AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಅಭಿಮಾನಿಗಳೇ ಆದರೂ ಸರಿ, ಸುಮ್ಮನೆ ಬಿಡಲ್ಲ; ನಟಿಯ ಎಚ್ಚರಿಕೆ

ಖ್ಯಾತ ನಟಿ ಹಿನಾ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚುತ್ತಿರುವ ಟ್ರೋಲಿಂಗ್ ಮತ್ತು ಆನ್‌ಲೈನ್ ದ್ವೇಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳ ನಡುವಿನ ಅನಗತ್ಯ ಜಗಳ ಮತ್ತು ನಿಂದನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅತಿರೇಕವಾಗಿ ವರ್ತಿಸುವ ಅಭಿಮಾನಿಗಳನ್ನು ಬ್ಲಾಕ್ ಮಾಡುವ ಎಚ್ಚರಿಕೆ ನೀಡಿದ್ದು, ಶಾಂತಿ, ಸಭ್ಯತೆ ಮತ್ತು ಪ್ರೀತಿಯನ್ನು ಮಾತ್ರ ಹರಡುವಂತೆ ಮನವಿ ಮಾಡಿದ್ದಾರೆ. ದ್ವೇಷಕ್ಕಿಂತ ಪ್ರೀತಿ ಮತ್ತು ಕರುಣೆ ಮುಖ್ಯ ಎಂದು ಸಂದೇಶ ನೀಡಿದ್ದಾರೆ.

ನನ್ನ ಅಭಿಮಾನಿಗಳೇ ಆದರೂ ಸರಿ, ಸುಮ್ಮನೆ ಬಿಡಲ್ಲ; ನಟಿಯ ಎಚ್ಚರಿಕೆ
ಹಿನಾ ಖಾನ್
ರಾಜೇಶ್ ದುಗ್ಗುಮನೆ
|

Updated on:Jun 09, 2026 | 10:44 AM

Share

ಬಾಲಿವುಡ್ ಹಾಗೂ ಟಿವಿ ರಂಗದ ಖ್ಯಾತ ನಟಿ ಹಿನಾ ಖಾನ್ ಸೋಶಿಯಲ್ ಮೀಡಿಯಾ ಟ್ರೋಲಿಂಗ್ ಮತ್ತು ದ್ವೇಷದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಭ್ಯತೆ ಕಾಯ್ದುಕೊಳ್ಳುವಂತೆ ತಮ್ಮ ಅಭಿಮಾನಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ನನ್ನನ್ನು ಬೆಂಬಲಿಸುವ ನೆಪದಲ್ಲಿ ಇತರರನ್ನು ನಿಂದಿಸುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇತ್ತೀಚೆಗೆ ನಟಿ ಹಿನಾ ಖಾನ್ ಮತ್ತು ಶಿಲ್ಪಾ ಶಿಂದೆ ಸೋಶಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ಪೋಸ್ಟ್‌ಗಳನ್ನು ಹಾಕಿದ್ದರು. ಇಬ್ಬರೂ ಯಾರ ಹೆಸರನ್ನೂ ನೇರವಾಗಿ ಪ್ರಸ್ತಾಪಿಸದಿದ್ದರೂ, ಇವರಿಬ್ಬರ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎಂದು ನೆಟ್ಟಿಗರು ಚರ್ಚೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಅಭಿಮಾನಿಗಳ ನಡುವೆ ಜಗಳ ಶುರುವಾಗಿ, ಪರಸ್ಪರ ಟ್ರೋಲ್ ಮಾಡಲು ಆರಂಭಿಸಿದ್ದರು.

ಈ ಆನ್‌ಲೈನ್ ಟ್ರೋಲ್ ಬಗ್ಗೆ ಪ್ರತಿಕ್ರಿಯಿಸಿರುವ ಹಿನಾ ಖಾನ್, ‘ನಾವೆಲ್ಲರೂ ತಪ್ಪುಗಳನ್ನು ಮಾಡುತ್ತೇವೆ ಮತ್ತು ಸಮಯದೊಂದಿಗೆ ಬದಲಾಗುತ್ತೇವೆ. ನಾನು ಕೆಲವು ಟ್ವೀಟ್‌ಗಳನ್ನು ಗಮನಿಸಿದ್ದೇನೆ. ನಾನು ಯಾವಾಗಲೂ ದ್ವೇಷಕ್ಕಿಂತ ಪ್ರೀತಿ, ದಯೆ ಮತ್ತು ಮಾನವೀಯತೆಯನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ನೀವು ನನ್ನ ನಿಜವಾದ ಅಭಿಮಾನಿಗಳಾಗಿದ್ದರೆ ದ್ವೇಷ ಹರಡುವುದನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ್ದಾರೆ.

‘ಇತರರನ್ನು ನಿಂದಿಸುವ ಮೂರ್ಖ ಟ್ರೋಲರ್‌ಗಳಂತೆ ನಡೆದುಕೊಳ್ಳಬೇಡಿ. ನಮ್ಮ ವಾದವನ್ನು ಮಂಡಿಸಲು ನಾವು ಕೀಳು ಮಟ್ಟಕ್ಕೆ ಇಳಿಯುವ ಅಗತ್ಯವಿಲ್ಲ. ಯಾವುದೇ ದ್ವೇಷವಿಲ್ಲದೆ, ಅತ್ಯಂತ ಘನತೆಯಿಂದಲೇ ನಮ್ಮ ಅಭಿಪ್ರಾಯವನ್ನು ಪರಿಣಾಮಕಾರಿಯಾಗಿ ತಿಳಿಸಬಹುದು. ಪ್ರೀತಿ ಮತ್ತು ಕರುಣೆ ನಮ್ಮ ಶಕ್ತಿಯಾಗಬೇಕು’ ಎಂದು ಹಿನಾ ಹೇಳಿದ್ದಾರೆ.

ಇದೇ ವೇಳೆ ಅತಿಯಾಗಿ ವರ್ತಿಸುವ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿರುವ ನಟಿ,‘ನನ್ನ ಬೆಂಬಲಕ್ಕೆ ನಿಂತು ನೀವು ಇತರರ ಮೇಲೆ ದ್ವೇಷ ಉಗುಳಿದರೆ, ನೀವು ನನ್ನ ಅಭಿಮಾನಿಯಾಗಿದ್ದರೂ ಸಹ ನಾನು ನಿಮ್ಮನ್ನು ಬ್ಲಾಕ್ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನನಗೆ ನನ್ನ ಸುತ್ತಮುತ್ತ ಕೇವಲ ಸಕಾರಾತ್ಮಕತೆ ಮತ್ತು ಶಾಂತಿ ಮಾತ್ರ ಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:  ‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ

‘ಬಿಗ್ ಬಾಸ್ ಹಿಂದಿ ಸೀಸನ್ 11’ರ ಸಮಯದಿಂದಲೇ ಶಿಲ್ಪಾ ಶಿಂದೆ ಮತ್ತು ಹಿನಾ ಖಾನ್ ನಡುವೆ ದೊಡ್ಡ ಮಟ್ಟದ ಪೈಪೋಟಿ ಇತ್ತು. ಆ ಸೀಸನ್‌ನಲ್ಲಿ ಶಿಲ್ಪಾ ಶಿಂದೆ ವಿನ್ನರ್ ಆದರೆ, ಹಿನಾ ಖಾನ್ ರನ್ನರ್ ಅಪ್ ಆಗಿದ್ದರು. ಅಂದಿನಿಂದ ಇಂದಿನವರೆಗೂ ಇಬ್ಬರ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವಾರ್ ನಡೆಯುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:39 am, Tue, 9 June 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ