AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದರೂ ನೀತು ಹೊರ ಹೋಗಿದ್ದು ಹೇಗೆ? ಇಲ್ಲಿದೆ ಕಾರಣ

ಬಿಗ್ ಬಾಸ್​ನಲ್ಲಿ ಯಾವಾಗಲೂ ವಾರದ ಮಧ್ಯದಲ್ಲಿ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಕ್ಯಾಪ್ಟನ್ ಆದವರಿಗೆ ಆ ವಾರ ಯಾವುದೇ ಇಮ್ಯುನಿಟಿ ಇರುವುದಿಲ್ಲ. ಅವರು ನಾಮಿನೇಟ್ ಆಗಿದ್ದರೂ ಅದನ್ನು ರದ್ದು ಮಾಡುವುದಿಲ್ಲ.

ಕ್ಯಾಪ್ಟನ್ ಆದರೂ ನೀತು ಹೊರ ಹೋಗಿದ್ದು ಹೇಗೆ? ಇಲ್ಲಿದೆ ಕಾರಣ
ನೀತು
ರಾಜೇಶ್ ದುಗ್ಗುಮನೆ
|

Updated on:Nov 27, 2023 | 7:03 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಏಳನೇ ವಾರ ನೀತು ವನಜಾಕ್ಷಿ (Neethu Vanajakshi) ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ನೀತು ವನಜಾಕ್ಷಿ ಅವರು ತೃತೀಯ ಲಿಂಗಿಗಳು. ಅವರಿಂದಲೂ ಹಲವು ವಿಚಾರಗಳು ಸಾಧ್ಯ ಎಂಬುದನ್ನು ನೀತು ಅವರು ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಎಲ್ಲರಿಂದಲೂ ಅವರು ಭೇಷ್ ಎನಿಸಿಕೊಂಡಿದ್ದಾರೆ. ನೀತು ಕ್ಯಾಪ್ಟನ್ ಆದ ಹೊರತಾಗಿಯೂ ಮನೆಯಿಂದ ಹೊರ ಹೋದರು. ಅದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್​ನಲ್ಲಿ ಯಾವಾಗಲೂ ವಾರದ ಮಧ್ಯದಲ್ಲಿ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಕ್ಯಾಪ್ಟನ್ ಆದವರಿಗೆ ಆ ವಾರ ಯಾವುದೇ ಇಮ್ಯುನಿಟಿ ಇರುವುದಿಲ್ಲ. ಅವರು ನಾಮಿನೇಟ್ ಆಗಿದ್ದರೂ ಅದನ್ನು ರದ್ದು ಮಾಡುವುದಿಲ್ಲ. ಆ ವಾರ ಅವರು ಉಳಿದುಕೊಂಡರೆ ಮುಂದಿನ ವಾರದ ನಾಮಿನೇಷನ್​ನಿಂದ ಹೊರಗೆ ಉಳಿಯುತ್ತಾರೆ. ಇದು ಬಿಗ್ ಬಾಸ್ ನಿಯಮ. ನೀತು ಅವರು ಏಳನೇ ವಾರದ ಮಧ್ಯದಲ್ಲಿ ಕ್ಯಾಪ್ಟನ್ ಆಗಿದ್ದರು. ಜೊತೆಗೆ ನಾಮಿನೇಟ್ ಕೂಡ ಆಗಿದ್ದರು. ಕ್ಯಾಪ್ಟನ್ ಆದ ಹೊರತಾಗಿಯೂ ಅವರು ಎಲಿಮಿನೇಟ್ ಆಗಿದ್ದಾರೆ. ಒಂದೊಮ್ಮೆ ಅವರು ಉಳಿದುಕೊಂಡಿದ್ದರೆ ಈ ವಾರ ನಾಮಿನೇಷನ್​ನಿಂದ ಬಚಾವ್ ಆಗುತ್ತಿದ್ದರು.

ಅತಿ ಹೆಚ್ಚು ವೋಟ್ ಪಡೆದು ಡ್ರೋನ್ ಪ್ರತಾಪ್ ಮೊದಲು ಸೇವ್ ಆದರು. ಆ ಬಳಿಕ ತನಿಷಾ, ಸಂಗೀತಾ, ವಿನಯ್ ಶನಿವಾರದ ಎಪಿಸೋಡ್​ನಲ್ಲೇ ಸೇಫ್ ಆದರು. ಭಾನುವಾರ ನಮ್ರತಾ, ತುಕಾಲಿ, ಸ್ನೇಹಿತ್ ಸೇವ್ ಆದರು. ಕೊನೆಯಲ್ಲಿ ಸಿರಿ ಹಾಗೂ ನೀತು ಉಳಿದರು. ಕೊನೆಯಲ್ಲಿ ನೀತು ಔಟ್ ಆದರು.

ಇದನ್ನೂ ಓದಿ: ‘ನಾನು ಇಲ್ಲಿರೋಕೆ ಅರ್ಹನಲ್ಲ’; ಬಿಗ್ ಬಾಸ್ ಬಿಟ್ಟು ಹೋಗುವ ಆಲೋಚನೆ ಮಾಡಿದ ವಿನಯ್

ಬಿಗ್ ಬಾಸ್​ನಲ್ಲಿ ಈಗ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆಗಿದೆ. ಕೇವಲ 11 ಮಂದಿ ಮಾತ್ರ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಈಗಾಗಲೇ 50 ಸಂಚಿಕೆ ಪೂರ್ಣಗೊಂಡಿದೆ. ಇನ್ನು ಅರ್ಧ ಜರ್ನಿ ಮಾತ್ರ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಲಿ ಎಂದು ವೀಕ್ಷಕರು ಬಯಸುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Mon, 27 November 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?