ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ.

ಈಶಾನಿ ಬಿಗ್​ಬಾಸ್​ನಿಂದ ಔಟ್ ಆಗಲು ಕಾರಣವಾಗಿದ್ದು ಇದೇ ವಿಚಾರ..
ಈಶಾನಿ
Follow us
|

Updated on: Nov 19, 2023 | 6:57 AM

ಕಳೆದ ವಾರ ಬಿಗ್ ಬಾಸ್​ನಲ್ಲಿ ನಡೆದ ಹೈಡ್ರಾಮಾದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಹೀಗಾಗಿ, ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಹೇಳಲಾಗಿತ್ತು. ಅದು ನಿಜವಾಗಿದೆ. ಶನಿವಾರದ ಎಪಿಸೋಡ್​ನಲ್ಲಿ (ನವೆಂಬರ್ 18) ಸಾಮಾನ್ಯವಾಗಿ ಯಾರನ್ನೂ ಎಲಿಮಿನೇಟ್​ ಮಾಡುವುದಿಲ್ಲ. ಈಗ ಶನಿವಾರವೇ ಒಬ್ಬರು ಔಟ್ ಆಗಿದ್ದಾರೆ. ಈಶಾನಿ (Eshani) ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅವರು ಔಟ್ ಆಗೋಕೆ ಕಾರಣವಾದ ವಿಚಾರಗಳು ಸಾಕಷ್ಟಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮೈಕೆಲ್​​ ಹಾಗೂ ಈಶಾನಿಗೆ ಸ್ಪಷ್ಟವಾಗಿ ಕನ್ನಡ ಬರುವುದಿಲ್ಲ. ಈಶಾನಿಗೆ ಹೋಲಿಕೆ ಮಾಡಿದರೆ ಮೈಕೆಲ್ ಉತ್ತಮವಾಗಿ ಕನ್ನಡದಲ್ಲಿ ಮಾತನಾಡುತ್ತಾರೆ. ಅವರು ಕನ್ನಡ ಕಲಿಯುವ ಪ್ರಯತ್ನ ಮಾಡಿದರು. ಆದರೆ, ಈಶಾನಿ ಕಡೆಯಿಂದ ಆ ಪ್ರಯತ್ನ ಆಗಿಲ್ಲ. ಹೀಗಾಗಿ, ಅವರಿಗೆ ಭಾಷೆಯೇ ದೊಡ್ಡ ಚಾಲೆಂಜ್ ಆಯಿತು.

ಇನ್ನು, ಈಶಾನಿ ಅವರ ಪರ್ಫಾರ್ಮೆನ್ಸ್ ಬಗ್ಗೆ ಸಾಕಷ್ಟು ಜನರು ಟೀಕೆ ಮಾಡಿದ್ದರು. ಈಶಾನಿ ಅವರು ಉತ್ತಮವಾಗಿ ಆಟ ಆಡುತ್ತಿಲ್ಲ ಎನ್ನುವುದು ಜನರಿಗೆ ಸ್ಪಷ್ಟವಾಗಿದೆ. ಅವರು ಸದಾ ಮೈಕೆಲ್ ಅಥವಾ ವಿನಯ್ ಗ್ಯಾಂಗ್ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈ ಕಾರಣದಿಂದ ಅವರು ಹೆಚ್ಚು ಹೈಲೈಟ್ ಆಗಲೇ ಇಲ್ಲ. ಇದು ಕೂಡ ಅವರಿಗೆ ದೊಡ್ಡ ಹಿನ್ನಡೆ ಆಗಿದೆ.

ಇನ್ನು, ಈಶಾನಿ ಅವರು ರ‍್ಯಾಪರ್ ಆಗಿ ಗುರುತಿಸಿಕೊಂಡು ದೊಡ್ಮನೆಗೆ ಎಂಟ್ರಿ ಕೊಟ್ಟರು. ಆದರೆ, ದೊಡ್ಮನೆಯಲ್ಲಿ ಅವರಿಂದ ಒಂದೆರಡು ಹಾಡು ರೆಡಿ ಆಗಿದ್ದು ಬಿಟ್ಟರೆ ಮತ್ಯಾವುದೇ ರೀತಿಯಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದು ವೀಕ್ಷಕರಿಗೆ ಬೇಸರ ಮೂಡಿಸಿತ್ತು. ಇಷ್ಟು ದಿನ ಮೈಕೆಲ್ ಜೊತೆ ಅವರು ಕ್ಲೋಸ್ ಆಗಿದ್ದರು. ಹೀಗಾಗಿ, ಮೈಕೆಲ್ ಅಭಿಮಾನಿಗಳ ವೋಟ್ ಅವರಿಗೆ ಬೀಳುತ್ತಿತ್ತು. ಆದರೆ, ಕಳೆದ ವಾರ ನಡೆದ ಒಂದು ಘಟನೆಯಿಂದ ಮೈಕೆಲ್ ಅವರು ಈಶಾನಿ ಜೊತೆ ಅಂತರ ಕಾಯ್ದುಕೊಂಡರು. ಇದು ಕೂಡ ಅವರಿಗೆ ಹಿನ್ನಡೆ ಆಗಿದೆ. ಈ ಕಾರಣದಿಂದಲೇ ಈಶಾನಿ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

ಇದನ್ನೂ ಓದಿ: ಮೈಕೆಲ್​-ಈಶಾನಿ ಬ್ರೇಕಪ್​; ಅಳುತ್ತಿದ್ದ ತಂಗಿಗೆ ಬೈಯ್ದು ಬುದ್ಧಿ ಹೇಳಿದ ವಿನಯ್​ ಗೌಡ

ಕಳೆದ ವಾರದ ಎಲಿಮಿನೇಷ್​ನಿಂದಲೇ ಈಶಾನಿ ಔಟ್ ಆಗಬೇಕಿತ್ತು. ಆದರೆ, ಅದೃಷ್ಟವಶಾತ್ ಅವರು ಉಳಿದುಕೊಂಡರು. ಇನ್ನೂ ಎಫರ್ಟ್ ಹಾಕಬೇಕಿತ್ತು ಎಂಬುದನ್ನು ಈಶಾನಿ ಅವರು ಸುದೀಪ್ ಎದುರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್