೆಯಿಂದ ಹೊರ ನಡೆದ ದಿವ್ಯಾ ಸುರೇಶ್​

ತೀವ್ರ ಸಂಕಷ್ಟದ ನಡುವೆಯೂ ಬಿಗ್​ ಬಾಸ್​ ಓಟಿಟಿಗೆ ಬರ್ತಾರಾ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ?

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!