AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Suresh: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ ತೋರಿಸದೇ ಮನೆಯಿಂದ ಹೊರ ನಡೆದ ದಿವ್ಯಾ ಸುರೇಶ್​

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದರು. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದರು.

Divya Suresh: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮುಖ ತೋರಿಸದೇ ಮನೆಯಿಂದ ಹೊರ ನಡೆದ ದಿವ್ಯಾ ಸುರೇಶ್​
ದಿವ್ಯಾ ಸುರೇಶ್​
TV9 Web
| Edited By: |

Updated on:Aug 04, 2021 | 10:33 PM

Share

ಬಿಗ್​ ಬಾಸ್​ ಫಿನಾಲೆಗೆ ಇನ್ನು ಬೆರಳೆಣಿಕೆ ದಿನಗಳು ಮಾತ್ರ ಬಾಕಿ ಇವೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ ನಡೆದಿದೆ. ಆರು ಸ್ಪರ್ಧಿಗಳ ಪೈಕಿ ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ಮನೆಯ ಸದಸ್ಯರ ಸಂಖ್ಯೆ ಐದಕ್ಕೆ ಇಳಿಕೆ ಆಗಿದೆ. 

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದರು. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದರು. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿದ್ದಾರೆ.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ.

ಫಿನಾಲೆಯಲ್ಲಿ ಉಳಿದುಕೊಳ್ಳೋದು ಐದು ಸ್ಪರ್ಧಿಗಳು. ಪ್ರತಿ ವರ್ಷವೂ ಇದೇ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಬಾರಿ ಫಿನಾಲೆ ವೀಕ್​ ಬಂದರೂ ಆರು ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ ಕಾರಣಕ್ಕೆ ಒಬ್ಬರು ಫಿನಾಲೆ ವಾರ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸುದೀಪ್​ ಹೇಳಿದ್ದರು. ಅಂತೆಯೇ ಬುಧವಾರದ ಎಪಿಸೋಡ್​​ನಲ್ಲಿ​ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಮೊದಲು ಅರವಿಂದ್​ ಸೇವ್​ ಆದರೆ, ನಂತರ ವೈಷ್ಣವಿ, ಮಂಜು, ದಿವ್ಯಾ ಉರುಡುಗ ಸೇವ್​ ಆದರು.

ಮನೆಯ ಮುಖ್ಯದ್ವಾರದ ಸಮೀಪ ಎರಡು ರೂಮ್​ ಮಾಡಲಾಗಿತ್ತು. ಇದರೊಳಗೆ ಕೊನೆಯದಾಗಿ ಉಳಿದುಕೊಂಡಿದ್ದ ಪ್ರಶಾಂತ್ ಹಾಗೂ ದಿವ್ಯಾ ಸುರೇಶ್​ ಒಳ ನಡೆದರು. ಪ್ರಶಾಂತ್​ ಇದರಿಂದ ಹೊರ ಬಂದರೆ, ದಿವ್ಯಾ ಹಾಗೆಯೇ ಮನೆಯಿಂದ ಹೊರ ನಡೆದರು. ಉಳಿದ ಸ್ಪರ್ಧಿಗಳಿಗೆ ಕೊನೆಯದಾಗಿ ಒಂದು ಬಾಯ್​ ಹೇಳೋಕೂ ಅವರ ಬಳಿ ಸಾಧ್ಯವಾಗಿಲ್ಲ. ಈ ಮೂಲಕ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದ್ದಾರೆ.

ದಿವ್ಯಾ ಸುರೇಶ್​ಗೆ ಮಂಜು ಹೆಚ್ಚು ಆಪ್ತರಾಗಿದ್ದರು. ಆದರೆ, ಸೆಕೆಂಡ್​ ಸೀಸನ್​ನಲ್ಲಿ ಮಂಜು ಜತೆ ಅಷ್ಟು ಆಪ್ತತೆ ಇರಲಿಲ್ಲ. ಇನ್ನು, ಇತ್ತೀಚೆಗೆ ಟಾಸ್ಕ್​ ಸಂದರ್ಭದಲ್ಲಿ ಸಾಕಷ್ಟು ಡಲ್​ ಆಗಿದ್ದರು ಅವರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ಶಮಂತ್​ ಬ್ರೋ ಗೌಡ ಜತೆ  ದಿವ್ಯಾ ಆಪ್ತವಾಗಿದ್ದರು. ಆದರೆ, ಅವರಿಬ್ಬರೂ ಮನೆಯಲ್ಲಿ ಇಲ್ಲ. ಇನ್ನು, ಮಂಜು ಜತೆ ದಿವ್ಯಾ ಆಪ್ತತೆ ಕಳೆದುಕೊಂಡ ನಂತರದಲ್ಲಿ ಅವರಿಗೆ ಬೀಳುವ ವೋಟ್​ ಕೂಡ ಕಡಿಮೆ ಆಗಿದೆ ಎನ್ನಲಾಗಿದೆ. ಈ ಎಲ್ಲಾ ಕಾರಣಕ್ಕೆ ದಿವ್ಯಾ ಎಲಿಮಿನೇಟ್​ ಆಗಿದ್ದಾರೆ.

ಇದನ್ನೂ ಓದಿ: Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ

Published On - 9:46 pm, Wed, 4 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ