ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ.

ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..
ಈಶಾನಿ
Follow us
|

Updated on: Nov 19, 2023 | 6:57 AM

ಕಳೆದ ವಾರ ಬಿಗ್ ಬಾಸ್​ನಲ್ಲಿ ನಡೆದ ಹೈಡ್ರಾಮಾದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಹೇಳಲಾಗಿತ್ತು. ಅದು ನಿಜವಾಗಿದೆ. ಶನಿವಾರದ ಎಪಿಸೋಡ್​ನಲ್ಲಿ (ನವೆಂಬರ್ 18) ಸಾಮಾನ್ಯವಾಗಿ ಯಾರನ್ನೂ ಎಲಿಮಿನೇಟ್​ ಮಾಡುವುದಿಲ್ಲ. ಈಗ ಶನಿವಾರವೇ ಒಬ್ಬರು ಔಟ್ ಆಗಿದ್ದಾರೆ. ಈಶಾನಿ (Eshani) ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅವರು ಔಟ್ ಆಗೋಕೆ ಕಾರಣವಾದ ವಿಚಾರಗಳು ಸಾಕಷ್ಟಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ. ಹೀಗಾಗಿ, ಅವರಿಗೆ ಭಾಷೆಯೇ ದೊಡ್ಡ ಚಾಲೆಂಜ್ ಆಯಿತು.

ಇನ್ನು, ಈಶಾನಿ ಅವರ ಪರ್ಫಾರ್ಮೆನ್ಸ್ ಬಗ್ಗೆ ಸಾಕಷ್ಟು ಜನರು ಟೀಕೆ ಮಾಡಿದ್ದರು. ಈಶಾನಿ ಅವರು ಉತ್ತಮವಾಗಿ ಆಟ ಆಡುತ್ತಿಲ್ಲ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ. ಅವರು ಸದಾ ಮೈಕೆಲ್ ಅಥವಾ ವಿನಯ್ ಗ್ಯಾಂಗ್ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈ ಕಾರಣದಿಂದ ಅವರು ಹೆಚ್ಚು ಹೈಲೈಟ್ ಆಗಲೇ ಇಲ್ಲ. ಇದು ಕೂಡ ಅವರಿಗೆ ದೊಡ್ಡ ಹಿನ್ನಡೆ ಆಗಿದೆ.

ಇನ್ನು, ಈಶಾನಿ ಅವರು ರ‍್ಯಾಪರ್ ಆಗಿ ಗುರುತಿಸಿಕೊಂಡು ದೊಡ್ಮನೆಗೆ ಎಂಟ್ರಿ ಕೊಟ್ಟರು. ಆದರೆ, ದೊಡ್ಮನೆಯಲ್ಲಿ ಅವರಿಂದ ಒಂದೆರಡು ಹಾಡು ರೆಡಿ ಆಗಿದ್ದು ಬಿಟ್ಟರೆ ಮತ್ಯಾವುದೇ ರೀತಿಯಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದು ವೀಕ್ಷಕರಿಗೆ ಬೇಸರ ಮೂಡಿಸಿತ್ತು. ಇಷ್ಟು ದಿನ ಮೈಕೆಲ್ ಜೊತೆ ಅವರು ಕ್ಲೋಸ್ ಆಗಿದ್ದರು. ಹೀಗಾಗಿ, ಮೈಕೆಲ್ ಅಭಿಮಾನಿಗಳ ವೋಟ್ ಅವರಿಗೆ ಬೀಳುತ್ತಿತ್ತು. ಆದರೆ, ಕಳೆದ ವಾರ ನಡೆದ ಒಂದು ಘಟನೆಯಿಂದ ಮೈಕೆಲ್ ಅವರು ಈಶಾನಿ ಜೊತೆ ಅಂತರ ಕಾಯ್ದುಕೊಂಡರು. ಇದು ಕೂಡ ಅವರಿಗೆ ಹಿನ್ನಡೆ ಆಗಿದೆ. ಈ ಕಾರಣದಿಂದಲೇ ಈಶಾನಿ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

ಇದನ್ನೂ ಓದಿ: ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ

ಕಳೆದ ವಾರದ ಎಲಿಮಿನೇಷ್​ನಿಂದಲೇ ಈಶಾನಿ ಔಟ್ ಆಗಬೇಕಿತ್ತು. ಆದರೆ, ಅದೃಷ್ಟವಶಾತ್ ಅವರು ಉಳಿದುಕೊಂಡರು. ಇನ್ನೂ ಎಫರ್ಟ್ ಹಾಕಬೇಕಿತ್ತು ಎಂಬುದನ್ನು ಈಶಾನಿ ಅವರು ಸುದೀಪ್ ಎದುರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ