Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ.

ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..
ಈಶಾನಿ
Follow us
ರಾಜೇಶ್ ದುಗ್ಗುಮನೆ
|

Updated on: Nov 19, 2023 | 6:57 AM

ಕಳೆದ ವಾರ ಬಿಗ್ ಬಾಸ್​ನಲ್ಲಿ ನಡೆದ ಹೈಡ್ರಾಮಾದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಹೇಳಲಾಗಿತ್ತು. ಅದು ನಿಜವಾಗಿದೆ. ಶನಿವಾರದ ಎಪಿಸೋಡ್​ನಲ್ಲಿ (ನವೆಂಬರ್ 18) ಸಾಮಾನ್ಯವಾಗಿ ಯಾರನ್ನೂ ಎಲಿಮಿನೇಟ್​ ಮಾಡುವುದಿಲ್ಲ. ಈಗ ಶನಿವಾರವೇ ಒಬ್ಬರು ಔಟ್ ಆಗಿದ್ದಾರೆ. ಈಶಾನಿ (Eshani) ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅವರು ಔಟ್ ಆಗೋಕೆ ಕಾರಣವಾದ ವಿಚಾರಗಳು ಸಾಕಷ್ಟಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ. ಹೀಗಾಗಿ, ಅವರಿಗೆ ಭಾಷೆಯೇ ದೊಡ್ಡ ಚಾಲೆಂಜ್ ಆಯಿತು.

ಇನ್ನು, ಈಶಾನಿ ಅವರ ಪರ್ಫಾರ್ಮೆನ್ಸ್ ಬಗ್ಗೆ ಸಾಕಷ್ಟು ಜನರು ಟೀಕೆ ಮಾಡಿದ್ದರು. ಈಶಾನಿ ಅವರು ಉತ್ತಮವಾಗಿ ಆಟ ಆಡುತ್ತಿಲ್ಲ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ. ಅವರು ಸದಾ ಮೈಕೆಲ್ ಅಥವಾ ವಿನಯ್ ಗ್ಯಾಂಗ್ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈ ಕಾರಣದಿಂದ ಅವರು ಹೆಚ್ಚು ಹೈಲೈಟ್ ಆಗಲೇ ಇಲ್ಲ. ಇದು ಕೂಡ ಅವರಿಗೆ ದೊಡ್ಡ ಹಿನ್ನಡೆ ಆಗಿದೆ.

ಇನ್ನು, ಈಶಾನಿ ಅವರು ರ‍್ಯಾಪರ್ ಆಗಿ ಗುರುತಿಸಿಕೊಂಡು ದೊಡ್ಮನೆಗೆ ಎಂಟ್ರಿ ಕೊಟ್ಟರು. ಆದರೆ, ದೊಡ್ಮನೆಯಲ್ಲಿ ಅವರಿಂದ ಒಂದೆರಡು ಹಾಡು ರೆಡಿ ಆಗಿದ್ದು ಬಿಟ್ಟರೆ ಮತ್ಯಾವುದೇ ರೀತಿಯಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದು ವೀಕ್ಷಕರಿಗೆ ಬೇಸರ ಮೂಡಿಸಿತ್ತು. ಇಷ್ಟು ದಿನ ಮೈಕೆಲ್ ಜೊತೆ ಅವರು ಕ್ಲೋಸ್ ಆಗಿದ್ದರು. ಹೀಗಾಗಿ, ಮೈಕೆಲ್ ಅಭಿಮಾನಿಗಳ ವೋಟ್ ಅವರಿಗೆ ಬೀಳುತ್ತಿತ್ತು. ಆದರೆ, ಕಳೆದ ವಾರ ನಡೆದ ಒಂದು ಘಟನೆಯಿಂದ ಮೈಕೆಲ್ ಅವರು ಈಶಾನಿ ಜೊತೆ ಅಂತರ ಕಾಯ್ದುಕೊಂಡರು. ಇದು ಕೂಡ ಅವರಿಗೆ ಹಿನ್ನಡೆ ಆಗಿದೆ. ಈ ಕಾರಣದಿಂದಲೇ ಈಶಾನಿ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

ಇದನ್ನೂ ಓದಿ: ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ

ಕಳೆದ ವಾರದ ಎಲಿಮಿನೇಷ್​ನಿಂದಲೇ ಈಶಾನಿ ಔಟ್ ಆಗಬೇಕಿತ್ತು. ಆದರೆ, ಅದೃಷ್ಟವಶಾತ್ ಅವರು ಉಳಿದುಕೊಂಡರು. ಇನ್ನೂ ಎಫರ್ಟ್ ಹಾಕಬೇಕಿತ್ತು ಎಂಬುದನ್ನು ಈಶಾನಿ ಅವರು ಸುದೀಪ್ ಎದುರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ