AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಆದರೂ ನೀತು ಹೊರ ಹೋಗಿದ್ದು ಹೇಗೆ? ಇಲ್ಲಿದೆ ಕಾರಣ

ಬಿಗ್ ಬಾಸ್​ನಲ್ಲಿ ಯಾವಾಗಲೂ ವಾರದ ಮಧ್ಯದಲ್ಲಿ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಕ್ಯಾಪ್ಟನ್ ಆದವರಿಗೆ ಆ ವಾರ ಯಾವುದೇ ಇಮ್ಯುನಿಟಿ ಇರುವುದಿಲ್ಲ. ಅವರು ನಾಮಿನೇಟ್ ಆಗಿದ್ದರೂ ಅದನ್ನು ರದ್ದು ಮಾಡುವುದಿಲ್ಲ.

ಕ್ಯಾಪ್ಟನ್ ಆದರೂ ನೀತು ಹೊರ ಹೋಗಿದ್ದು ಹೇಗೆ? ಇಲ್ಲಿದೆ ಕಾರಣ
ನೀತು
ರಾಜೇಶ್ ದುಗ್ಗುಮನೆ
|

Updated on:Nov 27, 2023 | 7:03 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಏಳನೇ ವಾರ ನೀತು ವನಜಾಕ್ಷಿ (Neethu Vanajakshi) ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ನೀತು ವನಜಾಕ್ಷಿ ಅವರು ತೃತೀಯ ಲಿಂಗಿಗಳು. ಅವರಿಂದಲೂ ಹಲವು ವಿಚಾರಗಳು ಸಾಧ್ಯ ಎಂಬುದನ್ನು ನೀತು ಅವರು ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಎಲ್ಲರಿಂದಲೂ ಅವರು ಭೇಷ್ ಎನಿಸಿಕೊಂಡಿದ್ದಾರೆ. ನೀತು ಕ್ಯಾಪ್ಟನ್ ಆದ ಹೊರತಾಗಿಯೂ ಮನೆಯಿಂದ ಹೊರ ಹೋದರು. ಅದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್​ನಲ್ಲಿ ಯಾವಾಗಲೂ ವಾರದ ಮಧ್ಯದಲ್ಲಿ ಕ್ಯಾಪ್ಟನ್ ಆಯ್ಕೆ ನಡೆಯುತ್ತದೆ. ಕ್ಯಾಪ್ಟನ್ ಆದವರಿಗೆ ಆ ವಾರ ಯಾವುದೇ ಇಮ್ಯುನಿಟಿ ಇರುವುದಿಲ್ಲ. ಅವರು ನಾಮಿನೇಟ್ ಆಗಿದ್ದರೂ ಅದನ್ನು ರದ್ದು ಮಾಡುವುದಿಲ್ಲ. ಆ ವಾರ ಅವರು ಉಳಿದುಕೊಂಡರೆ ಮುಂದಿನ ವಾರದ ನಾಮಿನೇಷನ್​ನಿಂದ ಹೊರಗೆ ಉಳಿಯುತ್ತಾರೆ. ಇದು ಬಿಗ್ ಬಾಸ್ ನಿಯಮ. ನೀತು ಅವರು ಏಳನೇ ವಾರದ ಮಧ್ಯದಲ್ಲಿ ಕ್ಯಾಪ್ಟನ್ ಆಗಿದ್ದರು. ಜೊತೆಗೆ ನಾಮಿನೇಟ್ ಕೂಡ ಆಗಿದ್ದರು. ಕ್ಯಾಪ್ಟನ್ ಆದ ಹೊರತಾಗಿಯೂ ಅವರು ಎಲಿಮಿನೇಟ್ ಆಗಿದ್ದಾರೆ. ಒಂದೊಮ್ಮೆ ಅವರು ಉಳಿದುಕೊಂಡಿದ್ದರೆ ಈ ವಾರ ನಾಮಿನೇಷನ್​ನಿಂದ ಬಚಾವ್ ಆಗುತ್ತಿದ್ದರು.

ಅತಿ ಹೆಚ್ಚು ವೋಟ್ ಪಡೆದು ಡ್ರೋನ್ ಪ್ರತಾಪ್ ಮೊದಲು ಸೇವ್ ಆದರು. ಆ ಬಳಿಕ ತನಿಷಾ, ಸಂಗೀತಾ, ವಿನಯ್ ಶನಿವಾರದ ಎಪಿಸೋಡ್​ನಲ್ಲೇ ಸೇಫ್ ಆದರು. ಭಾನುವಾರ ನಮ್ರತಾ, ತುಕಾಲಿ, ಸ್ನೇಹಿತ್ ಸೇವ್ ಆದರು. ಕೊನೆಯಲ್ಲಿ ಸಿರಿ ಹಾಗೂ ನೀತು ಉಳಿದರು. ಕೊನೆಯಲ್ಲಿ ನೀತು ಔಟ್ ಆದರು.

ಇದನ್ನೂ ಓದಿ: ‘ನಾನು ಇಲ್ಲಿರೋಕೆ ಅರ್ಹನಲ್ಲ’; ಬಿಗ್ ಬಾಸ್ ಬಿಟ್ಟು ಹೋಗುವ ಆಲೋಚನೆ ಮಾಡಿದ ವಿನಯ್

ಬಿಗ್ ಬಾಸ್​ನಲ್ಲಿ ಈಗ ಸ್ಪರ್ಧಿಗಳ ಸಂಖ್ಯೆ ಕಡಿಮೆ ಆಗಿದೆ. ಕೇವಲ 11 ಮಂದಿ ಮಾತ್ರ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಈಗಾಗಲೇ 50 ಸಂಚಿಕೆ ಪೂರ್ಣಗೊಂಡಿದೆ. ಇನ್ನು ಅರ್ಧ ಜರ್ನಿ ಮಾತ್ರ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಲಿ ಎಂದು ವೀಕ್ಷಕರು ಬಯಸುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Mon, 27 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ