AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಷನ್​ ಬಗ್ಗೆ ರಕ್ಷಕ್​ಗೆ ಮೊದಲೇ ಸೂಚನೆ ಕೊಟ್ಟಿದ್ದ ಕಿಚ್ಚ ಸುದೀಪ್; ಮೊದಲ ನಾಮಿನೇಷನ್​ನಲ್ಲೇ ಔಟ್

ಹೊರಗೆ ತೋರಿಸಿದಷ್ಟು ಉತ್ಸಾಹವನ್ನು ಅವರು ಬಿಗ್ ಬಾಸ್​ನಲ್ಲಿ ತೋರಿಸಿಲ್ಲ. ಬೇರೆಯವರ ನೆರಳಲ್ಲಿ ಅವರಿದ್ದರು ಎಂದರೂ ತಪ್ಪಾಗಲಾರದು. ಇದು ಅವರಿಗೆ ಮುಳುವಾಗಿದೆ. ಅವರ ಎಲಿಮಿನೇಷನ್ ಅನೇಕರಿಗೆ ಶಾಕ್ ತಂದಿದೆ.

ಎಲಿಮಿನೇಷನ್​ ಬಗ್ಗೆ ರಕ್ಷಕ್​ಗೆ ಮೊದಲೇ ಸೂಚನೆ ಕೊಟ್ಟಿದ್ದ ಕಿಚ್ಚ ಸುದೀಪ್; ಮೊದಲ ನಾಮಿನೇಷನ್​ನಲ್ಲೇ ಔಟ್
ಪ್ರತಾಪ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Nov 06, 2023 | 7:49 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ನಾಲ್ಕು ವಾರಗಳು ಪೂರ್ಣಗೊಂಡಿವೆ. ಕಿಚ್ಚ ಸುದೀಪ್ ಅವರು ಎಂದಿನ ಜೋಶ್​ನಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೀಕೆಂಡ್​ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದರು ಸುದೀಪ್ (Sudeep). ಈ ಮೂಲಕ ಮನೆಯಲ್ಲಿ ನಡೆಯುತ್ತಿದ್ದ ಗುಂಪುಗಾರಿಕೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದಾರೆ. ಭಾನುವಾರ (ನವೆಂಬರ್ 5) ಬುಲೆಟ್ ರಕ್ಷಕ್ ಅವರು ಎಲಿಮಿನೇಟ್ ಆಗಿದ್ದಾರೆ. ಮೊದಲ ಮೂರು ವಾರ ಅವರು ನಾಮಿನೇಷನ್​ನಿಂದ ತಪ್ಪಿಸಿಕೊಂಡಿದ್ದರು. ಕಳೆದ ವಾರ ಅವರು ಮೊದಲ ಬಾರಿ ನಾಮಿನೇಷನ್ ಆಗಿದ್ದರು. ಮೊದಲ ನಾಮಿನೇಷನ್​ನಲ್ಲೇ ಅವರು ದೊಡ್ಮನೆಯಿಂದ ಹೊರಹೋಗಿದ್ದಾರೆ.

ರಕ್ಷಕ್ ತಮ್ಮನ್ನು ತಾವು ‘ಆರ್​ ಬಾಸ್’ ಎಂದು ಕರೆದುಕೊಂಡಿದ್ದಾರೆ. ಹೊರಗೆ ತೋರಿಸಿದಷ್ಟು ಉತ್ಸಾಹವನ್ನು ಅವರು ಬಿಗ್ ಬಾಸ್​ನಲ್ಲಿ ತೋರಿಸಿಲ್ಲ. ಬೇರೆಯವರ ನೆರಳಲ್ಲಿ ಅವರಿದ್ದರು ಎಂದರೂ ತಪ್ಪಾಗಲಾರದು. ಇದು ಅವರಿಗೆ ಮುಳುವಾಗಿದೆ. ಅವರ ಎಲಿಮಿನೇಷನ್ ಅನೇಕರಿಗೆ ಶಾಕ್ ತಂದಿದೆ. ಅವರು ಎಲಿಮಿನೇಟ್ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಶನಿವಾರದ (ನವೆಂಬರ್ 4) ಎಪಿಸೋಡ್​ನಲ್ಲಿ ಮನೆ ಮಂದಿಗೆ ಸುದೀಪ್ ಪ್ರಶ್ನೆ ಒಂದನ್ನು ಕೇಳಿದ್ದರು. ಕಳೆದ ವಾರಕ್ಕೂ ಈ ವಾರಕ್ಕೂ ಇರುವ ವ್ಯತ್ಯಾಸ ಏನು ಎಂದು ಪ್ರಶ್ನಿಸಿದ್ದರು. ರಕ್ಷಕ್ ಅವರು, ‘ನಾನು ಕಳೆದ ವಾರ ಇರುವ ರೀತಿಯಲ್ಲೇ ಇದ್ದೇನೆ’ ಎಂದು ಉತ್ತರಿಸಿದ್ದರು. ‘ಬಹಳ ಸಂತೋಷ. ಹೀಗೆಯೇ ಇರಿ. ನಮಗೂ ಎಲಿಮಿನೇಷನ್​ ತುಂಬಾ ಸುಲಭ ಆಗುತ್ತದೆ. ಬೇಗ ಬೇಗ ಎಲ್ಲರನ್ನೂ ಹೊರ ಕಳಿಸಬಹುದು’ ಎಂದಿದ್ದರು.

ಇದನ್ನೂ ಓದಿ: ನಾನು, ಪ್ರತಾಪ್, ರಕ್ಷಕ್ ಬೆಸ್ಟ್ ಕಾಂಬಿನೇಷನ್ ಎಂದ ಪ್ರಥಮ್

ಅಕ್ಟೋಬರ್ ಅಂತ್ಯದಲ್ಲಿ ನಡೆದ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ರಕ್ಷಕ್​ಗೆ ಬದಲಾಗುವಂತೆ ಹೇಳಿದ್ದರು. ‘ಹೊರಗೆ ಬುಲೆಟ್ ಮಾಡಿದಷ್ಟು ಸದ್ದು ಮನೆಯಲ್ಲಿ ಮಾಡುತ್ತಿಲ್ಲ’ ಎಂದು ಹೇಳುವ ಮೂಲಕ ಅವರಿಗೆ ಎಚ್ಚರಿಕೆ ನೀಡಿದ್ದರು. ಆದರೆ, ರಕ್ಷಕ್ ಬದಲಾಗಲೇ ಇಲ್ಲ. ಇದು ಅವರಿಗೆ ಮುಳುವಾಗಿದೆ. ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಹಾಗೂ ಲೈವ್ ವೀಕ್ಷಿಸುವ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Mon, 6 November 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ