AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ.

ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..
ಈಶಾನಿ
ರಾಜೇಶ್ ದುಗ್ಗುಮನೆ
|

Updated on: Nov 19, 2023 | 6:57 AM

Share

ಕಳೆದ ವಾರ ಬಿಗ್ ಬಾಸ್​ನಲ್ಲಿ ನಡೆದ ಹೈಡ್ರಾಮಾದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಹೇಳಲಾಗಿತ್ತು. ಅದು ನಿಜವಾಗಿದೆ. ಶನಿವಾರದ ಎಪಿಸೋಡ್​ನಲ್ಲಿ (ನವೆಂಬರ್ 18) ಸಾಮಾನ್ಯವಾಗಿ ಯಾರನ್ನೂ ಎಲಿಮಿನೇಟ್​ ಮಾಡುವುದಿಲ್ಲ. ಈಗ ಶನಿವಾರವೇ ಒಬ್ಬರು ಔಟ್ ಆಗಿದ್ದಾರೆ. ಈಶಾನಿ (Eshani) ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅವರು ಔಟ್ ಆಗೋಕೆ ಕಾರಣವಾದ ವಿಚಾರಗಳು ಸಾಕಷ್ಟಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ. ಹೀಗಾಗಿ, ಅವರಿಗೆ ಭಾಷೆಯೇ ದೊಡ್ಡ ಚಾಲೆಂಜ್ ಆಯಿತು.

ಇನ್ನು, ಈಶಾನಿ ಅವರ ಪರ್ಫಾರ್ಮೆನ್ಸ್ ಬಗ್ಗೆ ಸಾಕಷ್ಟು ಜನರು ಟೀಕೆ ಮಾಡಿದ್ದರು. ಈಶಾನಿ ಅವರು ಉತ್ತಮವಾಗಿ ಆಟ ಆಡುತ್ತಿಲ್ಲ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ. ಅವರು ಸದಾ ಮೈಕೆಲ್ ಅಥವಾ ವಿನಯ್ ಗ್ಯಾಂಗ್ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈ ಕಾರಣದಿಂದ ಅವರು ಹೆಚ್ಚು ಹೈಲೈಟ್ ಆಗಲೇ ಇಲ್ಲ. ಇದು ಕೂಡ ಅವರಿಗೆ ದೊಡ್ಡ ಹಿನ್ನಡೆ ಆಗಿದೆ.

ಇನ್ನು, ಈಶಾನಿ ಅವರು ರ‍್ಯಾಪರ್ ಆಗಿ ಗುರುತಿಸಿಕೊಂಡು ದೊಡ್ಮನೆಗೆ ಎಂಟ್ರಿ ಕೊಟ್ಟರು. ಆದರೆ, ದೊಡ್ಮನೆಯಲ್ಲಿ ಅವರಿಂದ ಒಂದೆರಡು ಹಾಡು ರೆಡಿ ಆಗಿದ್ದು ಬಿಟ್ಟರೆ ಮತ್ಯಾವುದೇ ರೀತಿಯಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದು ವೀಕ್ಷಕರಿಗೆ ಬೇಸರ ಮೂಡಿಸಿತ್ತು. ಇಷ್ಟು ದಿನ ಮೈಕೆಲ್ ಜೊತೆ ಅವರು ಕ್ಲೋಸ್ ಆಗಿದ್ದರು. ಹೀಗಾಗಿ, ಮೈಕೆಲ್ ಅಭಿಮಾನಿಗಳ ವೋಟ್ ಅವರಿಗೆ ಬೀಳುತ್ತಿತ್ತು. ಆದರೆ, ಕಳೆದ ವಾರ ನಡೆದ ಒಂದು ಘಟನೆಯಿಂದ ಮೈಕೆಲ್ ಅವರು ಈಶಾನಿ ಜೊತೆ ಅಂತರ ಕಾಯ್ದುಕೊಂಡರು. ಇದು ಕೂಡ ಅವರಿಗೆ ಹಿನ್ನಡೆ ಆಗಿದೆ. ಈ ಕಾರಣದಿಂದಲೇ ಈಶಾನಿ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

ಇದನ್ನೂ ಓದಿ: ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ

ಕಳೆದ ವಾರದ ಎಲಿಮಿನೇಷ್​ನಿಂದಲೇ ಈಶಾನಿ ಔಟ್ ಆಗಬೇಕಿತ್ತು. ಆದರೆ, ಅದೃಷ್ಟವಶಾತ್ ಅವರು ಉಳಿದುಕೊಂಡರು. ಇನ್ನೂ ಎಫರ್ಟ್ ಹಾಕಬೇಕಿತ್ತು ಎಂಬುದನ್ನು ಈಶಾನಿ ಅವರು ಸುದೀಪ್ ಎದುರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ