AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಷನ್​ ಬಗ್ಗೆ ರಕ್ಷಕ್​ಗೆ ಮೊದಲೇ ಸೂಚನೆ ಕೊಟ್ಟಿದ್ದ ಕಿಚ್ಚ ಸುದೀಪ್; ಮೊದಲ ನಾಮಿನೇಷನ್​ನಲ್ಲೇ ಔಟ್

ಹೊರಗೆ ತೋರಿಸಿದಷ್ಟು ಉತ್ಸಾಹವನ್ನು ಅವರು ಬಿಗ್ ಬಾಸ್​ನಲ್ಲಿ ತೋರಿಸಿಲ್ಲ. ಬೇರೆಯವರ ನೆರಳಲ್ಲಿ ಅವರಿದ್ದರು ಎಂದರೂ ತಪ್ಪಾಗಲಾರದು. ಇದು ಅವರಿಗೆ ಮುಳುವಾಗಿದೆ. ಅವರ ಎಲಿಮಿನೇಷನ್ ಅನೇಕರಿಗೆ ಶಾಕ್ ತಂದಿದೆ.

ಎಲಿಮಿನೇಷನ್​ ಬಗ್ಗೆ ರಕ್ಷಕ್​ಗೆ ಮೊದಲೇ ಸೂಚನೆ ಕೊಟ್ಟಿದ್ದ ಕಿಚ್ಚ ಸುದೀಪ್; ಮೊದಲ ನಾಮಿನೇಷನ್​ನಲ್ಲೇ ಔಟ್
ಪ್ರತಾಪ್-ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Nov 06, 2023 | 7:49 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ನಾಲ್ಕು ವಾರಗಳು ಪೂರ್ಣಗೊಂಡಿವೆ. ಕಿಚ್ಚ ಸುದೀಪ್ ಅವರು ಎಂದಿನ ಜೋಶ್​ನಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೀಕೆಂಡ್​ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದರು ಸುದೀಪ್ (Sudeep). ಈ ಮೂಲಕ ಮನೆಯಲ್ಲಿ ನಡೆಯುತ್ತಿದ್ದ ಗುಂಪುಗಾರಿಕೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದಾರೆ. ಭಾನುವಾರ (ನವೆಂಬರ್ 5) ಬುಲೆಟ್ ರಕ್ಷಕ್ ಅವರು ಎಲಿಮಿನೇಟ್ ಆಗಿದ್ದಾರೆ. ಮೊದಲ ಮೂರು ವಾರ ಅವರು ನಾಮಿನೇಷನ್​ನಿಂದ ತಪ್ಪಿಸಿಕೊಂಡಿದ್ದರು. ಕಳೆದ ವಾರ ಅವರು ಮೊದಲ ಬಾರಿ ನಾಮಿನೇಷನ್ ಆಗಿದ್ದರು. ಮೊದಲ ನಾಮಿನೇಷನ್​ನಲ್ಲೇ ಅವರು ದೊಡ್ಮನೆಯಿಂದ ಹೊರಹೋಗಿದ್ದಾರೆ.

ರಕ್ಷಕ್ ತಮ್ಮನ್ನು ತಾವು ‘ಆರ್​ ಬಾಸ್’ ಎಂದು ಕರೆದುಕೊಂಡಿದ್ದಾರೆ. ಹೊರಗೆ ತೋರಿಸಿದಷ್ಟು ಉತ್ಸಾಹವನ್ನು ಅವರು ಬಿಗ್ ಬಾಸ್​ನಲ್ಲಿ ತೋರಿಸಿಲ್ಲ. ಬೇರೆಯವರ ನೆರಳಲ್ಲಿ ಅವರಿದ್ದರು ಎಂದರೂ ತಪ್ಪಾಗಲಾರದು. ಇದು ಅವರಿಗೆ ಮುಳುವಾಗಿದೆ. ಅವರ ಎಲಿಮಿನೇಷನ್ ಅನೇಕರಿಗೆ ಶಾಕ್ ತಂದಿದೆ. ಅವರು ಎಲಿಮಿನೇಟ್ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಶನಿವಾರದ (ನವೆಂಬರ್ 4) ಎಪಿಸೋಡ್​ನಲ್ಲಿ ಮನೆ ಮಂದಿಗೆ ಸುದೀಪ್ ಪ್ರಶ್ನೆ ಒಂದನ್ನು ಕೇಳಿದ್ದರು. ಕಳೆದ ವಾರಕ್ಕೂ ಈ ವಾರಕ್ಕೂ ಇರುವ ವ್ಯತ್ಯಾಸ ಏನು ಎಂದು ಪ್ರಶ್ನಿಸಿದ್ದರು. ರಕ್ಷಕ್ ಅವರು, ‘ನಾನು ಕಳೆದ ವಾರ ಇರುವ ರೀತಿಯಲ್ಲೇ ಇದ್ದೇನೆ’ ಎಂದು ಉತ್ತರಿಸಿದ್ದರು. ‘ಬಹಳ ಸಂತೋಷ. ಹೀಗೆಯೇ ಇರಿ. ನಮಗೂ ಎಲಿಮಿನೇಷನ್​ ತುಂಬಾ ಸುಲಭ ಆಗುತ್ತದೆ. ಬೇಗ ಬೇಗ ಎಲ್ಲರನ್ನೂ ಹೊರ ಕಳಿಸಬಹುದು’ ಎಂದಿದ್ದರು.

ಇದನ್ನೂ ಓದಿ: ನಾನು, ಪ್ರತಾಪ್, ರಕ್ಷಕ್ ಬೆಸ್ಟ್ ಕಾಂಬಿನೇಷನ್ ಎಂದ ಪ್ರಥಮ್

ಅಕ್ಟೋಬರ್ ಅಂತ್ಯದಲ್ಲಿ ನಡೆದ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ರಕ್ಷಕ್​ಗೆ ಬದಲಾಗುವಂತೆ ಹೇಳಿದ್ದರು. ‘ಹೊರಗೆ ಬುಲೆಟ್ ಮಾಡಿದಷ್ಟು ಸದ್ದು ಮನೆಯಲ್ಲಿ ಮಾಡುತ್ತಿಲ್ಲ’ ಎಂದು ಹೇಳುವ ಮೂಲಕ ಅವರಿಗೆ ಎಚ್ಚರಿಕೆ ನೀಡಿದ್ದರು. ಆದರೆ, ರಕ್ಷಕ್ ಬದಲಾಗಲೇ ಇಲ್ಲ. ಇದು ಅವರಿಗೆ ಮುಳುವಾಗಿದೆ. ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಹಾಗೂ ಲೈವ್ ವೀಕ್ಷಿಸುವ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Mon, 6 November 23

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್